<p><strong>ಮಂಡ್ಯ:</strong> ಒಂದೆಡೆ, ಬಡ ಮತ್ತು ಮಧ್ಯಮ ವರ್ಗದವರಿಗೆ ಖಾಸಗಿ ಫೈನಾನ್ಸ್ಗಳ ಕಿರುಕುಳ ಹೆಚ್ಚಾಗುತ್ತಿದೆ. ಮತ್ತೊಂದೆಡೆ, ಖಾಸಗಿ ಹಣಕಾಸು ಸಂಸ್ಥೆಗಳನ್ನು ನಂಬಿ ಹಣ ಹೂಡಿಕೆ ಮಾಡಿ, ವಂಚನೆಗೊಳಗಾದ ಲಕ್ಷಾಂತರ ಗ್ರಾಮೀಣ ಮಹಿಳೆಯರು ಕಣ್ಣೀರಿಡುತ್ತಿದ್ದಾರೆ. </p>.<p>ರಾಜ್ಯದ ಖಾಸಗಿ ಹಣಕಾಸು ಸಂಸ್ಥೆ ಮತ್ತು ಕಂಪನಿಗಳಿಗೆ ‘ಅನಿಯಂತ್ರಿತ ಠೇವಣಿ’ (ಅನ್ರೆಗ್ಯುಲೇಟೆಡ್ ಡೆಪಾಸಿಟ್) ಯೋಜನೆಗಳ ಅಡಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದ ಸಂತ್ರಸ್ತೆಯರಿಂದ 7.80 ಲಕ್ಷಕ್ಕೂ ಹೆಚ್ಚು ದೂರು ಅರ್ಜಿಗಳು ರಾಜ್ಯದ ವಿವಿಧ ಜಿಲ್ಲಾಧಿಕಾರಿ ಕಚೇರಿಗಳಿಗೆ ಸಲ್ಲಿಕೆಯಾಗಿವೆ. </p>.<p>ಬೆಳಗಾವಿ- 2,71,466, ಬಾಗಲಕೋಟೆ- 89,037, ವಿಜಯಪುರ- 75,000 ಹಾಗೂ ಮಂಡ್ಯ ಜಿಲ್ಲೆಯಲ್ಲಿ 42,500 ದೂರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಜಿಲ್ಲೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ದೂರುಗಳಿವೆ.</p>.<p>ಕಳೆದ ವರ್ಷ ರಾಜ್ಯದ ವಿವಿಧ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ತೆರೆದಿದ್ದ ‘ದೂರು ಸ್ವೀಕಾರ ಕೇಂದ್ರ’ಗಳಿಗೆ ಮಹಿಳೆಯರಿಂದ ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ‘ಸರ್ಕಾರ ಪರಿಹಾರ ಕೊಡಿಸುತ್ತದೆ’ ಎಂಬ ನಿರೀಕ್ಷೆಯಲ್ಲಿ ಸಂತ್ರಸ್ತೆಯರು ಕಾಯುತ್ತಿದ್ದಾರೆ. </p>.<p><strong>ಸಕ್ಷಮ ಪ್ರಾಧಿಕಾರ ರಚನೆ:</strong></p>.<p>ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆ 2004 (ಕೆ.ಪಿ.ಐ.ಡಿ ಅಧಿನಿಯಮ) ಮತ್ತು 2019ರ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ (ಬಡ್ಸ್ ಆ್ಯಕ್ಟ್) 2019ರ ಅಡಿಯಲ್ಲಿ 127 ಕಂಪನಿಗಳನ್ನು ವಿಚಾರಣೆ ನಡೆಸಲು ಪ್ರತ್ಯೇಕ ‘ಸಕ್ಷಮ ಪ್ರಾಧಿಕಾರ’ವನ್ನು ಸರ್ಕಾರ ನೇಮಿಸಿದೆ. </p>.<p>‘ಕೆಲವು ಸಂಸ್ಥೆಗಳಿಗೆ ಸಂಬಂಧಿಸಿ ಪ್ರಾಧಿಕಾರ ನೇಮಕಾತಿಗೆ ಪ್ರಸ್ತಾವ ಸ್ವೀಕೃತವಾಗಿಲ್ಲ. ಅಂಥ ಸಂಸ್ಥೆಗಳ ವಿರುದ್ಧ ಸಲ್ಲಿಕೆಯಾಗಿರುವ ದೂರು ಅರ್ಜಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಿ, ತನಿಖೆ ನಡೆಸಿ ವರದಿ ನೀಡಿ’ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>‘ಅಧಿಕ ಬಡ್ಡಿ ಆಸೆ ತೋರಿಸಿ, ಮಹಿಳೆಯರಿಂದ ಹಣ ಕಟ್ಟಿಸಿಕೊಳ್ಳುವ ಖಾಸಗಿ ಫೈನಾನ್ಸ್ ಏಜೆಂಟರು ರಾತ್ರೋರಾತ್ರಿ ಪರಾರಿಯಾಗುತ್ತಿದ್ದಾರೆ. ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಫೈನಾನ್ಸ್ಗಳಿಗೆ ಸರ್ಕಾರ ಮೂಗುದಾರ ಹಾಕಬೇಕು’ ಎಂದು ಸಿಐಟಿಯು ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಆಗ್ರಹಿಸಿದ್ದಾರೆ. </p>.<div><blockquote>ಜಿಲ್ಲೆಯಲ್ಲಿ ಸಲ್ಲಿಕೆಯಾಗಿರುವ ದೂರು ಅರ್ಜಿಗಳನ್ನು ವಿಂಗಡಿಸಿ ಆಯಾ ಸಕ್ಷಮ ಪ್ರಾಧಿಕಾರಗಳಿಗೆ ಕಳುಹಿಸಿಕೊಡುವ ಪ್ರಕ್ರಿಯೆ ಜಾರಿಯಲ್ಲಿದೆ</blockquote><span class="attribution">ಕುಮಾರ, ಜಿಲ್ಲಾಧಿಕಾರಿ ಮಂಡ್ಯ</span></div>.<div><blockquote>ತಪ್ಪಿತಸ್ಥ ಕಂಪನಿಗಳ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತೆಯರಿಗೆ ತಕ್ಷಣ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು</blockquote><span class="attribution">ದೇವಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಜನವಾದಿ ಮಹಿಳಾ ಸಂಘ</span></div>.<p><strong>ಅತಿ ಹೆಚ್ಚು ದೂರು ಅರ್ಜಿ ಸಲ್ಲಿಕೆಯಾದ ಜಿಲ್ಲೆಗಳ ವಿವರ</strong> </p><p>1.ಬೆಳಗಾವಿ;2,71,466</p><p>2.ಬಾಗಲಕೋಟೆ;89,037</p><p>3.ವಿಜಯಪುರ;75,000</p><p>4.ಮಂಡ್ಯ;42,500</p><p>5.ಗದಗ;41,116</p><p>6.ಧಾರವಾಡ;36,489</p><p>7.ರಾಮನಗರ;33,326</p><p>8.ಶಿವಮೊಗ್ಗ;25,525</p><p>9.ಹಾಸನ;24,556</p><p>10.ಚಿಕ್ಕಬಳ್ಳಾಪುರ;22,054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಒಂದೆಡೆ, ಬಡ ಮತ್ತು ಮಧ್ಯಮ ವರ್ಗದವರಿಗೆ ಖಾಸಗಿ ಫೈನಾನ್ಸ್ಗಳ ಕಿರುಕುಳ ಹೆಚ್ಚಾಗುತ್ತಿದೆ. ಮತ್ತೊಂದೆಡೆ, ಖಾಸಗಿ ಹಣಕಾಸು ಸಂಸ್ಥೆಗಳನ್ನು ನಂಬಿ ಹಣ ಹೂಡಿಕೆ ಮಾಡಿ, ವಂಚನೆಗೊಳಗಾದ ಲಕ್ಷಾಂತರ ಗ್ರಾಮೀಣ ಮಹಿಳೆಯರು ಕಣ್ಣೀರಿಡುತ್ತಿದ್ದಾರೆ. </p>.<p>ರಾಜ್ಯದ ಖಾಸಗಿ ಹಣಕಾಸು ಸಂಸ್ಥೆ ಮತ್ತು ಕಂಪನಿಗಳಿಗೆ ‘ಅನಿಯಂತ್ರಿತ ಠೇವಣಿ’ (ಅನ್ರೆಗ್ಯುಲೇಟೆಡ್ ಡೆಪಾಸಿಟ್) ಯೋಜನೆಗಳ ಅಡಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದ ಸಂತ್ರಸ್ತೆಯರಿಂದ 7.80 ಲಕ್ಷಕ್ಕೂ ಹೆಚ್ಚು ದೂರು ಅರ್ಜಿಗಳು ರಾಜ್ಯದ ವಿವಿಧ ಜಿಲ್ಲಾಧಿಕಾರಿ ಕಚೇರಿಗಳಿಗೆ ಸಲ್ಲಿಕೆಯಾಗಿವೆ. </p>.<p>ಬೆಳಗಾವಿ- 2,71,466, ಬಾಗಲಕೋಟೆ- 89,037, ವಿಜಯಪುರ- 75,000 ಹಾಗೂ ಮಂಡ್ಯ ಜಿಲ್ಲೆಯಲ್ಲಿ 42,500 ದೂರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಜಿಲ್ಲೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ದೂರುಗಳಿವೆ.</p>.<p>ಕಳೆದ ವರ್ಷ ರಾಜ್ಯದ ವಿವಿಧ ಜಿಲ್ಲಾಧಿಕಾರಿ ಕಚೇರಿಗಳಲ್ಲಿ ತೆರೆದಿದ್ದ ‘ದೂರು ಸ್ವೀಕಾರ ಕೇಂದ್ರ’ಗಳಿಗೆ ಮಹಿಳೆಯರಿಂದ ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ‘ಸರ್ಕಾರ ಪರಿಹಾರ ಕೊಡಿಸುತ್ತದೆ’ ಎಂಬ ನಿರೀಕ್ಷೆಯಲ್ಲಿ ಸಂತ್ರಸ್ತೆಯರು ಕಾಯುತ್ತಿದ್ದಾರೆ. </p>.<p><strong>ಸಕ್ಷಮ ಪ್ರಾಧಿಕಾರ ರಚನೆ:</strong></p>.<p>ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆ 2004 (ಕೆ.ಪಿ.ಐ.ಡಿ ಅಧಿನಿಯಮ) ಮತ್ತು 2019ರ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ (ಬಡ್ಸ್ ಆ್ಯಕ್ಟ್) 2019ರ ಅಡಿಯಲ್ಲಿ 127 ಕಂಪನಿಗಳನ್ನು ವಿಚಾರಣೆ ನಡೆಸಲು ಪ್ರತ್ಯೇಕ ‘ಸಕ್ಷಮ ಪ್ರಾಧಿಕಾರ’ವನ್ನು ಸರ್ಕಾರ ನೇಮಿಸಿದೆ. </p>.<p>‘ಕೆಲವು ಸಂಸ್ಥೆಗಳಿಗೆ ಸಂಬಂಧಿಸಿ ಪ್ರಾಧಿಕಾರ ನೇಮಕಾತಿಗೆ ಪ್ರಸ್ತಾವ ಸ್ವೀಕೃತವಾಗಿಲ್ಲ. ಅಂಥ ಸಂಸ್ಥೆಗಳ ವಿರುದ್ಧ ಸಲ್ಲಿಕೆಯಾಗಿರುವ ದೂರು ಅರ್ಜಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಿ, ತನಿಖೆ ನಡೆಸಿ ವರದಿ ನೀಡಿ’ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>‘ಅಧಿಕ ಬಡ್ಡಿ ಆಸೆ ತೋರಿಸಿ, ಮಹಿಳೆಯರಿಂದ ಹಣ ಕಟ್ಟಿಸಿಕೊಳ್ಳುವ ಖಾಸಗಿ ಫೈನಾನ್ಸ್ ಏಜೆಂಟರು ರಾತ್ರೋರಾತ್ರಿ ಪರಾರಿಯಾಗುತ್ತಿದ್ದಾರೆ. ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಫೈನಾನ್ಸ್ಗಳಿಗೆ ಸರ್ಕಾರ ಮೂಗುದಾರ ಹಾಕಬೇಕು’ ಎಂದು ಸಿಐಟಿಯು ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಆಗ್ರಹಿಸಿದ್ದಾರೆ. </p>.<div><blockquote>ಜಿಲ್ಲೆಯಲ್ಲಿ ಸಲ್ಲಿಕೆಯಾಗಿರುವ ದೂರು ಅರ್ಜಿಗಳನ್ನು ವಿಂಗಡಿಸಿ ಆಯಾ ಸಕ್ಷಮ ಪ್ರಾಧಿಕಾರಗಳಿಗೆ ಕಳುಹಿಸಿಕೊಡುವ ಪ್ರಕ್ರಿಯೆ ಜಾರಿಯಲ್ಲಿದೆ</blockquote><span class="attribution">ಕುಮಾರ, ಜಿಲ್ಲಾಧಿಕಾರಿ ಮಂಡ್ಯ</span></div>.<div><blockquote>ತಪ್ಪಿತಸ್ಥ ಕಂಪನಿಗಳ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತೆಯರಿಗೆ ತಕ್ಷಣ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು</blockquote><span class="attribution">ದೇವಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಜನವಾದಿ ಮಹಿಳಾ ಸಂಘ</span></div>.<p><strong>ಅತಿ ಹೆಚ್ಚು ದೂರು ಅರ್ಜಿ ಸಲ್ಲಿಕೆಯಾದ ಜಿಲ್ಲೆಗಳ ವಿವರ</strong> </p><p>1.ಬೆಳಗಾವಿ;2,71,466</p><p>2.ಬಾಗಲಕೋಟೆ;89,037</p><p>3.ವಿಜಯಪುರ;75,000</p><p>4.ಮಂಡ್ಯ;42,500</p><p>5.ಗದಗ;41,116</p><p>6.ಧಾರವಾಡ;36,489</p><p>7.ರಾಮನಗರ;33,326</p><p>8.ಶಿವಮೊಗ್ಗ;25,525</p><p>9.ಹಾಸನ;24,556</p><p>10.ಚಿಕ್ಕಬಳ್ಳಾಪುರ;22,054</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>