<p><strong>ಮದ್ದೂರು: </strong>ಮನೆ ಆವರಣದ ಮಧ್ಯೆಯೇ ಚರಂಡಿ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಮನೆ ಮಾಲೀಕ ತಾಲ್ಲೂಕಿನ ವೈದ್ಯನಾಥಪುರ ಬಳಿಯ ಬೂದಗುಪ್ಪೆ ನಿವಾಸಿ ಜಯರಾಮ ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಮನೆಯ ಮಧ್ಯೆಯೇ ಚರಂಡಿಯನ್ನು ನಿರ್ಮಿಸಲು ಅಧಿಕಾರಿಗಳು ಮುಂದಾದಾಗ ಜಯರಾಮು ಕುಟುಂಬದವರು ವಿರೋಧ ವ್ಯಕ್ತ ಪಡಿಸಿದರು. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ನೀಡದೆ ಚರಂಡಿ ನಿರ್ಮಿಸಲು ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ. ನಮಗೆ ಸೇರಿದ ಈ ಜಾಗದಲ್ಲಿ ಮನೆಯನ್ನು ನಿರ್ಮಿಸಿಕೊಂಡಿರುವುದರ ಜೊತೆಗೆ ಇಲ್ಲಿಯೇ ರೇಷ್ಮೆ ಸಾಗಾಣಿಕೆಯನ್ನು ಕೂಡ ಮಾಡುತ್ತಿದ್ದೇವೆ ಎಂದು ಮಲನೆ ಮಾಲೀಕರು ತಿಳಿಸಿದ್ದಾರೆ.</p>.<p>ಚರಂಡಿ ನಿರ್ಮಿಸುತ್ತಿರುವ ನಮ್ಮ ಜಾಗದ ಸಮೀಪದಲ್ಲೇ ಸರ್ಕಾರಿ ಜಾಗವಿದ್ದು ಆ ಕಡೆ ಚರಂಡಿ ಕಾಮಗಾರಿಯನ್ನು ನಡೆಸಬಹುದಾಗಿತ್ತು. ಆದರೆ ಗ್ರಾಮದ ಕೆಲವರ ಕುಮ್ಮಕ್ಕಿನಿಂದ ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಈ ವಿಷಯದಲ್ಲಿ ನಮಗೆ ಕೆಲವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅವೈಜ್ಞಾನಿಕ ಚರಂಡಿ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಗ್ರಾ.ಪಂ.ನ ಅಧಿಕಾರಿಗಳ ಬೇಜವ್ದಾರಿತನವೇ ಕಾರಣವಾಗಿದ್ದು, ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಗ್ರಾ.ಪಂ.ನ ಪಿಡಿಓ ಗಮನಕ್ಕೆ ಹಲವು ಬಾರಿ ತಂದಿದ್ದರೂ ಪ್ರಯೋಜನವಾಗಿಲ್ಲವಾಗಿಲ್ಲ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ, ಉಪ ವಿಭಾಗಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.</p>.<p>ಚರಂಡಿ ನೀರು ಮನೆಯ ಒಳಗೆ ಹರಿಯುವುದರಿಂದ ಸೊಳ್ಳೆಗಳು ಹೆಚ್ಚಾಗಿ, ಸಾಂಕ್ರಾಮಿಕ ರೋಗ ಹರಡುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಇದರತ್ತ ಗಮನ ಹರಿಸಿ ಚರಂಡಿ ಕಾಮಗಾರಿಯನ್ನು ಬೇರೆಡೆಗೆ ಸ್ಥಳಾಂತರಿಸಿ ವೈಜ್ಞಾನಿಕವಾಗಿ ನಿರ್ಮಿಸಲು ಮುಂದಾಗಬೇಕು ಎಂದು ಗ್ರಾಮದ ನಿವಾಸಿ ಜಯರಾಮು ಹಾಗೂ ಹಲವರು ಒತ್ತಾಯಿಸಿದ್ದಾರೆ.</p>.<p>‘ಮನೆಯ ಮಧ್ಯೆ ಚರಂಡಿ ನಿರ್ಮಾಣ ಮಾಡುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಆಲೂರು ಗ್ರಾ.ಪಂ ಪಿಡಿಒ ಬಸವರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು: </strong>ಮನೆ ಆವರಣದ ಮಧ್ಯೆಯೇ ಚರಂಡಿ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಮನೆ ಮಾಲೀಕ ತಾಲ್ಲೂಕಿನ ವೈದ್ಯನಾಥಪುರ ಬಳಿಯ ಬೂದಗುಪ್ಪೆ ನಿವಾಸಿ ಜಯರಾಮ ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಮನೆಯ ಮಧ್ಯೆಯೇ ಚರಂಡಿಯನ್ನು ನಿರ್ಮಿಸಲು ಅಧಿಕಾರಿಗಳು ಮುಂದಾದಾಗ ಜಯರಾಮು ಕುಟುಂಬದವರು ವಿರೋಧ ವ್ಯಕ್ತ ಪಡಿಸಿದರು. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ನೀಡದೆ ಚರಂಡಿ ನಿರ್ಮಿಸಲು ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ. ನಮಗೆ ಸೇರಿದ ಈ ಜಾಗದಲ್ಲಿ ಮನೆಯನ್ನು ನಿರ್ಮಿಸಿಕೊಂಡಿರುವುದರ ಜೊತೆಗೆ ಇಲ್ಲಿಯೇ ರೇಷ್ಮೆ ಸಾಗಾಣಿಕೆಯನ್ನು ಕೂಡ ಮಾಡುತ್ತಿದ್ದೇವೆ ಎಂದು ಮಲನೆ ಮಾಲೀಕರು ತಿಳಿಸಿದ್ದಾರೆ.</p>.<p>ಚರಂಡಿ ನಿರ್ಮಿಸುತ್ತಿರುವ ನಮ್ಮ ಜಾಗದ ಸಮೀಪದಲ್ಲೇ ಸರ್ಕಾರಿ ಜಾಗವಿದ್ದು ಆ ಕಡೆ ಚರಂಡಿ ಕಾಮಗಾರಿಯನ್ನು ನಡೆಸಬಹುದಾಗಿತ್ತು. ಆದರೆ ಗ್ರಾಮದ ಕೆಲವರ ಕುಮ್ಮಕ್ಕಿನಿಂದ ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಈ ವಿಷಯದಲ್ಲಿ ನಮಗೆ ಕೆಲವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅವೈಜ್ಞಾನಿಕ ಚರಂಡಿ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಗ್ರಾ.ಪಂ.ನ ಅಧಿಕಾರಿಗಳ ಬೇಜವ್ದಾರಿತನವೇ ಕಾರಣವಾಗಿದ್ದು, ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಗ್ರಾ.ಪಂ.ನ ಪಿಡಿಓ ಗಮನಕ್ಕೆ ಹಲವು ಬಾರಿ ತಂದಿದ್ದರೂ ಪ್ರಯೋಜನವಾಗಿಲ್ಲವಾಗಿಲ್ಲ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ, ಉಪ ವಿಭಾಗಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.</p>.<p>ಚರಂಡಿ ನೀರು ಮನೆಯ ಒಳಗೆ ಹರಿಯುವುದರಿಂದ ಸೊಳ್ಳೆಗಳು ಹೆಚ್ಚಾಗಿ, ಸಾಂಕ್ರಾಮಿಕ ರೋಗ ಹರಡುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಇದರತ್ತ ಗಮನ ಹರಿಸಿ ಚರಂಡಿ ಕಾಮಗಾರಿಯನ್ನು ಬೇರೆಡೆಗೆ ಸ್ಥಳಾಂತರಿಸಿ ವೈಜ್ಞಾನಿಕವಾಗಿ ನಿರ್ಮಿಸಲು ಮುಂದಾಗಬೇಕು ಎಂದು ಗ್ರಾಮದ ನಿವಾಸಿ ಜಯರಾಮು ಹಾಗೂ ಹಲವರು ಒತ್ತಾಯಿಸಿದ್ದಾರೆ.</p>.<p>‘ಮನೆಯ ಮಧ್ಯೆ ಚರಂಡಿ ನಿರ್ಮಾಣ ಮಾಡುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಆಲೂರು ಗ್ರಾ.ಪಂ ಪಿಡಿಒ ಬಸವರಾಜು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>