ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ತವರಿನ ಸರ್ಕಾರಿ ಆಸ್ಪತ್ರೆ ವೈದ್ಯ ರಾಜೀನಾಮೆ

Last Updated 16 ಏಪ್ರಿಲ್ 2020, 12:55 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತವರು ಬೂಕನಕೆರೆಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಚ್.ಆರ್.ನವೀನ್ ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಡಾ.ನವೀನ್‌ 2019, ಆಗಸ್ಟ್‌ ತಿಂಗಳಿಂದ ರಜೆ ಮೇಲೆ ತೆರಳಿದ್ದರು. ರಜೆ ಅವಧಿ ಮುಗಿದಿದ್ದರೂ ಅವರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ನೋಟಿಸ್‌ ಜಾರಿಗೊಳಿಸಿದ್ದರು.

ಅನಧಿಕೃತವಾಗಿ ಗೈರು ಹಾಜರಾಗುತ್ತಿರುವ ವೈದ್ಯ ಕೆ.ಆರ್‌.ಪೇಟೆಯಲ್ಲಿ ಖಾಸಗಿ ಕ್ಲಿನಿಕ್‌ ತೆರೆದು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸ್ಥಳೀಯರು ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಯಲ್ಲಿ ಡಿಎಚ್‌ಒ ಮತ್ತೆ ನೋಟಿಸ್‌ ನೀಡಿ, ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದರು.

ಏಕಾಏಕಿ ಗುರುವಾರ ರಾಜೀನಾಮೆ ಸಲ್ಲಿಸಿರುವ ಡಾ.ನವೀನ್‌ 2019, ಆ.27ರಿಂದ ಪೂರ್ವಾನ್ವಯವಾಗುವಂತೆ ಅಂಗೀಕರಿಸಬೇಕು ಎಂದು ಕೋರಿದ್ದಾರೆ. ಆರೋಗ್ಯ ಸರಿ ಇಲ್ಲದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT