<p><strong>ಕೆರಗೋಡು</strong>: ಗ್ರಾಮಗಳ ಯುವಕರು ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲು ತೋರಿಸುವ ಒಲವನ್ನು ಗ್ರಾಮದ ಅಭಿವೃದ್ಧಿಗೂ ಒತ್ತು ನೀಡಬೇಕು. ಆಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ವೈದ್ಯಕೀಯ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ರವೀಂದ್ರ ಅಭಿಪ್ರಾಯಪಟ್ಟರು.</p>.<p>ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಕಾಲೊನಿಯಲ್ಲಿ ಎಚ್.ಮಲ್ಲಿಗೆರೆ ಗ್ರಾಮಸ್ಥರು ಬೀರೇಶ್ವರ ದೇವಸ್ಥಾನದ ಉದ್ಘಾಟನೆ, ಹಿರಿಯಮ್ಮ ಮತ್ತು ಏಳೂರಮ್ಮ ದೇವರ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಜೋಡಿ ಎತ್ತಿನಗಾಡಿ ಓಟ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಸುಮಾರು 40 ಜೋಡೆತ್ತುಗಳು ಸ್ಪರ್ಧೆಯಲ್ಲಿ ಭಾಗವಹಿದ್ದವು.</p>.<p>ಕಾರ್ಯಕ್ರಮದಲ್ಲಿ ರಶ್ಮಿ ಶಿವಕುಮಾರ್, ಶಂಭೂನಹಳ್ಳಿ ಕುಮಾರ್, ಚಂದ್ರಶೇಖರ್, ಉದ್ಯಮಿ ಮಂಡ್ಯ ರಮೇಶ್, ಮೇಲುಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್, ಜ್ಞಾನಪ್ಪ, ಅರುಣ್, ಮಹೇಶ್, ಎಂ.ಸಿ.ರಾಜು, ತಮ್ಮಣ್ಣ, ನಾಗರಾಜು, ಮಾಯಿಗೌಡ, ನಾಗರಾಜು ಇದ್ದರು.</p>.<p>ಆಯೋಜಕರು ಸ್ಪರ್ಧೆ ನಡೆಸಲು ಎಸ್ಪಿ, ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಪಡೆದು ಸಿದ್ಧತೆ ಮಾಡಿಕೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 50ಕ್ಕೂ ಹೆಚ್ಚು ಜೋಡೆತ್ತುಗಳ ಮಾಲೀಕರು ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದರು.</p>.<p>ಸ್ವಯಂಸೇವಾ ಸಂಘದವರು ಎತ್ತಿನಗಾಡಿ ಸ್ಪರ್ಧೆಯಲ್ಲಿ ಪ್ರಾಣಿ ಹಿಂಸೆ ನಡೆಸುತ್ತಿದ್ದು, ಸ್ಪರ್ಧೆಯನ್ನು ರದ್ದುಪಡಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಡಿದ್ದರು. ಈ ನಿಟ್ಟಿನಲ್ಲಿ ಮಂಡ್ಯ ತಶೀಸೀಲ್ದಾರ್ ಚಂದ್ರಶೇಖರ್ ಶಂ.ಗಾಳಿ ಹಾಗೂ ಕೆರಗೋಡು ಪೊಲೀಸರು ಸ್ಥಳಕ್ಕೆ ತೆರಳಿ ಕೋವಿಡ್ ನಿಯಮಾವಳಿ ಪಾಲನೆ, ಪ್ರಾಣಿಗಳಿಗೆ ಹಿಂಸೆ ಮಾಡಬಾರದು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸೌಹಾರ್ದಯುತವಾಗಿ ನಡೆಸುವಂತೆ ಆಯೋಜಕರಿಗೆ ಸೂಚನೆ ನೀಡಿದರು.</p>.<p>ಆಯೋಜಕರು, ಗ್ರಾಮದ ಹಿರಿಯರು ತಹಶೀಲ್ದಾರ್ ಸೂಚನೆ ಪಾಲಿಸುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರಗೋಡು</strong>: ಗ್ರಾಮಗಳ ಯುವಕರು ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲು ತೋರಿಸುವ ಒಲವನ್ನು ಗ್ರಾಮದ ಅಭಿವೃದ್ಧಿಗೂ ಒತ್ತು ನೀಡಬೇಕು. ಆಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ವೈದ್ಯಕೀಯ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ರವೀಂದ್ರ ಅಭಿಪ್ರಾಯಪಟ್ಟರು.</p>.<p>ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಕಾಲೊನಿಯಲ್ಲಿ ಎಚ್.ಮಲ್ಲಿಗೆರೆ ಗ್ರಾಮಸ್ಥರು ಬೀರೇಶ್ವರ ದೇವಸ್ಥಾನದ ಉದ್ಘಾಟನೆ, ಹಿರಿಯಮ್ಮ ಮತ್ತು ಏಳೂರಮ್ಮ ದೇವರ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಜೋಡಿ ಎತ್ತಿನಗಾಡಿ ಓಟ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಸುಮಾರು 40 ಜೋಡೆತ್ತುಗಳು ಸ್ಪರ್ಧೆಯಲ್ಲಿ ಭಾಗವಹಿದ್ದವು.</p>.<p>ಕಾರ್ಯಕ್ರಮದಲ್ಲಿ ರಶ್ಮಿ ಶಿವಕುಮಾರ್, ಶಂಭೂನಹಳ್ಳಿ ಕುಮಾರ್, ಚಂದ್ರಶೇಖರ್, ಉದ್ಯಮಿ ಮಂಡ್ಯ ರಮೇಶ್, ಮೇಲುಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್, ಜ್ಞಾನಪ್ಪ, ಅರುಣ್, ಮಹೇಶ್, ಎಂ.ಸಿ.ರಾಜು, ತಮ್ಮಣ್ಣ, ನಾಗರಾಜು, ಮಾಯಿಗೌಡ, ನಾಗರಾಜು ಇದ್ದರು.</p>.<p>ಆಯೋಜಕರು ಸ್ಪರ್ಧೆ ನಡೆಸಲು ಎಸ್ಪಿ, ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಪಡೆದು ಸಿದ್ಧತೆ ಮಾಡಿಕೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 50ಕ್ಕೂ ಹೆಚ್ಚು ಜೋಡೆತ್ತುಗಳ ಮಾಲೀಕರು ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದರು.</p>.<p>ಸ್ವಯಂಸೇವಾ ಸಂಘದವರು ಎತ್ತಿನಗಾಡಿ ಸ್ಪರ್ಧೆಯಲ್ಲಿ ಪ್ರಾಣಿ ಹಿಂಸೆ ನಡೆಸುತ್ತಿದ್ದು, ಸ್ಪರ್ಧೆಯನ್ನು ರದ್ದುಪಡಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಡಿದ್ದರು. ಈ ನಿಟ್ಟಿನಲ್ಲಿ ಮಂಡ್ಯ ತಶೀಸೀಲ್ದಾರ್ ಚಂದ್ರಶೇಖರ್ ಶಂ.ಗಾಳಿ ಹಾಗೂ ಕೆರಗೋಡು ಪೊಲೀಸರು ಸ್ಥಳಕ್ಕೆ ತೆರಳಿ ಕೋವಿಡ್ ನಿಯಮಾವಳಿ ಪಾಲನೆ, ಪ್ರಾಣಿಗಳಿಗೆ ಹಿಂಸೆ ಮಾಡಬಾರದು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸೌಹಾರ್ದಯುತವಾಗಿ ನಡೆಸುವಂತೆ ಆಯೋಜಕರಿಗೆ ಸೂಚನೆ ನೀಡಿದರು.</p>.<p>ಆಯೋಜಕರು, ಗ್ರಾಮದ ಹಿರಿಯರು ತಹಶೀಲ್ದಾರ್ ಸೂಚನೆ ಪಾಲಿಸುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>