ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಓಡಾಟ

Last Updated 10 ಏಪ್ರಿಲ್ 2021, 4:45 IST
ಅಕ್ಷರ ಗಾತ್ರ

ಮಂಡ್ಯ: ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ 3ನೇ ದಿನಕ್ಕೆ ತಲುಪಿದ್ದು ಶುಕ್ರವಾರ 40 ಸಿಬ್ಬಂದಿ ಕರ್ತವ್ಯಕ್ಕೆ ಹಾಜ ರಾದರು. 20 ಮಾರ್ಗಗಳಲ್ಲಿ ಭದ್ರತೆಯ ನಡುವೆ ಕೆಎಸ್‌ಆರ್‌ಟಿಸಿ ಬಸ್‌ಗಳು ಓಡಾಡಿದವು.

3 ದಿನಗಳಿಂದ ಮೈಸೂರು, ಬೆಂಗಳೂರು ಕಡೆಗೆ ಸಾರಿಗೆ ಸಂಸ್ಥೆ ಬಸ್‌ ಇರಲಿಲ್ಲ. ಆದರೆ ಶುಕ್ರವಾರ ಮೈಸೂರಿಗೆ ಬಸ್‌ ತೆರಳಿದವು, ಇದರಿಂದ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಬೆಂಗಳೂರಿಗೆ ಇನ್ನೂ ಬಸ್‌ ಸೇವೆ ಆರಂಭವಾಗಿಲ್ಲ. ಪ್ರಯಾಣಿ ಕರು ಖಾಸಗಿ ಬಸ್‌ಗಳಲ್ಲೇ ಓಡಾಟ ಮುಂದುವರಿಸಿದ್ದಾರೆ. ಬಹು ತೇಕ ಖಾಸಗಿ ಬಸ್‌ಗಳು ಬೆಂಗಳೂರಿಗೆ ಮಾತ್ರ ಹೋಗುತ್ತಿವೆ ಸಂಸ್ಥೆ ಸಿಬ್ಬಂದಿ ತಿಳಿಸಿದರು.

ನಿವೃತ್ತ ಸಿಬ್ಬಂದಿಗೆ ಮನವಿ: ಸರ್ಕಾರದ ಸೂಚನೆಯಂತೆ ನಿವೃತ್ತ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗು ವಂತೆ ಮನವಿ ಮಾಡಲಾಗಿದೆ. ಜಿಲ್ಲೆಯಲ್ಲೂ ಹಲವು ನಿವೃತ್ತ ಸಿಬ್ಬಂದಿಗೆ ಸೂಚನೆ ಕಳುಹಿಸಲಾಗಿದೆ.

‘ಹಲವು ಸಿಬ್ಬಂದಿಗೆ ಕರೆ ಮಾಡಿ ಮನವಿ ಮಾಡಲಾಗಿದೆ. ಒಂದೆರಡು ದಿನ ಸಮಯ ಕೇಳಿದ್ದಾರೆ. ಅವರು ಕರ್ತವ್ಯಕ್ಕೆ ಹಾಜರಾದರೆ ಮಾರ್ಗ ನೀಡಲಾಗುವುದು’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣ್‌ ಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT