<p><strong>ಮಂಡ್ಯ</strong>: ಕೃಷ್ಣರಾಜಸಾಗರ ಜಲಾಶಯದಿಂದ ಜು.10 ರಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದ್ದು, 25 ದಿನಗಳು ಕಳೆದರೂ ಮದ್ದೂರು ತಾಲ್ಲೂಕಿನ ಕೊನೆ ಭಾಗಕ್ಕೆ ಇದುವರೆಗೂ ನೀರು ತಲುಪಿಲ್ಲ. ಇದಕ್ಕೆ ಅಧಿಕಾರಿಗಳೇ ಹೊಣೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p><p>ಕಳೆದ ವರ್ಷ ರೈತರು ಬರದಿಂದ ತತ್ತರಿಸಿದ್ದರು. ಯಾವುದೇ ಬೆಳೆಗಳು ಕೈಸೆರಿಲ್ಲ. ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲ. ಆದರೆ, ಕೆಆರ್ಎಸ್ ಭರ್ತಿಯಾಗಿದೆ. ತಮಿಳುನಾಡಿಗೆ ಸಾಕಷ್ಟು ನೀರು ಹರಿದಿದೆ. ಆದರೆ, ಕಡೆ ಭಾಗಕ್ಕೆ ನೀರು ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿ ರೈತರನ್ನು ಸಂಕಷ್ಟಕ್ಕೆ ದೂಡುತಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.</p><p>ಕೆಆರ್ಎಸ್ ನಿಂದ ಮೊದಲು ಕೊನೆ ಭಾಗಕ್ಕೇ ಪೊಲೀಸರ ರಕ್ಷಣೆಯೊಂದಿಗೆ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದ್ದರು.</p><p> ಆದರೂ ಸಹ ಕೊನೆ ಭಾಗಕ್ಕೆ 25 ದಿನಗಳು ಕಳೆದರು ನೀರು ಬಂದಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ.</p><p>ನೀರು ಕಡೇ ಭಾಗಕ್ಕೆ ತಲುಪದದೇ ಇರುವುದರಿಂದ ಭೂಮಿ ಹದಗೊಳಿಸುವಿಕೆ, ಒಟ್ಟಲು ಬಿಡಲು ತೊಂದರೆ ಆಗಿದೆ. ನೀರಿನ ಅವಶ್ಯಕತೆ ಇದ್ದು ಕೂಡಲೇ ನೀರು ಹರಿಸಬೇಕು ಎಂದರು.</p><p>ಜಲಾಶಯದ ಭರ್ತಿ ಆಗಿದ್ದರೂ ಕೆಆರ್ಎಸ್ ಅಣೆಕಟ್ಟಿನಿಂದ ಕಟ್ಟು ಪದ್ಧತಿಯಲ್ಲಿ ನೀರು ಹರಿಸುವುದಾಗಿ ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆ ಹೊರಡಿಸಿ ಸರ್ಕಾರಕ್ಕೂ ಇರಿಸು ಮುರಿಸು ಮಾಡುತಿದ್ದು ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಾಯಿಸಿದರು.</p><p>ಕೇರಳ ಮತ್ತು ಕೊಡಗಿನಲ್ಲಿ ಉತ್ತಮ ಮಳೆಯಾದ ಹಿನ್ನಲೆಯಲ್ಲಿ ಕನ್ನಂಬಾಡಿಗೆ 1 ಲಕ್ಷಕ್ಕೂ ಅಧಿಕ ನೀರು ಹರಿದು ಬರುತಿದ್ದು ಅಣೆಕಟ್ಟೆ ಭರ್ತಿಯಾಗಿ ಹಲವು ದಿನಗಳು ಕಳೆದರು ಸಹ ಕೆರೆ-ಕಟ್ಟೆಗಳೂ ಭರ್ತಿಯಾಗಿಲ್ಲ. ಮೊದಲು ಕಾಲುವೆಗೆ ನೀರು ಹರಿಸಿ, ಕೆರೆಕಟ್ಟೆಗಳನ್ನು ತುಂಬಿಸಲಿ. ನಂತರ ಕಟ್ಟುಪದ್ಧತಿ ಬಗ್ಗೆ ಮಾತನಾಡಲಿ. ಬೇಜವಾಬ್ದಾರಿ ಆಗಿ ಹೇಳಿರುವ ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರನ್ನು ಅಮಾನತು ಪಡಿಸುವಂತೆ ಒತ್ತಾಯಿಸಿದ್ದಾರೆ.</p><p>ಕಳೆದ ವರ್ಷ ಮಳೆ ಇಲ್ಲದೇ ಕನ್ನಂಬಾಡಿಯಲ್ಲೂ ನೀರಿಲ್ಲದೇ ಬರ ಆವರಿಸಿತ್ತು. ಈ ಬಾರಿ ವರುಣನ ಕೃಪೆಯಿಂದ ಕೆಆರ್ಎಸ್ ಭರ್ತಿಯಾಗಿದ್ದು ಒಳ ಹರಿವು ದಿನ ಹೆಚ್ಚಳವಾಗುತಿದ್ದರು ಸಹ ನದಿಗೆ ನೀರು ಬಿಡುತ್ತಿರುವ ಅಧಿಕಾರಿಗಳು ನಾಲೆಗಳಿಗೆ ನೀರು ಹರಿಸುತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕೃಷ್ಣರಾಜಸಾಗರ ಜಲಾಶಯದಿಂದ ಜು.10 ರಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದ್ದು, 25 ದಿನಗಳು ಕಳೆದರೂ ಮದ್ದೂರು ತಾಲ್ಲೂಕಿನ ಕೊನೆ ಭಾಗಕ್ಕೆ ಇದುವರೆಗೂ ನೀರು ತಲುಪಿಲ್ಲ. ಇದಕ್ಕೆ ಅಧಿಕಾರಿಗಳೇ ಹೊಣೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p><p>ಕಳೆದ ವರ್ಷ ರೈತರು ಬರದಿಂದ ತತ್ತರಿಸಿದ್ದರು. ಯಾವುದೇ ಬೆಳೆಗಳು ಕೈಸೆರಿಲ್ಲ. ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲ. ಆದರೆ, ಕೆಆರ್ಎಸ್ ಭರ್ತಿಯಾಗಿದೆ. ತಮಿಳುನಾಡಿಗೆ ಸಾಕಷ್ಟು ನೀರು ಹರಿದಿದೆ. ಆದರೆ, ಕಡೆ ಭಾಗಕ್ಕೆ ನೀರು ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿ ರೈತರನ್ನು ಸಂಕಷ್ಟಕ್ಕೆ ದೂಡುತಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.</p><p>ಕೆಆರ್ಎಸ್ ನಿಂದ ಮೊದಲು ಕೊನೆ ಭಾಗಕ್ಕೇ ಪೊಲೀಸರ ರಕ್ಷಣೆಯೊಂದಿಗೆ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದ್ದರು.</p><p> ಆದರೂ ಸಹ ಕೊನೆ ಭಾಗಕ್ಕೆ 25 ದಿನಗಳು ಕಳೆದರು ನೀರು ಬಂದಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ.</p><p>ನೀರು ಕಡೇ ಭಾಗಕ್ಕೆ ತಲುಪದದೇ ಇರುವುದರಿಂದ ಭೂಮಿ ಹದಗೊಳಿಸುವಿಕೆ, ಒಟ್ಟಲು ಬಿಡಲು ತೊಂದರೆ ಆಗಿದೆ. ನೀರಿನ ಅವಶ್ಯಕತೆ ಇದ್ದು ಕೂಡಲೇ ನೀರು ಹರಿಸಬೇಕು ಎಂದರು.</p><p>ಜಲಾಶಯದ ಭರ್ತಿ ಆಗಿದ್ದರೂ ಕೆಆರ್ಎಸ್ ಅಣೆಕಟ್ಟಿನಿಂದ ಕಟ್ಟು ಪದ್ಧತಿಯಲ್ಲಿ ನೀರು ಹರಿಸುವುದಾಗಿ ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆ ಹೊರಡಿಸಿ ಸರ್ಕಾರಕ್ಕೂ ಇರಿಸು ಮುರಿಸು ಮಾಡುತಿದ್ದು ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಾಯಿಸಿದರು.</p><p>ಕೇರಳ ಮತ್ತು ಕೊಡಗಿನಲ್ಲಿ ಉತ್ತಮ ಮಳೆಯಾದ ಹಿನ್ನಲೆಯಲ್ಲಿ ಕನ್ನಂಬಾಡಿಗೆ 1 ಲಕ್ಷಕ್ಕೂ ಅಧಿಕ ನೀರು ಹರಿದು ಬರುತಿದ್ದು ಅಣೆಕಟ್ಟೆ ಭರ್ತಿಯಾಗಿ ಹಲವು ದಿನಗಳು ಕಳೆದರು ಸಹ ಕೆರೆ-ಕಟ್ಟೆಗಳೂ ಭರ್ತಿಯಾಗಿಲ್ಲ. ಮೊದಲು ಕಾಲುವೆಗೆ ನೀರು ಹರಿಸಿ, ಕೆರೆಕಟ್ಟೆಗಳನ್ನು ತುಂಬಿಸಲಿ. ನಂತರ ಕಟ್ಟುಪದ್ಧತಿ ಬಗ್ಗೆ ಮಾತನಾಡಲಿ. ಬೇಜವಾಬ್ದಾರಿ ಆಗಿ ಹೇಳಿರುವ ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರನ್ನು ಅಮಾನತು ಪಡಿಸುವಂತೆ ಒತ್ತಾಯಿಸಿದ್ದಾರೆ.</p><p>ಕಳೆದ ವರ್ಷ ಮಳೆ ಇಲ್ಲದೇ ಕನ್ನಂಬಾಡಿಯಲ್ಲೂ ನೀರಿಲ್ಲದೇ ಬರ ಆವರಿಸಿತ್ತು. ಈ ಬಾರಿ ವರುಣನ ಕೃಪೆಯಿಂದ ಕೆಆರ್ಎಸ್ ಭರ್ತಿಯಾಗಿದ್ದು ಒಳ ಹರಿವು ದಿನ ಹೆಚ್ಚಳವಾಗುತಿದ್ದರು ಸಹ ನದಿಗೆ ನೀರು ಬಿಡುತ್ತಿರುವ ಅಧಿಕಾರಿಗಳು ನಾಲೆಗಳಿಗೆ ನೀರು ಹರಿಸುತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>