<p><strong>ಮಂಡ್ಯ</strong>: ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ ವಿರೋಧಿಸಿ ನಗರದಲ್ಲಿ ವಿವಿಧ ಸಂಘಟನೆಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.</p>.<p><strong>ವಿವಿಧ ಸಂಘಟನೆ ಪ್ರತಿಭಟನೆ:</strong> ನಗರದ ಜೆ.ಸಿ. ವೃತ್ತದ ಬಳಿ ಕರುನಾಡ ಸಂಘಟನೆ, ಮಹಿಳಾ ಮುನ್ನಡೆ, ಕರ್ನಾಟಕ ಜನಶಕ್ತಿ ಸಂಘಟನೆ, ಜಾಗೃತ ಕರ್ನಾಟಕ, ವೈಜ್ಞಾನಿಕ ವಿಜ್ಞಾನ ಪರಿಷತ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಮೇಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸುವ ಮೂಲಕ ಪಹಲ್ಗಾಮ್ ಘಟನೆಯನ್ನು ತೀವ್ರವಾಗಿ ಖಂಡಿಸಿದರು.</p>.<p>2019ರಲ್ಲಿ ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಬಾಂಬ್ ಸ್ಫೋಟದಲ್ಲಿ 40 ಮಂದಿ ಭಾರತೀಯ ಸೈನಿಕರು ಬಲಿಯಾದರು. 2020ರ ಮೇನಲ್ಲಿ ಗಲ್ವಾನ್ ಕಣಿವೆಯಲ್ಲಿ ಚೀನಾ ನಡೆಸಿದ ದಾಳಿಯಲ್ಲಿ ನಮ್ಮ ದೇಶದ 20 ಸೈನಿಕರು ವೀರ ಮರಣವನ್ನಪ್ಪಿದರು. ಈ ಎರಡೂ ಪ್ರಕರಣಗಳಲ್ಲಿ ಹತ್ಯೆಗೀಡಾದ ಸೈನಿಕರಿಗೆ ಇನ್ನೂ ಸರಿಯಾದ ನ್ಯಾಯ ಸಿಕ್ಕಿಲ್ಲ. ಈಗ ಕಾಶ್ಮೀರದ ಪಹಲ್ಗಾಮ್ನಲ್ಲಿ 28 ಮಂದಿ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ. ಇವರೆಲ್ಲ ಹತ್ಯೆಯ ಹಿಂದೆ ಭದ್ರತಾ ವೈಫಲ್ಯವೂ ಇದ್ದು, ಈ ಬಗ್ಗೆ ಆಡಳಿತರೂಢರಿಗೆ ಪ್ರಶ್ನೆ ಕೇಳಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಸುನಂದಾ ಜಯರಾಂ, ಕೃಷ್ಣಪ್ರಕಾಶ್, ಬಿ.ಟಿ. ವಿಶ್ವನಾಥ್, ನಾಗಣ್ಣಗೌಡ, ವಿನಯ್, ರಾಜೇಂದ್ರಬಾಬು, ಸಿದ್ದರಾಜು, ಪೂರ್ಣಿಮಾ, ಮಂಗಲ ಲಂಕೇಶ್ ಭಾಗವಹಿಸಿದ್ದರು.</p>.<p><strong>ಬಿಜೆಪಿ ಫಂಜಿನ ಮೆರವಣಿಗೆ:</strong> ನಗರದ ಮಹಾವೀರ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಉಗ್ರರ ವಿರುದ್ಧ ಘೋಷಣೆ ಕೂಗಿ ಮೇಣದ ಬತ್ತಿ ಹಿಡಿದು ಜೆ.ಸಿ.ವೃತ್ತದವರೆಗೂ ಮೆರವಣಿಗೆ ನಡೆಸಿದರು.</p>.<p>ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮುಖಂಡರಾದ ಶಿವಕುಮಾರ ಆರಾಧ್ಯ, ಭೀಮೇಶ್, ಮಹಂತಪ್ಪ, ಚಂದ್ರು, ರಮೇಶ್, ವೇಂಕಟೇಶ್, ನಂದೀಶ್, ಸಚಿನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ ವಿರೋಧಿಸಿ ನಗರದಲ್ಲಿ ವಿವಿಧ ಸಂಘಟನೆಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.</p>.<p><strong>ವಿವಿಧ ಸಂಘಟನೆ ಪ್ರತಿಭಟನೆ:</strong> ನಗರದ ಜೆ.ಸಿ. ವೃತ್ತದ ಬಳಿ ಕರುನಾಡ ಸಂಘಟನೆ, ಮಹಿಳಾ ಮುನ್ನಡೆ, ಕರ್ನಾಟಕ ಜನಶಕ್ತಿ ಸಂಘಟನೆ, ಜಾಗೃತ ಕರ್ನಾಟಕ, ವೈಜ್ಞಾನಿಕ ವಿಜ್ಞಾನ ಪರಿಷತ್ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಮೇಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸುವ ಮೂಲಕ ಪಹಲ್ಗಾಮ್ ಘಟನೆಯನ್ನು ತೀವ್ರವಾಗಿ ಖಂಡಿಸಿದರು.</p>.<p>2019ರಲ್ಲಿ ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಬಾಂಬ್ ಸ್ಫೋಟದಲ್ಲಿ 40 ಮಂದಿ ಭಾರತೀಯ ಸೈನಿಕರು ಬಲಿಯಾದರು. 2020ರ ಮೇನಲ್ಲಿ ಗಲ್ವಾನ್ ಕಣಿವೆಯಲ್ಲಿ ಚೀನಾ ನಡೆಸಿದ ದಾಳಿಯಲ್ಲಿ ನಮ್ಮ ದೇಶದ 20 ಸೈನಿಕರು ವೀರ ಮರಣವನ್ನಪ್ಪಿದರು. ಈ ಎರಡೂ ಪ್ರಕರಣಗಳಲ್ಲಿ ಹತ್ಯೆಗೀಡಾದ ಸೈನಿಕರಿಗೆ ಇನ್ನೂ ಸರಿಯಾದ ನ್ಯಾಯ ಸಿಕ್ಕಿಲ್ಲ. ಈಗ ಕಾಶ್ಮೀರದ ಪಹಲ್ಗಾಮ್ನಲ್ಲಿ 28 ಮಂದಿ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ. ಇವರೆಲ್ಲ ಹತ್ಯೆಯ ಹಿಂದೆ ಭದ್ರತಾ ವೈಫಲ್ಯವೂ ಇದ್ದು, ಈ ಬಗ್ಗೆ ಆಡಳಿತರೂಢರಿಗೆ ಪ್ರಶ್ನೆ ಕೇಳಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಸುನಂದಾ ಜಯರಾಂ, ಕೃಷ್ಣಪ್ರಕಾಶ್, ಬಿ.ಟಿ. ವಿಶ್ವನಾಥ್, ನಾಗಣ್ಣಗೌಡ, ವಿನಯ್, ರಾಜೇಂದ್ರಬಾಬು, ಸಿದ್ದರಾಜು, ಪೂರ್ಣಿಮಾ, ಮಂಗಲ ಲಂಕೇಶ್ ಭಾಗವಹಿಸಿದ್ದರು.</p>.<p><strong>ಬಿಜೆಪಿ ಫಂಜಿನ ಮೆರವಣಿಗೆ:</strong> ನಗರದ ಮಹಾವೀರ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಉಗ್ರರ ವಿರುದ್ಧ ಘೋಷಣೆ ಕೂಗಿ ಮೇಣದ ಬತ್ತಿ ಹಿಡಿದು ಜೆ.ಸಿ.ವೃತ್ತದವರೆಗೂ ಮೆರವಣಿಗೆ ನಡೆಸಿದರು.</p>.<p>ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮುಖಂಡರಾದ ಶಿವಕುಮಾರ ಆರಾಧ್ಯ, ಭೀಮೇಶ್, ಮಹಂತಪ್ಪ, ಚಂದ್ರು, ರಮೇಶ್, ವೇಂಕಟೇಶ್, ನಂದೀಶ್, ಸಚಿನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>