ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ: ನಿಯಂತ್ರಣ ತಪ್ಪಿದ ಕಾರು, ಇಬ್ಬರ ಸಾವು

Published 4 ಮಾರ್ಚ್ 2024, 13:50 IST
Last Updated 4 ಮಾರ್ಚ್ 2024, 13:50 IST
ಅಕ್ಷರ ಗಾತ್ರ

ಮಳವಳ್ಳಿ: ತಾಲ್ಲೂಕಿನ ಬೆಳಕವಾಡಿ ಸಮೀಪದ ವಾಸುಹಳ್ಳಿ ಬೋರೆ ಬಳಿ ಭಾನುವಾರ ರಾತ್ರಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರಿನ ಗೋವಿಂದರಾಜ ನಗರ ನಿವಾಸಿ ಹೇಮಂತ್ ಯಾದವ್(17) ಸ್ಥಳದಲ್ಲಿಯೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ದರ್ಶನ್ (20) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಹೇಮಂತ್ ಯಾದವ್, ದರ್ಶನ್ ಸೇರಿದಂತೆ ಏಳು ಮಂದಿ ಯುವಕರು ಬೆಂಗಳೂರಿನಿಂದ ಕೊಳ್ಳೇಗಾಲ ಸಮೀಪದ ಚಿಕ್ಕಲ್ಲೂರಿಗೆ ಹೋಗಿ ವಾಪಸ್ ಆಗುತ್ತಿದ್ದರು. ಭಾನುವಾರ ರಾತ್ರಿ ಸುಮಾರು 1.30ಕ್ಕೆ ಬೆಳಕವಾಡಿ ಸಮೀಪದ ವಾಸುಹಳ್ಳಿ ಬೋರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮರಗಳು ಸಹ ಉರುಳಿ ಬಿದ್ದಿವೆ. ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ತೇಜಸ್, ಮಹದೇವ್, ಶ್ರೀನಿವಾಸ್, ಮತ್ತು ಅಭಿಷೇಕ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬೆಳಕವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT