ಕೊಳ್ಳೇಗಾಲದಿಂದ ವೇಗವಾಗಿ ಬರುತ್ತಿದ್ದ ಕಾರು ಎಸ್ಎಂಆರ್ ಪೆಟ್ರೋಲ್ ಬಂಕ್ ಬಳಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಜಯಂತಿ ಹಾಗೂ ಜಯರಾಮು ಅವರಿಗೆ ಗುದ್ದಿದೆ. ಇದರಿಂದ ಅವರಿಬ್ಬರು ಕೆಳಗೆ ಬಿದ್ದಿದ್ದಾರೆ. ಜಯಂತಿ ಅವರಿಗೆ ತಲೆ ಹಾಗೂ ಮೈಕೈಗೆ ತೀವ್ರ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡ ಜಯರಾಮು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.