ಕೊತ್ತತ್ತಿ, ಲಾಳನಕೆರೆ ಹಾಗೂ ಮೊತ್ತಹಳ್ಳಿ ಗ್ರಾಮದಲ್ಲಿ ಕಾಲುಬಾಯಿ ಜ್ವರ ಉಲ್ಬಣವಾಗಿದ್ದರೂ ಯಾವುದೇ ಅಧಿಕಾರಿಗಳು ಬಂದಿಲ್ಲ. ಪ್ರತಿದಿನ ಒಂದಲ್ಲ ಒಂದು ಜಾನುವಾರುಗಳು ಮೃತಪಡುತ್ತಿವೆ. ಈ ಭಾಗದ ಪಶು ವೈದ್ಯ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ಇರುವುದು, ರಾಸುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕದಿರುವುದು ರೋಗ ಉಲ್ಬಣವಾಗಲು ಕಾರಣ ಎಂದು ಗ್ರಾಮಸ್ಥರು ದೂರುತ್ತಾರೆ.