<p><strong>ಕೆಆರ್ಎಸ್ (ಮಂಡ್ಯ):</strong> ಉತ್ತರ ಭಾರತದ ಕಾಶಿ ಕ್ಷೇತ್ರ ಹೇಗೆ ಗಂಗಾರತಿಗೆ ಪ್ರಸಿದ್ಧಿ ಹೊಂದಿದೆಯೋ ಅದೇ ರೀತಿ ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ನಡೆಯಲಿರುವ ‘ಕಾವೇರಿ ಆರತಿ’ ಕೂಡ ಪ್ರಸಿದ್ಧಿಯಾಗಲಿದೆ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ ನುಡಿದರು.</p>.<p>ಕೆಆರ್ಎಸ್ ಬೃಂದಾವನ ಉದ್ಯಾನದಲ್ಲಿ 2ನೇ ದಿನವಾದ ಶನಿವಾರ ‘ಕಾವೇರಿ ಆರತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾವೇರಿ ಆರತಿ ಕಲ್ಪನೆಯೂ ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಕ್ಕಂತಾಗಲಿದೆ. ಅವರ ಈ ವಿಶೇಷ ಕನಸು ನನಸು ಮಾಡುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ‘ಕಾವೇರಿ ಆರತಿ’ ಕಾಶಿ ಕ್ಷೇತ್ರದಂತೆ ಪ್ರಸಿದ್ಧಿ ಪಡೆಯಲಿದೆ ಎಂದರು.</p>.<p>ಪಂಚಭೂತಗಳಲ್ಲಿ ಜಲದೇವತೆ ಕೂಡ ಒಂದು. ಕನ್ನಡ ನಾಡಿನ ಜೀವನದಿ ಕಾವೇರಿಗೆ ‘ಕಾವೇರಿ ಆರತಿ’ ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದರ ಜೊತೆಗೆ ಕಾವೇರಿ ಕಲುಷಿತವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಕೂಡ ಎಲ್ಲರ ಮೇಲಿದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ‘ಕಾವೇರಿ ಆರತಿ’ ಹೊಸ ಪರಂಪರೆಯನ್ನು ಸೃಷ್ಟಿಸಿದೆ. ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಕಾರ್ಯ ಅತ್ಯಂತ ಪವಿತ್ರ ಕಾರ್ಯ. ಬದುಕಿಗೆ ಹೊಸ ಭರವಸೆಯ ಬೆಳಕನ್ನು ಕಾವೇರಿ ಮೂಡಿಸುತ್ತಿದ್ದಾಳೆ. ಮನರಂಜನೆ ಜೊತೆಗೆ ಕಲಾವಿದರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ನಾನಾ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.</p>.<p>ಉತ್ತರ ಮತ್ತು ದಕ್ಷಿಣ ಭಾರತ ಸಂಪ್ರದಾಯದ ಸಮ್ಮಿಲನದಲ್ಲಿ ಕೆಆರ್ಎಸ್ ಬೃಂದಾವನದ ಮುಖ್ಯ ವೇದಿಕೆಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಎರಡನೇ ದಿನ ಬಹಳ ಅದ್ದೂರಿಯಾಗಿ ನೆರವೇರಿತು. ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಕಾವೇರಿ ಆರತಿ ನಡೆಯಿತು. ಬಳಿಕ ವಾರಣಾಸಿ ತಂಡದಿಂದ ಆರತಿ ಪ್ರದರ್ಶನ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p><strong>ಕನ್ನಡ ನಾಡಿನ ಜೀವನದಿ ಕಾವೇರಿ’</strong> </p><p> ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ ಕಾವೇರಿ ನಮ್ಮ ತಾಯಿ. ಕಾವೇರಿ ನಮ್ಮ ಉಸಿರು. ಕಾವೇರಿ ಆರತಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ನೆರವೇರಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾಗಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು. ಕಾವೇರಿ ದಕ್ಷಿಣ ಭಾರತದ ಸಾಂಸ್ಕೃತಿಕ ತೊಟ್ಟಿಲು. ಈ ನಾಡಿನ ಜೀವನಾಡಿ. ಸಾಂಸ್ಕೃತಿಕ ಮತ್ತು ಧಾರ್ಮಿಕತೆಯ ಪ್ರತೀಕವಾಗಿರುವ ಕಾವೇರಿ ಕರ್ನಾಟಕದ ಜೀವನದಿ. ಕೋಟ್ಯಂತರ ಜನರ ದಾಹ ನೀಗಿಸಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆಗೆ ಕಾರಣೀಭೂತಳಾಗಿದ್ದಾಳೆ. ಕಾವೇರಿ ವರ್ಷಪೂರ್ತಿ ತುಂಬಿ ಈ ನಾಡು ಸಮೃದ್ಧಿಯಿಂದ ಕೂಡಿರಲೆಂದು ಕಾವೇರಿ ಆರತಿ ಆಯೋಜಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.</p>.<p><strong>ಗ್ರಾಮೀಣ ಸೊಗಡು ಬೀರಿದ ಪ್ರದರ್ಶನ</strong> </p><p>ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮದ 2ನೇ ದಿನದಂದು ಬೃಂದಾವನದಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮದಲ್ಲಿ ಗ್ರಾಮೀಣ ಸೊಗಡಿನ ಜಾನಪದ ಕುಣಿತ ಜನಪದ ಗಾಯನಗಳು ಜನಮನ ಸೆಳೆದವು. ಕಾವೇರಿ ಆರತಿಗೂ ಮುನ್ನ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಜಾನಪದ ಕಲಾತಂಡಗಳ ನೃತ್ಯ ಪ್ರವಾಸಿಗರ ಮನ ಸೆಳೆಯಿತು. ಮಂಡ್ಯ ಜಿಲ್ಲೆಯ ಸೊಗಡಿನ ಪೂಜಾಕುಣಿತ ವೀರಭದ್ರ ವೀರಗಾಸೆ ಡೊಳ್ಳು ಕುಣಿತ ಕಂಸಾಳೆ ಯಕ್ಷಗಾನ ಕೋಲಾಟ ನೃತ್ಯಗಳು ಈ ನಾಡಿನ ಧಾರ್ಮಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರಿದಂತಿತ್ತು. ಮಾದೇಶ್ವರನನ್ನು ಹಾಡಿ ಹೊಗಳಿದ ಕಂಸಾಳೆ ನೃತ್ಯ ಮತ್ತು ಜನಪದದ ವಾದನಕ್ಕೆ ಸಭಿಕರು ಮನಸೋತರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಆರ್ಎಸ್ (ಮಂಡ್ಯ):</strong> ಉತ್ತರ ಭಾರತದ ಕಾಶಿ ಕ್ಷೇತ್ರ ಹೇಗೆ ಗಂಗಾರತಿಗೆ ಪ್ರಸಿದ್ಧಿ ಹೊಂದಿದೆಯೋ ಅದೇ ರೀತಿ ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ನಡೆಯಲಿರುವ ‘ಕಾವೇರಿ ಆರತಿ’ ಕೂಡ ಪ್ರಸಿದ್ಧಿಯಾಗಲಿದೆ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ ನುಡಿದರು.</p>.<p>ಕೆಆರ್ಎಸ್ ಬೃಂದಾವನ ಉದ್ಯಾನದಲ್ಲಿ 2ನೇ ದಿನವಾದ ಶನಿವಾರ ‘ಕಾವೇರಿ ಆರತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾವೇರಿ ಆರತಿ ಕಲ್ಪನೆಯೂ ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಕ್ಕಂತಾಗಲಿದೆ. ಅವರ ಈ ವಿಶೇಷ ಕನಸು ನನಸು ಮಾಡುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ‘ಕಾವೇರಿ ಆರತಿ’ ಕಾಶಿ ಕ್ಷೇತ್ರದಂತೆ ಪ್ರಸಿದ್ಧಿ ಪಡೆಯಲಿದೆ ಎಂದರು.</p>.<p>ಪಂಚಭೂತಗಳಲ್ಲಿ ಜಲದೇವತೆ ಕೂಡ ಒಂದು. ಕನ್ನಡ ನಾಡಿನ ಜೀವನದಿ ಕಾವೇರಿಗೆ ‘ಕಾವೇರಿ ಆರತಿ’ ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದರ ಜೊತೆಗೆ ಕಾವೇರಿ ಕಲುಷಿತವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಕೂಡ ಎಲ್ಲರ ಮೇಲಿದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ‘ಕಾವೇರಿ ಆರತಿ’ ಹೊಸ ಪರಂಪರೆಯನ್ನು ಸೃಷ್ಟಿಸಿದೆ. ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಕಾರ್ಯ ಅತ್ಯಂತ ಪವಿತ್ರ ಕಾರ್ಯ. ಬದುಕಿಗೆ ಹೊಸ ಭರವಸೆಯ ಬೆಳಕನ್ನು ಕಾವೇರಿ ಮೂಡಿಸುತ್ತಿದ್ದಾಳೆ. ಮನರಂಜನೆ ಜೊತೆಗೆ ಕಲಾವಿದರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ನಾನಾ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.</p>.<p>ಉತ್ತರ ಮತ್ತು ದಕ್ಷಿಣ ಭಾರತ ಸಂಪ್ರದಾಯದ ಸಮ್ಮಿಲನದಲ್ಲಿ ಕೆಆರ್ಎಸ್ ಬೃಂದಾವನದ ಮುಖ್ಯ ವೇದಿಕೆಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಎರಡನೇ ದಿನ ಬಹಳ ಅದ್ದೂರಿಯಾಗಿ ನೆರವೇರಿತು. ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಕಾವೇರಿ ಆರತಿ ನಡೆಯಿತು. ಬಳಿಕ ವಾರಣಾಸಿ ತಂಡದಿಂದ ಆರತಿ ಪ್ರದರ್ಶನ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p><strong>ಕನ್ನಡ ನಾಡಿನ ಜೀವನದಿ ಕಾವೇರಿ’</strong> </p><p> ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ ಕಾವೇರಿ ನಮ್ಮ ತಾಯಿ. ಕಾವೇರಿ ನಮ್ಮ ಉಸಿರು. ಕಾವೇರಿ ಆರತಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ನೆರವೇರಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾಗಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು. ಕಾವೇರಿ ದಕ್ಷಿಣ ಭಾರತದ ಸಾಂಸ್ಕೃತಿಕ ತೊಟ್ಟಿಲು. ಈ ನಾಡಿನ ಜೀವನಾಡಿ. ಸಾಂಸ್ಕೃತಿಕ ಮತ್ತು ಧಾರ್ಮಿಕತೆಯ ಪ್ರತೀಕವಾಗಿರುವ ಕಾವೇರಿ ಕರ್ನಾಟಕದ ಜೀವನದಿ. ಕೋಟ್ಯಂತರ ಜನರ ದಾಹ ನೀಗಿಸಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆಗೆ ಕಾರಣೀಭೂತಳಾಗಿದ್ದಾಳೆ. ಕಾವೇರಿ ವರ್ಷಪೂರ್ತಿ ತುಂಬಿ ಈ ನಾಡು ಸಮೃದ್ಧಿಯಿಂದ ಕೂಡಿರಲೆಂದು ಕಾವೇರಿ ಆರತಿ ಆಯೋಜಿಸಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.</p>.<p><strong>ಗ್ರಾಮೀಣ ಸೊಗಡು ಬೀರಿದ ಪ್ರದರ್ಶನ</strong> </p><p>ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮದ 2ನೇ ದಿನದಂದು ಬೃಂದಾವನದಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮದಲ್ಲಿ ಗ್ರಾಮೀಣ ಸೊಗಡಿನ ಜಾನಪದ ಕುಣಿತ ಜನಪದ ಗಾಯನಗಳು ಜನಮನ ಸೆಳೆದವು. ಕಾವೇರಿ ಆರತಿಗೂ ಮುನ್ನ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಜಾನಪದ ಕಲಾತಂಡಗಳ ನೃತ್ಯ ಪ್ರವಾಸಿಗರ ಮನ ಸೆಳೆಯಿತು. ಮಂಡ್ಯ ಜಿಲ್ಲೆಯ ಸೊಗಡಿನ ಪೂಜಾಕುಣಿತ ವೀರಭದ್ರ ವೀರಗಾಸೆ ಡೊಳ್ಳು ಕುಣಿತ ಕಂಸಾಳೆ ಯಕ್ಷಗಾನ ಕೋಲಾಟ ನೃತ್ಯಗಳು ಈ ನಾಡಿನ ಧಾರ್ಮಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರಿದಂತಿತ್ತು. ಮಾದೇಶ್ವರನನ್ನು ಹಾಡಿ ಹೊಗಳಿದ ಕಂಸಾಳೆ ನೃತ್ಯ ಮತ್ತು ಜನಪದದ ವಾದನಕ್ಕೆ ಸಭಿಕರು ಮನಸೋತರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>