<p><strong>ಮಂಡ್ಯ</strong>: ಕೆಆರ್ಎಸ್ ಬಳಿ ಕಾವೇರಿ ಆರತಿ ಮಾಡುವುದು ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನಲೆಯಲ್ಲಿ ರೈತ ಸಂಘ, ಕರುನಾಡ ಸೇವಕರು ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಸಿಹಿ ಹಂಚಿ ಶುಕ್ರವಾರ ಸಂಭ್ರಮಿಸಿದರು.</p>.<p>ನ್ಯಾಯಾಲಯದಿಂದ ತಡೆಯಾಜ್ಞೆ ವಿಷಯ ಹೊರಬರುತ್ತಿದ್ದಂತೆ ಇತ್ತ ನಗರದ ಜೆ.ಸಿ.ವೃತ್ತದ ಬಳಿ ಜಮಾವಣೆಗೊಂಡ ವಿವಿಧ ಸಂಘಟನೆಯ ಕಾರ್ಯಕರ್ತರು ರೈತರ ಪರವಾದ ಘೋಷಣೆ ಕೂಗಿದರು.</p>.<p>ರೈತ ಸಂಘದ ಮುಖಂಡ ಸೊ.ಶಿ.ಪ್ರಕಾಶ್ ಮಾತನಾಡಿ, ರಾಜ್ಯ ಸರ್ಕಾರದ ಹಟಮಾರಿತನದಿಂದ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ತರಲು ಹೊರಟಿತ್ತು. ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ರಾಜ್ಯ ಸರ್ಕಾರಕ್ಕೆ ಪರಿಸರದ ಪಾಠ ಹೇಳಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಕಾವೇರಿ ಆರತಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡುವ ಮೂಲಕ ಹೈಕೋರ್ಟ್ ರೈತರ ದನಿಯಾಗಿದೆ ಹಾಗಾಗಿ ರಾಜ್ಯ ಸರ್ಕಾರ ಕೂಡಲೆ ಬೇಷರತ್ತಾಗಿ ಯೋಜನೆಯನ್ನು ಹಿಂಪಡೆಯಬೇಕು. ಜೊತೆಗೆ ರೈತರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಶಿವಳ್ಳಿ ಚಂದ್ರು, ಎಚ್.ಡಿ.ಜಯರಾಂ, ಸಂತೋಷ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕೆಆರ್ಎಸ್ ಬಳಿ ಕಾವೇರಿ ಆರತಿ ಮಾಡುವುದು ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನಲೆಯಲ್ಲಿ ರೈತ ಸಂಘ, ಕರುನಾಡ ಸೇವಕರು ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಸಿಹಿ ಹಂಚಿ ಶುಕ್ರವಾರ ಸಂಭ್ರಮಿಸಿದರು.</p>.<p>ನ್ಯಾಯಾಲಯದಿಂದ ತಡೆಯಾಜ್ಞೆ ವಿಷಯ ಹೊರಬರುತ್ತಿದ್ದಂತೆ ಇತ್ತ ನಗರದ ಜೆ.ಸಿ.ವೃತ್ತದ ಬಳಿ ಜಮಾವಣೆಗೊಂಡ ವಿವಿಧ ಸಂಘಟನೆಯ ಕಾರ್ಯಕರ್ತರು ರೈತರ ಪರವಾದ ಘೋಷಣೆ ಕೂಗಿದರು.</p>.<p>ರೈತ ಸಂಘದ ಮುಖಂಡ ಸೊ.ಶಿ.ಪ್ರಕಾಶ್ ಮಾತನಾಡಿ, ರಾಜ್ಯ ಸರ್ಕಾರದ ಹಟಮಾರಿತನದಿಂದ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ತರಲು ಹೊರಟಿತ್ತು. ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ರಾಜ್ಯ ಸರ್ಕಾರಕ್ಕೆ ಪರಿಸರದ ಪಾಠ ಹೇಳಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಕಾವೇರಿ ಆರತಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡುವ ಮೂಲಕ ಹೈಕೋರ್ಟ್ ರೈತರ ದನಿಯಾಗಿದೆ ಹಾಗಾಗಿ ರಾಜ್ಯ ಸರ್ಕಾರ ಕೂಡಲೆ ಬೇಷರತ್ತಾಗಿ ಯೋಜನೆಯನ್ನು ಹಿಂಪಡೆಯಬೇಕು. ಜೊತೆಗೆ ರೈತರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಶಿವಳ್ಳಿ ಚಂದ್ರು, ಎಚ್.ಡಿ.ಜಯರಾಂ, ಸಂತೋಷ್ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>