<p><strong>ಶ್ರೀರಂಗಪಟ್ಟಣ</strong>: ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಬುಧವಾರ ಪಟ್ಟಣದ ಬಳಿ ಕಾವೇರಿ ನದಿಗೆ ಬಿದ್ದಿದ್ದ ವೃದ್ಧೆಯನ್ನು ಸ್ಥಳೀಯರು ರಕ್ಷಿಸಿದರು.</p><p>ಚಾಮರಾಜನಗರ ತಾಲ್ಲೂಕು ಬೆಂಡರವಾಡಿ ಗ್ರಾಮದ ದಿವಂಗತ ಮರಯ್ಯ ಅವರ ಪತ್ನಿ ಗುಂಡಮ್ಮ (70) ಅವರು ಪಟ್ಟಣದ ವೆಲ್ಲೆಸ್ಲಿ ಸೇತುವೆ ಸಮೀಪ ನದಿಗೆ ಹಾರಿದ್ದರು. </p><p>ಅದನ್ನು ಗಮನಿಸಿದ ಸ್ಥಳೀಯ ರೈತರು ತಕ್ಷಣ ಧಾವಿಸಿ ಗುಂಡಮ್ಮ ಅವರನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಟ್ಟಣ ಪೊಲೀಸ್ ಠಾಣೆಯ ಎಎಸ್ಐ ಶಿವರಾಮು ಮತ್ತು ತಂಡ ಗುಂಡಮ್ಮ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿತು.</p><p>ಕೌಟುಂಬಿಕ ಕಲಹದಿಂದ ಬೇಸತ್ತು ಗುಂಡಮ್ಮ ಮಂಗಳವಾರ ಸ್ವಗ್ರಾಮ ಬೆಂಡರವಾಡಿಯಿಂದ ಮನೆ ಬಿಟ್ಟು ಬಂದಿದ್ದರು. ಮಂಡ್ಯದಲ್ಲಿ ತಂಗಿದ್ದ ಅವರು ಬುಧವಾರ ಬೆಳಿಗ್ಗೆ ಪಟ್ಟಣಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಕಾವೇರಿ ನದಿಗೆ ಹಾರಿದ್ದರು. </p><p>‘ಅವರ ಮೊಮ್ಮಗನನ್ನು ಠಾಣೆಗೆ ಕರೆಸಿ ಗುಂಡಮ್ಮ ಅವರನ್ನು ಅವರ ಊರಿಗೆ ಕಳುಹಿಸಿಕೊಡಲಾಗಿದೆ’ ಎಂದು ಎಎಸ್ಐ ಶಿವರಾಮು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಬುಧವಾರ ಪಟ್ಟಣದ ಬಳಿ ಕಾವೇರಿ ನದಿಗೆ ಬಿದ್ದಿದ್ದ ವೃದ್ಧೆಯನ್ನು ಸ್ಥಳೀಯರು ರಕ್ಷಿಸಿದರು.</p><p>ಚಾಮರಾಜನಗರ ತಾಲ್ಲೂಕು ಬೆಂಡರವಾಡಿ ಗ್ರಾಮದ ದಿವಂಗತ ಮರಯ್ಯ ಅವರ ಪತ್ನಿ ಗುಂಡಮ್ಮ (70) ಅವರು ಪಟ್ಟಣದ ವೆಲ್ಲೆಸ್ಲಿ ಸೇತುವೆ ಸಮೀಪ ನದಿಗೆ ಹಾರಿದ್ದರು. </p><p>ಅದನ್ನು ಗಮನಿಸಿದ ಸ್ಥಳೀಯ ರೈತರು ತಕ್ಷಣ ಧಾವಿಸಿ ಗುಂಡಮ್ಮ ಅವರನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಟ್ಟಣ ಪೊಲೀಸ್ ಠಾಣೆಯ ಎಎಸ್ಐ ಶಿವರಾಮು ಮತ್ತು ತಂಡ ಗುಂಡಮ್ಮ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿತು.</p><p>ಕೌಟುಂಬಿಕ ಕಲಹದಿಂದ ಬೇಸತ್ತು ಗುಂಡಮ್ಮ ಮಂಗಳವಾರ ಸ್ವಗ್ರಾಮ ಬೆಂಡರವಾಡಿಯಿಂದ ಮನೆ ಬಿಟ್ಟು ಬಂದಿದ್ದರು. ಮಂಡ್ಯದಲ್ಲಿ ತಂಗಿದ್ದ ಅವರು ಬುಧವಾರ ಬೆಳಿಗ್ಗೆ ಪಟ್ಟಣಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಕಾವೇರಿ ನದಿಗೆ ಹಾರಿದ್ದರು. </p><p>‘ಅವರ ಮೊಮ್ಮಗನನ್ನು ಠಾಣೆಗೆ ಕರೆಸಿ ಗುಂಡಮ್ಮ ಅವರನ್ನು ಅವರ ಊರಿಗೆ ಕಳುಹಿಸಿಕೊಡಲಾಗಿದೆ’ ಎಂದು ಎಎಸ್ಐ ಶಿವರಾಮು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>