<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ಪಟ್ಟಣದ ರಂಗನಾಥನಗರದ ಶ್ರುತಿ ಎನ್. ಎಂಬವರ ಹೆಸರಿನಲ್ಲಿ ಬಿಹಾರದ ವ್ಯಕ್ತಿಯೊಬ್ಬ ದೆಹಲಿಯ ಬ್ಯಾಂಕೊಂದರಲ್ಲಿ ಖಾತೆ ತೆರೆದು ನೂರಾರು ಕೋಟಿ ರೂಪಾಯಿ ವ್ಯವಹಾರ ನಡೆಸಿರುವ ಪ್ರಕರಣದ ಬೆನ್ನತ್ತಿರುವ ಸಿಬಿಐ ಮತ್ತು ಇ.ಡಿ ಅಧಿಕಾರಿಗಳು ಮಂಗಳವಾರ ಸಂಜೆ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ರಂಗನಾಥನಗರದ ಭೈರವ ಅವರ ಪತ್ನಿ ಶೃತಿ ಅವರ ಮನೆಗೆ ಬೆಂಗಳೂರಿನಿಂದ ಬಂದ ಅಧಿಕಾರಿಗಳ ತಂಡ ಒಂದು ತಾಸಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿತು. ಅವರ ಬ್ಯಾಂಕ್ ಖಾತೆ, ಆಧಾರ್ ಚೀಟಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪಡೆದುಕೊಂಡರು.</p>.<p>ಬೆಂಗಳೂರು ವಲಯದ ಇ.ಡಿ ಅಧಿಕಾರಿ ಬಿನಯ್ಕುಮಾರ್, ಸಿಬಿಐ ಅಧಿಕಾರಿ ಎಂ. ಕುಮಾರಸ್ವಾಮಿ ತಂಡ ಭೈರವ ಅವರಿಂದ ಮಾಹಿತಿ ಪಡೆದಿದೆ. ಈ ಸಂದರ್ಭದಲ್ಲಿ ಶ್ರುತಿ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.</p>.<p>‘ಅಗತ್ಯ ಬಿದ್ದರೆ ಇ.ಡಿ ಮತ್ತು ಸಿಬಿಐನ ಬೆಂಗಳೂರಿನಲ್ಲಿನ ಕಚೇರಿಗಳಿಗೆ ಅವರನ್ನು ಕರೆತರಬೇಕು ಎಂದು ಭೈರವ ಅವರಿಗೆ ತಿಳಿಸಿದ್ದು, ನೋಟಿಸ್ ಕೂಡ ನೀಡಿದ್ದಾರೆ’ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ಪಟ್ಟಣದ ರಂಗನಾಥನಗರದ ಶ್ರುತಿ ಎನ್. ಎಂಬವರ ಹೆಸರಿನಲ್ಲಿ ಬಿಹಾರದ ವ್ಯಕ್ತಿಯೊಬ್ಬ ದೆಹಲಿಯ ಬ್ಯಾಂಕೊಂದರಲ್ಲಿ ಖಾತೆ ತೆರೆದು ನೂರಾರು ಕೋಟಿ ರೂಪಾಯಿ ವ್ಯವಹಾರ ನಡೆಸಿರುವ ಪ್ರಕರಣದ ಬೆನ್ನತ್ತಿರುವ ಸಿಬಿಐ ಮತ್ತು ಇ.ಡಿ ಅಧಿಕಾರಿಗಳು ಮಂಗಳವಾರ ಸಂಜೆ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ರಂಗನಾಥನಗರದ ಭೈರವ ಅವರ ಪತ್ನಿ ಶೃತಿ ಅವರ ಮನೆಗೆ ಬೆಂಗಳೂರಿನಿಂದ ಬಂದ ಅಧಿಕಾರಿಗಳ ತಂಡ ಒಂದು ತಾಸಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿತು. ಅವರ ಬ್ಯಾಂಕ್ ಖಾತೆ, ಆಧಾರ್ ಚೀಟಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪಡೆದುಕೊಂಡರು.</p>.<p>ಬೆಂಗಳೂರು ವಲಯದ ಇ.ಡಿ ಅಧಿಕಾರಿ ಬಿನಯ್ಕುಮಾರ್, ಸಿಬಿಐ ಅಧಿಕಾರಿ ಎಂ. ಕುಮಾರಸ್ವಾಮಿ ತಂಡ ಭೈರವ ಅವರಿಂದ ಮಾಹಿತಿ ಪಡೆದಿದೆ. ಈ ಸಂದರ್ಭದಲ್ಲಿ ಶ್ರುತಿ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.</p>.<p>‘ಅಗತ್ಯ ಬಿದ್ದರೆ ಇ.ಡಿ ಮತ್ತು ಸಿಬಿಐನ ಬೆಂಗಳೂರಿನಲ್ಲಿನ ಕಚೇರಿಗಳಿಗೆ ಅವರನ್ನು ಕರೆತರಬೇಕು ಎಂದು ಭೈರವ ಅವರಿಗೆ ತಿಳಿಸಿದ್ದು, ನೋಟಿಸ್ ಕೂಡ ನೀಡಿದ್ದಾರೆ’ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>