<p><strong>ಹಲಗೂರು:</strong> ಕಳೆದ ಶೈಕ್ಷಣಿಕ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಗಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗ್ರಾಮ ಪಂಚಾಯತಿಯಿಂದ ಅಭಿನಂದಿಸಲಾಗುವುದು ಎಂದು ಹಾಡ್ಲಿ ಪಂಚಾಯತಿ ಅಧ್ಯಕ್ಷ ಎನ್.ವಿ.ಚಲುವರಾಜು ತಿಳಿಸಿದರು.</p>.<p>ಸಮೀಪದ ಮೇಗಳಾಪುರದಲ್ಲಿ ಪಂಚಾಯಿತಿ ಅನುದಾನದಲ್ಲಿ ಜೈ ಭೀಮ್ ಬಳಗಕ್ಕೆ ₹30 ಸಾವಿರ ಮೊತ್ತದ ಕುರ್ಚಿ ಮತ್ತು ಮೇಜು ವಿತರಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಶಿಕ್ಷಣ ಉತ್ತೇಜಿಸುವ ನಿಟ್ಟಿನಲ್ಲಿ ಜೂನ್ 17ರಂದು ಹಾಡ್ಲಿ-ಮೇಗಳಾಪುರ ವೃತ್ತದಲ್ಲಿರುವ ಸಂತೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಲಾಗಿದೆ. ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಮುದಾಯದ ಅರ್ಹ ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡು, ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.</p>.<p>ಜೈಭೀಮ್ ಬಳಗದ ಸದಸ್ಯರು ಗ್ರಾಮದ ಸಮುದಾಯಕ್ಕೆ ಅಗತ್ಯವಿರುವ ಸಮಾಜ ಸೇವಾ ಕಾರ್ಯ ಚಟುವಟಿಕೆ ಕೈಗೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚು ಅದ್ಯತೆ ನೀಡಬೇಖು ಎಂದು ಸಲಹೆ ನೀಡಿದರು.</p>.<p>ಪಂಚಾಯತಿಯಿಂದ ಅಂಬೇಡ್ಕರ್ ಭವನದಲ್ಲಿ ಗ್ರಂಥಾಲಯ ಮಾಡಬೇಕೆಂಬ ಆಶಯವಿದೆ. ಮುಂದಿನ ದಿನಗಳಲ್ಲಿ ಅಗತ್ಯವಿರುವ ಪುಸ್ತಕಗಳು ಮತ್ತು ಕಂಪ್ಯೂಟರ್ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಪಿಡಿಒ ಲಿಂಗರಾಜು, ಪಂಚಾಯತಿ ಸದಸ್ಯರಾದ ಚಿಕ್ಕಣ್ಣ, ಮಂಜುಳಾ, ಜೈ ಭೀಮ್ ಬಳಗದ ಅಧ್ಯಕ್ಷ ಪಿ.ಪ್ರೇಮ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕುಮಾರ, ಉಪಾಧ್ಯಕ್ಷ ಪ್ರದೀಪ್, ಖಜಾಂಚಿ ನಾಗೇಂದ್ರ, ಹಿರಿಯರಾದ ಶಿವಣ್ಣ, ಪ್ರಭಾಕರ್, ಮರಿಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ಕಳೆದ ಶೈಕ್ಷಣಿಕ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಗಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗ್ರಾಮ ಪಂಚಾಯತಿಯಿಂದ ಅಭಿನಂದಿಸಲಾಗುವುದು ಎಂದು ಹಾಡ್ಲಿ ಪಂಚಾಯತಿ ಅಧ್ಯಕ್ಷ ಎನ್.ವಿ.ಚಲುವರಾಜು ತಿಳಿಸಿದರು.</p>.<p>ಸಮೀಪದ ಮೇಗಳಾಪುರದಲ್ಲಿ ಪಂಚಾಯಿತಿ ಅನುದಾನದಲ್ಲಿ ಜೈ ಭೀಮ್ ಬಳಗಕ್ಕೆ ₹30 ಸಾವಿರ ಮೊತ್ತದ ಕುರ್ಚಿ ಮತ್ತು ಮೇಜು ವಿತರಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಶಿಕ್ಷಣ ಉತ್ತೇಜಿಸುವ ನಿಟ್ಟಿನಲ್ಲಿ ಜೂನ್ 17ರಂದು ಹಾಡ್ಲಿ-ಮೇಗಳಾಪುರ ವೃತ್ತದಲ್ಲಿರುವ ಸಂತೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಲಾಗಿದೆ. ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಮುದಾಯದ ಅರ್ಹ ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡು, ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.</p>.<p>ಜೈಭೀಮ್ ಬಳಗದ ಸದಸ್ಯರು ಗ್ರಾಮದ ಸಮುದಾಯಕ್ಕೆ ಅಗತ್ಯವಿರುವ ಸಮಾಜ ಸೇವಾ ಕಾರ್ಯ ಚಟುವಟಿಕೆ ಕೈಗೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚು ಅದ್ಯತೆ ನೀಡಬೇಖು ಎಂದು ಸಲಹೆ ನೀಡಿದರು.</p>.<p>ಪಂಚಾಯತಿಯಿಂದ ಅಂಬೇಡ್ಕರ್ ಭವನದಲ್ಲಿ ಗ್ರಂಥಾಲಯ ಮಾಡಬೇಕೆಂಬ ಆಶಯವಿದೆ. ಮುಂದಿನ ದಿನಗಳಲ್ಲಿ ಅಗತ್ಯವಿರುವ ಪುಸ್ತಕಗಳು ಮತ್ತು ಕಂಪ್ಯೂಟರ್ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಪಿಡಿಒ ಲಿಂಗರಾಜು, ಪಂಚಾಯತಿ ಸದಸ್ಯರಾದ ಚಿಕ್ಕಣ್ಣ, ಮಂಜುಳಾ, ಜೈ ಭೀಮ್ ಬಳಗದ ಅಧ್ಯಕ್ಷ ಪಿ.ಪ್ರೇಮ್ ಕುಮಾರ್, ಸಂಘಟನಾ ಕಾರ್ಯದರ್ಶಿ ಕುಮಾರ, ಉಪಾಧ್ಯಕ್ಷ ಪ್ರದೀಪ್, ಖಜಾಂಚಿ ನಾಗೇಂದ್ರ, ಹಿರಿಯರಾದ ಶಿವಣ್ಣ, ಪ್ರಭಾಕರ್, ಮರಿಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>