ಪಾಂಡವಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ದ್ವೇಷದ ರಾಜಕಾರಣ ಮಾಡಿದವರು ಮನೆಗೆ ಹೋಗಿದ್ದಾರೆ. ಅಂಬರೀಷ್ ಅಜಾತಶತ್ರು, ಅವರ ನಾಮಬಲದಿಂದ ಸುಮಲತಾ ಅವರು ಗೆಲುವು ಸಾಧಿಸಿದ್ದಾರೆ. ನಿಖಿಲ್ ಸೋಲಿಗೆ ನಾನೇ ಹೊಣೆ ಹೊತ್ತುಕೊಂಡಿದ್ದೇನೆ. ಅದರ ಬಗ್ಗೆ ಬೇರೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ’ ಎಂದು ಆರೋಪಿಸಿದರು.