<p><strong>ಮಂಡ್ಯ:</strong> ಮೈಸೂರು ದಸರಾ ಉದ್ಘಾಟನೆ ವೇಳೆ ನಾಡದೇವಿ ಚಾಮುಂಡೇಶ್ವರಿಗೆ ಸಿಂಧೂರ, ಅರಿಶಿಣ– ಕುಂಕುಮ ಇಟ್ಟು, ಗಂಧದ ಕಡ್ಡಿ– ಕರ್ಪೂರ ಹಚ್ಚಿ, ಆರತಿ ಬೆಳಗುವರೇ?</p><p>ಲೇಖಕಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಈ ಪ್ರಶ್ನೆಯನ್ನು ಎತ್ತಿದ್ದಾರೆ. </p><p>ಅವರ (ಮುಸ್ಲಿಂ) ಧರ್ಮದಲ್ಲಿ ಮೂರ್ತಿ ಪೂಜೆಯನ್ನು ಮಾಡುವುದಿಲ್ಲ ಎಂದು ಹೇಳುತ್ತಾರೆ. ಒಂದು ವೇಳೆ ಬಾನು ಅವರು ಚಾಮುಂಡಿ ತಾಯಿಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸುವುದಾದರೆ ನಾವು ಸ್ವಾಗತಿಸುತ್ತೇವೆ. ಈ ಬಗ್ಗೆ ಬಾನು ಅವರು ಮುಖ್ಯಮಂತ್ರಿ ಅವರ ಜೊತೆ ಮಾತನಾಡಿ, ರಾಜ್ಯದ ಜನರಿಗೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಒತ್ತಾಯಿಸಿದರು. </p><p>ನಾವು ಯಾವ ಜಾತಿ, ಮತ, ಪಂಥಗಳ ವಿರೋಧಿಗಳಲ್ಲ, ನಾವೆಲ್ಲರೂ ಭಾರತೀಯರು, ಹಿಂದೂ, ಕ್ರೈಸ್ತ, ಮುಸಲ್ಮಾನ, ಎಲ್ಲರನ್ನೂ ಪ್ರೀತಿಸುವವರು. ನಮ್ಮ ನಾಡಹಬ್ಬ ದಸರಾವು ಸಂಪ್ರದಾಯಬದ್ಧವಾಗಿ ನಡೆಯಬೇಕು ಎಂದು ಬಯಸುತ್ತೇವೆ ಎಂದರು. </p><p>ಜಿಲ್ಲಾಧಿಕಾರಿ ಕಚೇರಿ ಸಹಾಯಕಿ ರೋಹಿಣಿ ಅವರಿಗೆ ಬಿಜೆಪಿ ಕಾರ್ಯಕರ್ತರು ಸೋಮವಾರ ಮನವಿ ಪತ್ರ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಶಿವಕುಮಾರ ಆರಾಧ್ಯ, ಶಿವಲಿಂಗಪ್ಪ, ಚಂದ್ರು, ಪ್ರಸನ್ನ ಕುಮಾರ್, ಯೋಗೇಶ್, ಷಣ್ಮಖ ಆರಾಧ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮೈಸೂರು ದಸರಾ ಉದ್ಘಾಟನೆ ವೇಳೆ ನಾಡದೇವಿ ಚಾಮುಂಡೇಶ್ವರಿಗೆ ಸಿಂಧೂರ, ಅರಿಶಿಣ– ಕುಂಕುಮ ಇಟ್ಟು, ಗಂಧದ ಕಡ್ಡಿ– ಕರ್ಪೂರ ಹಚ್ಚಿ, ಆರತಿ ಬೆಳಗುವರೇ?</p><p>ಲೇಖಕಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಈ ಪ್ರಶ್ನೆಯನ್ನು ಎತ್ತಿದ್ದಾರೆ. </p><p>ಅವರ (ಮುಸ್ಲಿಂ) ಧರ್ಮದಲ್ಲಿ ಮೂರ್ತಿ ಪೂಜೆಯನ್ನು ಮಾಡುವುದಿಲ್ಲ ಎಂದು ಹೇಳುತ್ತಾರೆ. ಒಂದು ವೇಳೆ ಬಾನು ಅವರು ಚಾಮುಂಡಿ ತಾಯಿಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸುವುದಾದರೆ ನಾವು ಸ್ವಾಗತಿಸುತ್ತೇವೆ. ಈ ಬಗ್ಗೆ ಬಾನು ಅವರು ಮುಖ್ಯಮಂತ್ರಿ ಅವರ ಜೊತೆ ಮಾತನಾಡಿ, ರಾಜ್ಯದ ಜನರಿಗೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಒತ್ತಾಯಿಸಿದರು. </p><p>ನಾವು ಯಾವ ಜಾತಿ, ಮತ, ಪಂಥಗಳ ವಿರೋಧಿಗಳಲ್ಲ, ನಾವೆಲ್ಲರೂ ಭಾರತೀಯರು, ಹಿಂದೂ, ಕ್ರೈಸ್ತ, ಮುಸಲ್ಮಾನ, ಎಲ್ಲರನ್ನೂ ಪ್ರೀತಿಸುವವರು. ನಮ್ಮ ನಾಡಹಬ್ಬ ದಸರಾವು ಸಂಪ್ರದಾಯಬದ್ಧವಾಗಿ ನಡೆಯಬೇಕು ಎಂದು ಬಯಸುತ್ತೇವೆ ಎಂದರು. </p><p>ಜಿಲ್ಲಾಧಿಕಾರಿ ಕಚೇರಿ ಸಹಾಯಕಿ ರೋಹಿಣಿ ಅವರಿಗೆ ಬಿಜೆಪಿ ಕಾರ್ಯಕರ್ತರು ಸೋಮವಾರ ಮನವಿ ಪತ್ರ ಸಲ್ಲಿಸಿದರು. ಬಿಜೆಪಿ ಮುಖಂಡರಾದ ಶಿವಕುಮಾರ ಆರಾಧ್ಯ, ಶಿವಲಿಂಗಪ್ಪ, ಚಂದ್ರು, ಪ್ರಸನ್ನ ಕುಮಾರ್, ಯೋಗೇಶ್, ಷಣ್ಮಖ ಆರಾಧ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>