<p><strong>ಮಂಡ್ಯ:</strong> ಬೆಂಗಳೂರಿನ ಚಂದ್ರು ಕೊಲೆ ಪ್ರಕರಣದಲ್ಲಿ ಶಾಂತಿ ಕದಡುವ ಹೇಳಿಕೆ ನಿಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ಗುರುವಾರ ಪೂರ್ವ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಜವಾಬ್ದಾರಿಯಿಂದ ವರ್ತಿಸಬೇಕಾದ ಗೃಹಸಚಿವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ಧಾರೆ. ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ದಲಿತ ಯುವಕನನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ವಾಸ್ತವವಾಗಿ ಅಪಘಾತದ ನಂತರ ನಡೆದ ಘರ್ಷಣೆಯಲ್ಲಿ ಯುವಕ ಕೊಲೆಯಾಗಿದ್ದಾನೆ ಎಂಬ ವಿಚಾರ ಗೊತ್ತಾಗಿದೆ.</p>.<p>ಶಾಂತಿ–ಸುವ್ಯವಸ್ಥೆ ಕಾಪಾಡಬೇಕಾದ ಗೃಹಸಚಿವರೇ ಈ ರೀತಿ ಹೇಳಿಕೆ ನೀಡಿರುವುದು ಅಕ್ಷ್ಯಮ್ಯ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗೃಹಸಚಿವರೊಬ್ಬರು ಅತ್ಯಂತ ಕೀಳಾಗಿ ನಡೆದುಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾ ಮಾಡಬೇಕು, ಅವರ ವಿರುದ್ಧ ಪ್ರಕರಣ ದಾಖಲು ಮಾಡಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಬೆಂಗಳೂರಿನ ಚಂದ್ರು ಕೊಲೆ ಪ್ರಕರಣದಲ್ಲಿ ಶಾಂತಿ ಕದಡುವ ಹೇಳಿಕೆ ನಿಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ಗುರುವಾರ ಪೂರ್ವ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಜವಾಬ್ದಾರಿಯಿಂದ ವರ್ತಿಸಬೇಕಾದ ಗೃಹಸಚಿವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ಧಾರೆ. ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ದಲಿತ ಯುವಕನನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ವಾಸ್ತವವಾಗಿ ಅಪಘಾತದ ನಂತರ ನಡೆದ ಘರ್ಷಣೆಯಲ್ಲಿ ಯುವಕ ಕೊಲೆಯಾಗಿದ್ದಾನೆ ಎಂಬ ವಿಚಾರ ಗೊತ್ತಾಗಿದೆ.</p>.<p>ಶಾಂತಿ–ಸುವ್ಯವಸ್ಥೆ ಕಾಪಾಡಬೇಕಾದ ಗೃಹಸಚಿವರೇ ಈ ರೀತಿ ಹೇಳಿಕೆ ನೀಡಿರುವುದು ಅಕ್ಷ್ಯಮ್ಯ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗೃಹಸಚಿವರೊಬ್ಬರು ಅತ್ಯಂತ ಕೀಳಾಗಿ ನಡೆದುಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾ ಮಾಡಬೇಕು, ಅವರ ವಿರುದ್ಧ ಪ್ರಕರಣ ದಾಖಲು ಮಾಡಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>