<p><strong>ಮಂಡ್ಯ</strong>: ‘ಬಾಲಕಾರ್ಮಿಕರನ್ನು ರಕ್ಷಣೆ ಮಾಡುವುದರ ಜೊತೆಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೂ ಒತ್ತು ನೀಡಿದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಸಮಾಜದಿಂದ ದೂರಮಾಡಲು ಸಾಧ್ಯ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬಾಲಕಾರ್ಮಿಕರನ್ನು ಶಾಲೆಗೆ ದಾಖಲು ಮಾಡಿದ ನಂತರ ಅವರ ಶೈಕ್ಷಣಿಕ ಪ್ರಗತಿ ಹಾಗೂ ಹಾಜರಾತಿಯ ಬಗ್ಗೆ ಪ್ರತಿ ಪರಿಶೀಲಿಸಬೇಕು ಇಲ್ಲವಾದಲ್ಲಿ ಅವರು ಪುನಃ ಶಾಲೆ ಬಿಡುವ ಸಾಧ್ಯತೆ ಇರುತ್ತದೆ ಎಂದರು.</p>.<p>ಪತ್ತೆಯಾದ ಬಾಲಕಾರ್ಮಿಕರನ್ನು ಕಾರ್ಮಿಕ ಇಲಾಖೆಯಿಂದ ಶಾಲೆಗೆ ದಾಖಲು ಮಾಡಲಾಗಿದೆ. ಈ 36 ಮಕ್ಕಳ ಮಾಹಿತಿ ವಿದ್ಯಾರ್ಥಿವಾರು ಶಿಕ್ಷಣ ಇಲಾಖೆಯಲ್ಲಿ ಲಭ್ಯವಿರಬೇಕು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ವಿದ್ಯಾರ್ಥಿಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕು ಎಂದರು.</p>.<p>ಕಾರ್ಮಿಕ ಇಲಾಖೆ ಅವರು ನಗರ ಪ್ರದೇಶದ ಬೇಕರಿ ಹಾಗೂ ಗ್ಯಾರೇಜ್ ಗಳಲ್ಲಿ ಹೆಚ್ಚು ದಾಳಿ ನಡೆಸುತ್ತಾರೆ. ಕಲ್ಲು ಗಣಿಗಾರಿಕೆ, ಸಣ್ಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚು ದಾಳಿ ನಡೆಸಿ ಎಂದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಮಾತನಾಡಿ, ‘ಕಾರ್ಮಿಕ ಇಲಾಖೆ ಅವರು ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಹೆಚ್ಚು ದಾಳಿ ನಡೆಸಬೇಕು. ದಾಳಿ ಮಾಡಿದ ಬಗ್ಗೆ ಹೆಚ್ಚು ಪ್ರಚಾರ ಕೈಗೊಳ್ಳಿ’ ಎಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ-2 ಟಿ. ಲಕ್ಷ್ಮಿ, ಕಾರ್ಮಿಕ ಅಧಿಕಾರಿ ಸವಿತಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>.<div><blockquote>ಜೂನ್ 12ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಮಂಡ್ಯದ ಕಲಾಮಂದಿರದಲ್ಲಿ ಆಚರಿಸಿ ಹಾಗೂ ಜಿಲ್ಲೆಯ ಹೋಟೆಲ್ ಕ್ವಾರಿ ಹಾಗೂ ಕಾರ್ಖಾನೆಗಳ ಮುಖ್ಯಸ್ಥರಿಗೆ ಕಾರ್ಯಾಗಾರ ಏರ್ಪಡಿಸಿ.</blockquote><span class="attribution">– ಕುಮಾರ, ಜಿಲ್ಲಾಧಿಕಾರಿ ಮಂಡ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಬಾಲಕಾರ್ಮಿಕರನ್ನು ರಕ್ಷಣೆ ಮಾಡುವುದರ ಜೊತೆಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೂ ಒತ್ತು ನೀಡಿದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಸಮಾಜದಿಂದ ದೂರಮಾಡಲು ಸಾಧ್ಯ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬಾಲಕಾರ್ಮಿಕರನ್ನು ಶಾಲೆಗೆ ದಾಖಲು ಮಾಡಿದ ನಂತರ ಅವರ ಶೈಕ್ಷಣಿಕ ಪ್ರಗತಿ ಹಾಗೂ ಹಾಜರಾತಿಯ ಬಗ್ಗೆ ಪ್ರತಿ ಪರಿಶೀಲಿಸಬೇಕು ಇಲ್ಲವಾದಲ್ಲಿ ಅವರು ಪುನಃ ಶಾಲೆ ಬಿಡುವ ಸಾಧ್ಯತೆ ಇರುತ್ತದೆ ಎಂದರು.</p>.<p>ಪತ್ತೆಯಾದ ಬಾಲಕಾರ್ಮಿಕರನ್ನು ಕಾರ್ಮಿಕ ಇಲಾಖೆಯಿಂದ ಶಾಲೆಗೆ ದಾಖಲು ಮಾಡಲಾಗಿದೆ. ಈ 36 ಮಕ್ಕಳ ಮಾಹಿತಿ ವಿದ್ಯಾರ್ಥಿವಾರು ಶಿಕ್ಷಣ ಇಲಾಖೆಯಲ್ಲಿ ಲಭ್ಯವಿರಬೇಕು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ವಿದ್ಯಾರ್ಥಿಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕು ಎಂದರು.</p>.<p>ಕಾರ್ಮಿಕ ಇಲಾಖೆ ಅವರು ನಗರ ಪ್ರದೇಶದ ಬೇಕರಿ ಹಾಗೂ ಗ್ಯಾರೇಜ್ ಗಳಲ್ಲಿ ಹೆಚ್ಚು ದಾಳಿ ನಡೆಸುತ್ತಾರೆ. ಕಲ್ಲು ಗಣಿಗಾರಿಕೆ, ಸಣ್ಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚು ದಾಳಿ ನಡೆಸಿ ಎಂದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಮಾತನಾಡಿ, ‘ಕಾರ್ಮಿಕ ಇಲಾಖೆ ಅವರು ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಹೆಚ್ಚು ದಾಳಿ ನಡೆಸಬೇಕು. ದಾಳಿ ಮಾಡಿದ ಬಗ್ಗೆ ಹೆಚ್ಚು ಪ್ರಚಾರ ಕೈಗೊಳ್ಳಿ’ ಎಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ-2 ಟಿ. ಲಕ್ಷ್ಮಿ, ಕಾರ್ಮಿಕ ಅಧಿಕಾರಿ ಸವಿತಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.</p>.<div><blockquote>ಜೂನ್ 12ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಮಂಡ್ಯದ ಕಲಾಮಂದಿರದಲ್ಲಿ ಆಚರಿಸಿ ಹಾಗೂ ಜಿಲ್ಲೆಯ ಹೋಟೆಲ್ ಕ್ವಾರಿ ಹಾಗೂ ಕಾರ್ಖಾನೆಗಳ ಮುಖ್ಯಸ್ಥರಿಗೆ ಕಾರ್ಯಾಗಾರ ಏರ್ಪಡಿಸಿ.</blockquote><span class="attribution">– ಕುಮಾರ, ಜಿಲ್ಲಾಧಿಕಾರಿ ಮಂಡ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>