<p><strong>ಮಂಡ್ಯ:</strong> ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪ ಕೀರ್ತಿ ಕೆಮಿಕಲ್ ಕಾರ್ಖಾನೆಯನ್ನು ಸ್ಥಳಾಂತರ ಮಾಡುವ ವೇಳೆ ಭಾನುವಾರ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p><p>ಬಿಹಾರ ಮೂಲದ ಕಲೂಹ್ಖಾನ್ (27) ಮತ್ತು ಅಶೋಕ್ (26) ಮೃತ ಕಾರ್ಮಿಕರು. ಟ್ಯಾಂಕ್ ಸ್ಫೋಟಗೊಂಡ ತೀವ್ರತೆಗೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರವಾಗಿವೆ. ಖಾಸಿಂ, ರವಿ, ಮಹಾಂತೇಶ್, ರಾಜೀವ್ಕುಮಾರ್ ಈ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p><p>ಕಾರೇಕಟ್ಟೆಯಲ್ಲಿರುವ ಕಾರ್ಖಾನೆಯ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುವ ಕಾರ್ಯ ಒಂದು ತಿಂಗಳಿನಿಂದ ನಡೆಯುತ್ತಿತ್ತು. ಭಾನುವಾರ ರಾಸಾಯನಿಕ ಟ್ಯಾಂಕ್ ತೆರವು ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ.</p><p>ಇದೇ ಕಾರ್ಖಾನೆಯಲ್ಲಿ 4 ವರ್ಷಗಳ ಹಿಂದೆ (2022ರಲ್ಲಿ) ವಿಷಾನಿಲ ಸೋರಿಕೆಯಾಗಿ ನೂರಾರು ಎಕರೆ ಬೆಳೆ ಹಾನಿಯಾಗಿತ್ತು ಮತ್ತು ಎರಡು ನಾಯಿಗಳು ಮೃತಪಟ್ಟಿದ್ದವು. ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಿತ್ತು. </p><p>ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಕಾರ್ಖಾನೆಯವರಿಂದ ಪರಿಹಾರ ಕೊಡಿಸಿತ್ತು. ಈವರೆಗೆ ಕಾರ್ಖಾನೆ ಅಧಿಕೃತವಾಗಿ ಆರಂಭವೇ ಆಗಿರಲಿಲ್ಲ. ಹೀಗಾಗಿ ಕಾರ್ಖಾನೆಯನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ಮಾಲೀಕರು ಮುಂದಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪ ಕೀರ್ತಿ ಕೆಮಿಕಲ್ ಕಾರ್ಖಾನೆಯನ್ನು ಸ್ಥಳಾಂತರ ಮಾಡುವ ವೇಳೆ ಭಾನುವಾರ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p><p>ಬಿಹಾರ ಮೂಲದ ಕಲೂಹ್ಖಾನ್ (27) ಮತ್ತು ಅಶೋಕ್ (26) ಮೃತ ಕಾರ್ಮಿಕರು. ಟ್ಯಾಂಕ್ ಸ್ಫೋಟಗೊಂಡ ತೀವ್ರತೆಗೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರವಾಗಿವೆ. ಖಾಸಿಂ, ರವಿ, ಮಹಾಂತೇಶ್, ರಾಜೀವ್ಕುಮಾರ್ ಈ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p><p>ಕಾರೇಕಟ್ಟೆಯಲ್ಲಿರುವ ಕಾರ್ಖಾನೆಯ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುವ ಕಾರ್ಯ ಒಂದು ತಿಂಗಳಿನಿಂದ ನಡೆಯುತ್ತಿತ್ತು. ಭಾನುವಾರ ರಾಸಾಯನಿಕ ಟ್ಯಾಂಕ್ ತೆರವು ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ.</p><p>ಇದೇ ಕಾರ್ಖಾನೆಯಲ್ಲಿ 4 ವರ್ಷಗಳ ಹಿಂದೆ (2022ರಲ್ಲಿ) ವಿಷಾನಿಲ ಸೋರಿಕೆಯಾಗಿ ನೂರಾರು ಎಕರೆ ಬೆಳೆ ಹಾನಿಯಾಗಿತ್ತು ಮತ್ತು ಎರಡು ನಾಯಿಗಳು ಮೃತಪಟ್ಟಿದ್ದವು. ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಿತ್ತು. </p><p>ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಕಾರ್ಖಾನೆಯವರಿಂದ ಪರಿಹಾರ ಕೊಡಿಸಿತ್ತು. ಈವರೆಗೆ ಕಾರ್ಖಾನೆ ಅಧಿಕೃತವಾಗಿ ಆರಂಭವೇ ಆಗಿರಲಿಲ್ಲ. ಹೀಗಾಗಿ ಕಾರ್ಖಾನೆಯನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ಮಾಲೀಕರು ಮುಂದಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>