ಮದ್ದೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಚೇತನ್ ಕುಮಾರ್, ಬಾಲ್ಯ ವಿವಾಹ ನಿಷೇಧ ಅಧಿಕಾರಿ ಶೋಭಾ, ಮಕ್ಕಳ ಸಹಾಯವಾಣಿ ಸಂಯೋಜಕಿ ಇಂಪನಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರದೀಪ್ ಹಾಗೂ ಸಬ್ ಇನ್ಸ್ಪೆಕ್ಟರ್ ಮಂಜೇಗೌಡ ಅವರು ಅಗರಲಿಂಗನದೊಡ್ಡಿಯ ವರನ ನಿವಾಸಕ್ಕೆ ತೆರಳಿ ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿಯನ್ನು ಮಂಡ್ಯದ ಬಾಲಮಂದಿರದಲ್ಲಿ ಇರಿಸಲಾಗಿದೆ.