ಗಣಂಗೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ 15 ದಿನಗಳ ಹಿಂದೆಯೂ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಬೋನು ತಂದಿರಿಸಿದೆ. ಆದರೆ, ಅದರಲ್ಲಿ ಬಲಿ ಪ್ರಾಣಿಯನ್ನು ಕಟ್ಟಿ ಹಾಕಿಲ್ಲ. ಹಾಗಾಗಿ ಚಿರತೆ ಬೋನಿಗೆ ಬೀಳುತ್ತಿಲ್ಲ. ಹಗಲು ಹೊತ್ತಿನಲ್ಲೇ ಚಿರತೆ ಕುರಿ ಮೇಲೆ ದಾಳಿ ನಡೆಸಿರುವುದರಿಂದ ಶಾಲೆಯ ವಿದ್ಯಾರ್ಥಿಗಳು, ರೈತರು ಹಾಗೂ ಕುರಿಗಾಹಿಗಳಲ್ಲಿ ಆತಂಕ ಹೆಚ್ಚಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಬೀರೇಶ್ ಕಳವಳ ವ್ಯಕ್ತಪಡಿಸಿದ್ದಾರೆ.