‘ಮೈಷುಗರ್ ಖಾಸಗೀಕರಣ ನಿಲ್ಲಿಸಿ’
ರಾಷ್ಟ್ರೀಯ ಆಸ್ತಿಗಳ ಲೂಟಿಯನ್ನು ತಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣ ಮತ್ತು ಕಾರ್ಮಿಕ ಕಾನೂನುಗಳ ರದ್ದತಿಯನ್ನು ನಿಲ್ಲಿಸಬೇಕು. ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳು, ವೆಂಟಿಲೇಟರ್ಗಳು, ಅಗತ್ಯ ಔಷಧಿಗಳ ತೀವ್ರ ಕೊರತೆ ಇದ್ದು, ಅವುಗಳನ್ನು ಗರಿಷ್ಠ ಪ್ರಮಾಣದಲ್ಲಿ ಪೂರೈಸಬೇಕು. ಮೈಷುಗರ್ ಖಾಸಗೀಕರಣ ನಿಲ್ಲಿಸಬೇಕು. ಸರ್ಕಾರದ ಒಡೆತನದಲ್ಲಿ ಉಳಿಸಿ, ಪುನಶ್ಚೇತನಗೊಳಿಸಿ ಕಬ್ಬು ಅರೆಯಲು ಪ್ರಾರಂಭಿಸಬೇಕು. ಕಬ್ಬಿನ ಸಾಗಣೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.