ನಗರಸಭೆಯಲ್ಲಿ ಪೌರಕಾರ್ಮಿಕರಾಗಿದ್ದ ಉದಯ್ ಕುಮಾರ್ (31) ಮೃತಪಟ್ಟವರು. ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಪತ್ನಿ ಹಾಗೂ ಮಗಳೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಉದ್ಯಾನದ ಬಳಿಯ ಮರವೊಂದು ಉದಯ್ ಅವರ ತಲೆ ಮೇಲೆ ಬಿದ್ದಿದೆ. ತೀವ್ರ ರಕ್ತಸ್ರಾವವಾದ ಕಾರಣ ಅವರು ಮೃತಪಟ್ಟಿದ್ಧಾರೆ. ಪತ್ನಿ ಹಾಗೂ ಮಗಳಿಗೂ ಗಾಯಗಳಾಗಿವೆ. ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.