<p><strong>ಕೊಪ್ಪ: </strong>ಹೋಬಳಿಯ ಬೆಸಗರಹಳ್ಳಿಯಲ್ಲಿ ಪೌರ ಕಾರ್ಮಿಕರಿಗೆ ಯಾವುದೇ ಸುರಕ್ಷಿತ ಸಾಧನಗಳನ್ನು ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿರುವುದು ಗುರುವಾರ ಕಂಡು ಬಂದಿದೆ.</p>.<p>ಇಲ್ಲಿನ ಪೌರ ಕಾರ್ಮಿಕರು ಕಸ ವಿಲೇವಾರಿ, ಚರಂಡಿ, ರಸ್ತೆ ಹಾಗೂ ಬೀದಿಗಳನ್ನು ಸ್ವಚ್ಛ ಮಾಡುವ ಸಂದರ್ಭದಲ್ಲಿ ಗ್ಲೌಸ್, ಮಾಸ್ಕ್, ಬೂಟ್, ಸೇರಿದಂತೆ ಯಾವುದೇ ಸುರಕ್ಷತಾ ಸಾಧನೆಗಳನ್ನು ಬಳಸದೆ ಬರಿಗೈ ಮತ್ತು ಕಾಲಿನಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದಿದೆ.</p>.<p>ಪೌರ ಕಾರ್ಮಿಕರೊಬ್ಬರು ಮಾತನಾಡಿ, ಸರಿಯಾಗಿ ಸುರಕ್ಷತಾ ಸಾಧನಗಳನ್ನು ಕೊಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>ಗ್ರಾ.ಪಂ ಹಾಗೂ ತಾ.ಪಂ ಅಧಿಕಾರಿಗಳು ಈ ಸಂಬಂಧ ಕ್ರಮ ಕೈಗೊಂಡು ಪೌರ ಕಾರ್ಮಿಕರಿಗೆ ಸುರಕ್ಷಿತಾ ಸಾಧನಗಳನ್ನು ಕೊಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಪೌರ ಕಾರ್ಮಿಕರಿಗೆ ರಕ್ಷಣಾ ಸಾಧನಗಳನ್ನು ಪಂಚಾಯಿತಿ ವತಿಯಿಂದ ವಿತರಿಸಲಾಗಿದೆ. ರಕ್ಷಣಾ ಕವಚ ಬಳಸಿಕೊಂಡು ಸ್ವಚ್ಛತೆ ಮಾಡಲು ತಿಳಿಸಲಾಗಿದೆ ಎಂದು ಪಿಡಿಒ ಪ್ರಕಾಶ್ ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ: </strong>ಹೋಬಳಿಯ ಬೆಸಗರಹಳ್ಳಿಯಲ್ಲಿ ಪೌರ ಕಾರ್ಮಿಕರಿಗೆ ಯಾವುದೇ ಸುರಕ್ಷಿತ ಸಾಧನಗಳನ್ನು ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿರುವುದು ಗುರುವಾರ ಕಂಡು ಬಂದಿದೆ.</p>.<p>ಇಲ್ಲಿನ ಪೌರ ಕಾರ್ಮಿಕರು ಕಸ ವಿಲೇವಾರಿ, ಚರಂಡಿ, ರಸ್ತೆ ಹಾಗೂ ಬೀದಿಗಳನ್ನು ಸ್ವಚ್ಛ ಮಾಡುವ ಸಂದರ್ಭದಲ್ಲಿ ಗ್ಲೌಸ್, ಮಾಸ್ಕ್, ಬೂಟ್, ಸೇರಿದಂತೆ ಯಾವುದೇ ಸುರಕ್ಷತಾ ಸಾಧನೆಗಳನ್ನು ಬಳಸದೆ ಬರಿಗೈ ಮತ್ತು ಕಾಲಿನಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದಿದೆ.</p>.<p>ಪೌರ ಕಾರ್ಮಿಕರೊಬ್ಬರು ಮಾತನಾಡಿ, ಸರಿಯಾಗಿ ಸುರಕ್ಷತಾ ಸಾಧನಗಳನ್ನು ಕೊಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>ಗ್ರಾ.ಪಂ ಹಾಗೂ ತಾ.ಪಂ ಅಧಿಕಾರಿಗಳು ಈ ಸಂಬಂಧ ಕ್ರಮ ಕೈಗೊಂಡು ಪೌರ ಕಾರ್ಮಿಕರಿಗೆ ಸುರಕ್ಷಿತಾ ಸಾಧನಗಳನ್ನು ಕೊಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಪೌರ ಕಾರ್ಮಿಕರಿಗೆ ರಕ್ಷಣಾ ಸಾಧನಗಳನ್ನು ಪಂಚಾಯಿತಿ ವತಿಯಿಂದ ವಿತರಿಸಲಾಗಿದೆ. ರಕ್ಷಣಾ ಕವಚ ಬಳಸಿಕೊಂಡು ಸ್ವಚ್ಛತೆ ಮಾಡಲು ತಿಳಿಸಲಾಗಿದೆ ಎಂದು ಪಿಡಿಒ ಪ್ರಕಾಶ್ ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>