ಕೋವಿಡ್ನಿಂದಾಗಿ ಕಳೆದ ಎರಡು ವರ್ಷಗಳಿಂದ ವೈರಮುಡಿ ಬ್ರಹ್ಮೋತ್ಸವ ಸರಳವಾಗಿ ನಡೆದಿತ್ತು. ಈ ವರ್ಷ ವೈಭವಯುತವಾಗಿ ನಡೆಯುತ್ತಿದ್ದು, ಮೇಲುಕೋಟೆ ಕ್ಷೇತ್ರದಲ್ಲಿ ಭಕ್ತಸಾಗರವೇ ಸೇರಿದೆ. ಮಾರ್ಚ್ 11ರಂದು ಗರುಡ ಧ್ವಜಾರೋಹಣದ ಮೂಲಕ ವಿಧ್ಯುಕ್ತವಾಗಿ ಬ್ರಹ್ಮೋತ್ಸವ ಆರಂಭಗೊಡಿದೆ. ಸೋಮವಾರ ಚೆಲುವನಾರಾಯಣಸ್ವಾಮಿಗೆ ವಜ್ರಖಚಿತ ಕಿರೀಟ ಧಾರಣೆ ನಡೆಯಲಿದೆ.