<p><strong>ಮಂಡ್ಯ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಯನ್ನು ನಕಲು ಮಾಡಿ, ನಕಲಿ ನೇಮಕಾತಿ ಆದೇಶ ಸೃಷ್ಟಿಸಿ ₹31 ಲಕ್ಷ ವಂಚಿಸಿದ ಆರೋಪದ ಮೇರೆಗೆ ತಾಲ್ಲೂಕಿನ ತಾವರೆಗೆರೆ ನಿವಾಸಿ ಎಚ್.ಸಿ.ವೆಂಕಟೇಶ್ ಎಂಬುವರ ವಿರುದ್ಧ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಮಂಡ್ಯ ಗಾಂಧಿನಗರದ ನೇತ್ರಾವತಿ ಮತ್ತು ಕಲ್ಲಹಳ್ಳಿಯ ಮಲ್ಲೇಶ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ‘ಆರೋಪಿಯು ಬೆಂಗಳೂರಿನ ವಿಧಾನಸೌಧದಲ್ಲಿ ಉದ್ಯೋಗದಲ್ಲಿರುವುದಾಗಿ ನಂಬಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕೆಲಸ ಕೊಡಿಸುವುದಾಗಿ ಒಬ್ಬರಿಂದ ₹12.24 ಲಕ್ಷ ಮತ್ತು ವಾಣಿಜ್ಯ ಇಲಾಖೆಯಲ್ಲಿ ಹಿರಿಯ ಅಧಿಕಾರಿ ಕೆಲಸ ಕೊಡಿಸುವುದಾಗಿ ಇನ್ನೊಬ್ಬರಿಂದ ₹19 ಲಕ್ಷ ಪಡೆದು ವಂಚಿಸಿದ್ದಾನೆ’ ಎಂದು ದೂರಲಾಗಿದೆ. </p>.<p>‘ಚಿತ್ರನಟ ದರ್ಶನ್ ಗೊತ್ತು, ಅವರೇ ನನಗೆ ಕಾರು ಕೊಟ್ಟಿದ್ದಾರೆ. ಸಚಿವ ಜಮೀರ್ ಅಹಮದ್ ಗೊತ್ತು ಎಂದು ಹಲವರನ್ನು ಯಾಮಾರಿಸಿದ್ದಾನೆ. ವಿಧಾನಸೌಧದಲ್ಲಿ ಸಚಿವರು, ಅಧಿಕಾರಿಗಳ ಕೊಠಡಿಗಳನ್ನು ತೋರಿಸಿ, ಸರ್ಕಾರಿ ಕಚೇರಿಗಳಿಗೆ ಕರೆಸಿ ವಂಚಿಸಿದ್ದಾನೆ’ ಎಂದು ಆರೋಪಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಯನ್ನು ನಕಲು ಮಾಡಿ, ನಕಲಿ ನೇಮಕಾತಿ ಆದೇಶ ಸೃಷ್ಟಿಸಿ ₹31 ಲಕ್ಷ ವಂಚಿಸಿದ ಆರೋಪದ ಮೇರೆಗೆ ತಾಲ್ಲೂಕಿನ ತಾವರೆಗೆರೆ ನಿವಾಸಿ ಎಚ್.ಸಿ.ವೆಂಕಟೇಶ್ ಎಂಬುವರ ವಿರುದ್ಧ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಮಂಡ್ಯ ಗಾಂಧಿನಗರದ ನೇತ್ರಾವತಿ ಮತ್ತು ಕಲ್ಲಹಳ್ಳಿಯ ಮಲ್ಲೇಶ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ‘ಆರೋಪಿಯು ಬೆಂಗಳೂರಿನ ವಿಧಾನಸೌಧದಲ್ಲಿ ಉದ್ಯೋಗದಲ್ಲಿರುವುದಾಗಿ ನಂಬಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕೆಲಸ ಕೊಡಿಸುವುದಾಗಿ ಒಬ್ಬರಿಂದ ₹12.24 ಲಕ್ಷ ಮತ್ತು ವಾಣಿಜ್ಯ ಇಲಾಖೆಯಲ್ಲಿ ಹಿರಿಯ ಅಧಿಕಾರಿ ಕೆಲಸ ಕೊಡಿಸುವುದಾಗಿ ಇನ್ನೊಬ್ಬರಿಂದ ₹19 ಲಕ್ಷ ಪಡೆದು ವಂಚಿಸಿದ್ದಾನೆ’ ಎಂದು ದೂರಲಾಗಿದೆ. </p>.<p>‘ಚಿತ್ರನಟ ದರ್ಶನ್ ಗೊತ್ತು, ಅವರೇ ನನಗೆ ಕಾರು ಕೊಟ್ಟಿದ್ದಾರೆ. ಸಚಿವ ಜಮೀರ್ ಅಹಮದ್ ಗೊತ್ತು ಎಂದು ಹಲವರನ್ನು ಯಾಮಾರಿಸಿದ್ದಾನೆ. ವಿಧಾನಸೌಧದಲ್ಲಿ ಸಚಿವರು, ಅಧಿಕಾರಿಗಳ ಕೊಠಡಿಗಳನ್ನು ತೋರಿಸಿ, ಸರ್ಕಾರಿ ಕಚೇರಿಗಳಿಗೆ ಕರೆಸಿ ವಂಚಿಸಿದ್ದಾನೆ’ ಎಂದು ಆರೋಪಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>