<p><strong>ಕಿಕ್ಕೇರಿ:</strong> ಹೋಬಳಿಯ ಸಾಸಲು ಗ್ರಾಮದ ಎರಡೂ ದೇಗುಲಗಳ ಹುಂಡಿ ಹಣವನ್ನು ಶನಿವಾರ ಎಣಿಕೆ ನಡೆಸಲಾಯಿತು. ಒಟ್ಟು ₹ 12,16,391 ಸಂಗ್ರಹವಾಗಿದೆ.</p>.<p>ಮುಜರಾಯಿ ಇಲಾಖೆಯ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲಗಳ ಹುಂಡಿ ಎಣಿಕೆ ಕಾರ್ಯ ಮುಜರಾಯಿ ಅಧಿಕಾರಿ ತಹಶೀಲ್ದಾರ್ ಅಶೋಕ್ ಮಾರ್ಗದರ್ಶನದಲ್ಲಿ ಉಪತಹಶೀಲ್ದಾರ್ ವೀಣಾ ನೇತೃತ್ವದಲ್ಲಿ ದೇಗುಲ ಆವರಣದಲ್ಲಿ ನಡೆಯಿತು. ಹುಂಡಿ ಹಣ ಕಳವು ಹಿನ್ನೆಲೆಯಲ್ಲಿ ಕಾರ್ತೀಕ ಮಾಸದ ಪ್ರತಿ ವಾರ ಎಣಿಕೆ ಕಾರ್ಯ ನಡೆಯಿತು.</p>.<p>ಹಣದ ಜೊತೆಯಲ್ಲಿ ಬೆಳ್ಳಿಯ ನಾಗರಸೆಡೆ, ತೊಟ್ಟಿಲು, ಕಣ್ಣು ಮತ್ತಿತರ ಆಕೃತಿಯ ವಸ್ತುಗಳನ್ನು ಕಾಣಿಕೆ ರೂಪದಲ್ಲಿ ಭಕ್ತರು ಹುಂಡಿಯಲ್ಲಿ ಹಾಕಿದ್ದರು.</p>.<p>ಕಾರ್ತೀಕ ಮಾಸದ 4 ವಾರಗಳಿಂದ ₹ 31,84,914 ಸಂಗ್ರಹವಾಗಿದ್ದು ಮುಜರಾಯಿ ಖಜಾನೆಗೆ ಅಧಿಕ ವರಮಾನ ನೀಡಿದೆ. ಒಟ್ಟು 22 ಹುಂಡಿಗಳನ್ನು ಕಂದಾಯ ಇಲಾಖೆಯವರು ಬೆಳಿಗ್ಗೆಯಿಂದ ಸಂಜೆಯವರೆಗೆ ಎಣಿಕೆ ಮಾಡಿದರು.</p>.<p>ಕಾಣಿಕೆ ಹಣವನ್ನು ಕೆ.ಆರ್.ಪೇಟೆಯ ಬ್ಯಾಂಕ್ ಆಫ್ ಬರೋಡಾದ ದೇಗುಲದ ಮುಜರಾಯಿ ಖಾತೆಗೆ ಜಮಾ ಮಾಡಲಾಯಿತು.</p>.<p>ಉಪತಹಶೀಲ್ದಾರ್ ವೀಣಾ, ಕಂದಾಯ ನಿರೀಕ್ಷಕ ಡಿ.ಆರ್.ನರೇಂದ್ರ, ಗ್ರಾಮ ಆಡಳಿತಾಧಿಕಾರಿ ಬಿ.ಎಂ. ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನೀಲ್ ಗಾಣಿಗೇರ್, ಹರ್ಷಿತಾ, ವನಜಾಕ್ಷಿ, ಮುಜರಾಯಿ ಸಹಾಯಕಿ ಪೂರ್ಣಿಮಾ, ಗ್ರಾಮ ಸಹಾಯಕರು, ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ, ಗ್ರಾಮದ ಮುಖಂಡರು ಭಾಗವಹಿಸಿದ್ದರು.<br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಹೋಬಳಿಯ ಸಾಸಲು ಗ್ರಾಮದ ಎರಡೂ ದೇಗುಲಗಳ ಹುಂಡಿ ಹಣವನ್ನು ಶನಿವಾರ ಎಣಿಕೆ ನಡೆಸಲಾಯಿತು. ಒಟ್ಟು ₹ 12,16,391 ಸಂಗ್ರಹವಾಗಿದೆ.</p>.<p>ಮುಜರಾಯಿ ಇಲಾಖೆಯ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲಗಳ ಹುಂಡಿ ಎಣಿಕೆ ಕಾರ್ಯ ಮುಜರಾಯಿ ಅಧಿಕಾರಿ ತಹಶೀಲ್ದಾರ್ ಅಶೋಕ್ ಮಾರ್ಗದರ್ಶನದಲ್ಲಿ ಉಪತಹಶೀಲ್ದಾರ್ ವೀಣಾ ನೇತೃತ್ವದಲ್ಲಿ ದೇಗುಲ ಆವರಣದಲ್ಲಿ ನಡೆಯಿತು. ಹುಂಡಿ ಹಣ ಕಳವು ಹಿನ್ನೆಲೆಯಲ್ಲಿ ಕಾರ್ತೀಕ ಮಾಸದ ಪ್ರತಿ ವಾರ ಎಣಿಕೆ ಕಾರ್ಯ ನಡೆಯಿತು.</p>.<p>ಹಣದ ಜೊತೆಯಲ್ಲಿ ಬೆಳ್ಳಿಯ ನಾಗರಸೆಡೆ, ತೊಟ್ಟಿಲು, ಕಣ್ಣು ಮತ್ತಿತರ ಆಕೃತಿಯ ವಸ್ತುಗಳನ್ನು ಕಾಣಿಕೆ ರೂಪದಲ್ಲಿ ಭಕ್ತರು ಹುಂಡಿಯಲ್ಲಿ ಹಾಕಿದ್ದರು.</p>.<p>ಕಾರ್ತೀಕ ಮಾಸದ 4 ವಾರಗಳಿಂದ ₹ 31,84,914 ಸಂಗ್ರಹವಾಗಿದ್ದು ಮುಜರಾಯಿ ಖಜಾನೆಗೆ ಅಧಿಕ ವರಮಾನ ನೀಡಿದೆ. ಒಟ್ಟು 22 ಹುಂಡಿಗಳನ್ನು ಕಂದಾಯ ಇಲಾಖೆಯವರು ಬೆಳಿಗ್ಗೆಯಿಂದ ಸಂಜೆಯವರೆಗೆ ಎಣಿಕೆ ಮಾಡಿದರು.</p>.<p>ಕಾಣಿಕೆ ಹಣವನ್ನು ಕೆ.ಆರ್.ಪೇಟೆಯ ಬ್ಯಾಂಕ್ ಆಫ್ ಬರೋಡಾದ ದೇಗುಲದ ಮುಜರಾಯಿ ಖಾತೆಗೆ ಜಮಾ ಮಾಡಲಾಯಿತು.</p>.<p>ಉಪತಹಶೀಲ್ದಾರ್ ವೀಣಾ, ಕಂದಾಯ ನಿರೀಕ್ಷಕ ಡಿ.ಆರ್.ನರೇಂದ್ರ, ಗ್ರಾಮ ಆಡಳಿತಾಧಿಕಾರಿ ಬಿ.ಎಂ. ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನೀಲ್ ಗಾಣಿಗೇರ್, ಹರ್ಷಿತಾ, ವನಜಾಕ್ಷಿ, ಮುಜರಾಯಿ ಸಹಾಯಕಿ ಪೂರ್ಣಿಮಾ, ಗ್ರಾಮ ಸಹಾಯಕರು, ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ, ಗ್ರಾಮದ ಮುಖಂಡರು ಭಾಗವಹಿಸಿದ್ದರು.<br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>