<p><strong>ಮಳವಳ್ಳಿ:</strong> ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿ ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸಲಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ₹1.43 ಕೋಟಿ ವೆಚ್ಚದ ಎರಡು ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ಹತ್ತಾರು ಯೋಜನೆಗಳ ಮೂಲಕ ಹಣ ತರಲಾಗಿದೆ. ಪ್ರಮುಖವಾಗಿ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದ ಶೆಟ್ಟಿಹಳ್ಳಿ ಗ್ರಾಮಸ್ಥರ ಸಾಕಷ್ಟು ವರ್ಷಗಳ ಬೇಡಿಕೆಯಾಗಿದ್ದ ಈ ಎರಡು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ಸಮೀಪವಿರುವ ಈ ಗ್ರಾಮದ ಪ್ರಗತಿಗೆ ಮತ್ತಷ್ಟು ನೆರವು ನೀಡಲಾಗುವುದು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್.ಕೆ.ಮನೋಹರ್ ಅರಸು, ಮುಖಂಡರಾದ ಆರ್.ಎನ್. ವಿಶ್ವಾಸ್, ಪ್ರದೀಪ್ ರಾಜೇ ಅರಸು, ಕಿರಣ್, ಸುರೇಶ್, ಚಿಕ್ಕಯ್ಯ, ಚಂದ್ರರಾಜೇ ಅರಸು, ಕರಿಗೌಡ, ಸಿ.ಮಾಧು, ಕೆ.ಜೆ. ದೇವರಾಜು, ಪ್ರಭುಸ್ವಾಮಿ, ಎಂ.ಲಿಂಗರಾಜು, ಟಿ.ಸಿ.ಚೌಡಯ್ಯ, ಚೇತನ್ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿ ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸಲಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ₹1.43 ಕೋಟಿ ವೆಚ್ಚದ ಎರಡು ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ಹತ್ತಾರು ಯೋಜನೆಗಳ ಮೂಲಕ ಹಣ ತರಲಾಗಿದೆ. ಪ್ರಮುಖವಾಗಿ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದ ಶೆಟ್ಟಿಹಳ್ಳಿ ಗ್ರಾಮಸ್ಥರ ಸಾಕಷ್ಟು ವರ್ಷಗಳ ಬೇಡಿಕೆಯಾಗಿದ್ದ ಈ ಎರಡು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ಸಮೀಪವಿರುವ ಈ ಗ್ರಾಮದ ಪ್ರಗತಿಗೆ ಮತ್ತಷ್ಟು ನೆರವು ನೀಡಲಾಗುವುದು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್.ಕೆ.ಮನೋಹರ್ ಅರಸು, ಮುಖಂಡರಾದ ಆರ್.ಎನ್. ವಿಶ್ವಾಸ್, ಪ್ರದೀಪ್ ರಾಜೇ ಅರಸು, ಕಿರಣ್, ಸುರೇಶ್, ಚಿಕ್ಕಯ್ಯ, ಚಂದ್ರರಾಜೇ ಅರಸು, ಕರಿಗೌಡ, ಸಿ.ಮಾಧು, ಕೆ.ಜೆ. ದೇವರಾಜು, ಪ್ರಭುಸ್ವಾಮಿ, ಎಂ.ಲಿಂಗರಾಜು, ಟಿ.ಸಿ.ಚೌಡಯ್ಯ, ಚೇತನ್ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>