<p><strong>ನಾಗಮಂಗಲ:</strong> ‘ಯಾವುದೇ ವ್ಯಕ್ತಿಯು ಜೀವನದಲ್ಲಿ ಅಳವಡಿಸಿಕೊಳ್ಳುವ ನಿರಂತರ ಓದು, ಶ್ರಮ ಮತ್ತು ಬದ್ಧತೆಯೇ ಯಶಸ್ಸಿನ ನಿಜವಾದ ಕೀಲಿ ಕೈ’ ಎಂದು ಸ್ಪರ್ಧಾಲೈನ್ ಮುಖ್ಯಸ್ಥ ರಘುನಾಥ ರೆಡ್ಡಿ ಹೇಳಿದರು.</p>.<p>ಪಟ್ಟಣದ ಮಾದರಿ ಶಾಲೆಯ ಆವರಣದಲ್ಲಿ ಭಾನುವಾರ ನಾಗಮಿತ್ರ ಅಕಾಡೆಮಿಗೆ ಚಾಲನೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಯುವ ಜನತೆ ಓದಿನಿಂದ ವಿಮುಖರಾಗಿ ತಮ್ಮ ಸುಂದರ ಬದುಕನ್ನು ತಾವೇ ಹಾಳು ಮಾಡಿಕೊಳ್ಳುತ್ತಿರುವುದು ದುರಂತ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆಯಿರುತ್ತದೆ. ಯಾರು ಬುದ್ಧಿಶಕ್ತಿಯನ್ನು ಸದ್ಭಳಕೆ ಮಾಡಿಕೊಳ್ಳುವರೋ ಅವರು ಯಶಸ್ವಿಯಾಗುತ್ತಾರೆ’ ಎಂದರು.</p>.<p>ಐ.ಎ.ಎಸ್ ಮತ್ತು ಕೆ.ಎ.ಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸ್ಪರ್ಧಾರ್ಥಿಯು ಮಾಡಿಕೊಳ್ಳಬೇಕಾದ ಸಿದ್ಧತೆಯ ಕುರಿತು ಮಾಹಿತಿ ನೀಡಿದರು.</p>.<p>ಸಾಹಿತಿ ನಾ.ಸು.ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾದರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಟಿ.ಕೃಷ್ಣೇಗೌಡ ಮಾತನಾಡಿದರು.</p>.<p>ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ ನಾಗಮಂಗಲದ ಸಿ.ಕೆ.ಸುರೇಶ್ ಅವರನ್ನು ಗೌರವಿಸಲಾಯಿತು. ಕಾರ್ಯಾಗಾರದಲ್ಲಿ 55 ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು.</p>.<p>ಸ್ಪರ್ಧಾಲೈನ್ನ ಪ್ರಾಣೇಶ್ ರಾಥೋಡ್, ವಿಶ್ವನಾಥ ರೆಡ್ಡಿ, ನಾಗಮಿತ್ರ ಅಕಾಡೆಮಿ ಸಂಚಾಲಕ ಮುಳಕಟ್ಟೆ ಸುರೇಶ್, ಧನಂಜಯ, ಎಂ.ಡಿ.ಶಿವಕುಮಾರ್, ಮಧು, ನಟರಾಜ್, ಎನ್.ಸಿ.ಶಿವಕುಮಾರ್, ಶಿವರಾಮ, ಸ್ವಾಮಿ, ಯೋಗೇಶ್, ಸೀಮಂತಿನಿ, ಗಾಯಿತ್ರಿ, ರಾಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ‘ಯಾವುದೇ ವ್ಯಕ್ತಿಯು ಜೀವನದಲ್ಲಿ ಅಳವಡಿಸಿಕೊಳ್ಳುವ ನಿರಂತರ ಓದು, ಶ್ರಮ ಮತ್ತು ಬದ್ಧತೆಯೇ ಯಶಸ್ಸಿನ ನಿಜವಾದ ಕೀಲಿ ಕೈ’ ಎಂದು ಸ್ಪರ್ಧಾಲೈನ್ ಮುಖ್ಯಸ್ಥ ರಘುನಾಥ ರೆಡ್ಡಿ ಹೇಳಿದರು.</p>.<p>ಪಟ್ಟಣದ ಮಾದರಿ ಶಾಲೆಯ ಆವರಣದಲ್ಲಿ ಭಾನುವಾರ ನಾಗಮಿತ್ರ ಅಕಾಡೆಮಿಗೆ ಚಾಲನೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಯುವ ಜನತೆ ಓದಿನಿಂದ ವಿಮುಖರಾಗಿ ತಮ್ಮ ಸುಂದರ ಬದುಕನ್ನು ತಾವೇ ಹಾಳು ಮಾಡಿಕೊಳ್ಳುತ್ತಿರುವುದು ದುರಂತ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆಯಿರುತ್ತದೆ. ಯಾರು ಬುದ್ಧಿಶಕ್ತಿಯನ್ನು ಸದ್ಭಳಕೆ ಮಾಡಿಕೊಳ್ಳುವರೋ ಅವರು ಯಶಸ್ವಿಯಾಗುತ್ತಾರೆ’ ಎಂದರು.</p>.<p>ಐ.ಎ.ಎಸ್ ಮತ್ತು ಕೆ.ಎ.ಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸ್ಪರ್ಧಾರ್ಥಿಯು ಮಾಡಿಕೊಳ್ಳಬೇಕಾದ ಸಿದ್ಧತೆಯ ಕುರಿತು ಮಾಹಿತಿ ನೀಡಿದರು.</p>.<p>ಸಾಹಿತಿ ನಾ.ಸು.ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾದರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಟಿ.ಕೃಷ್ಣೇಗೌಡ ಮಾತನಾಡಿದರು.</p>.<p>ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ ನಾಗಮಂಗಲದ ಸಿ.ಕೆ.ಸುರೇಶ್ ಅವರನ್ನು ಗೌರವಿಸಲಾಯಿತು. ಕಾರ್ಯಾಗಾರದಲ್ಲಿ 55 ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು.</p>.<p>ಸ್ಪರ್ಧಾಲೈನ್ನ ಪ್ರಾಣೇಶ್ ರಾಥೋಡ್, ವಿಶ್ವನಾಥ ರೆಡ್ಡಿ, ನಾಗಮಿತ್ರ ಅಕಾಡೆಮಿ ಸಂಚಾಲಕ ಮುಳಕಟ್ಟೆ ಸುರೇಶ್, ಧನಂಜಯ, ಎಂ.ಡಿ.ಶಿವಕುಮಾರ್, ಮಧು, ನಟರಾಜ್, ಎನ್.ಸಿ.ಶಿವಕುಮಾರ್, ಶಿವರಾಮ, ಸ್ವಾಮಿ, ಯೋಗೇಶ್, ಸೀಮಂತಿನಿ, ಗಾಯಿತ್ರಿ, ರಾಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>