ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಿದ್ದೆ ಮಾಡುತ್ತಿಲ್ಲ. ಡಿಕೆಶಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ಮಾಡುತ್ತಿದ್ದಾರೆ.– ಚಲುವರಾಯಸ್ವಾಮಿ, ಕೃಷಿ ಸಚಿವ
ರಾಜಭವನವನ್ನು ರಾಜಕೀಯಕ್ಕೆ ಬಳಸಿ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡಿಸಲು ಪಾದಯಾತ್ರೆಯ ನಾಟಕ ಶುರು ಮಾಡಿದ್ದಾರೆ. ರಾಜಭವನದಲ್ಲಿ ಕುಳಿತವರು ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕು.–ಎಚ್.ಕೆ.ಪಾಟೀಲ, ಕಾನೂನು ಸಚಿವ
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡಿದ ಅವ್ಯವಹಾರಗಳ ಬಗ್ಗೆ ಗ್ರಂಥವನ್ನೇ ಬರೆಯಬಹುದು. ಜೆಡಿಎಸ್ನವರು ಇಸ್ಪೀಟ್ ಆಟದಲ್ಲಿ ಬಳಸುವ ಜೋಕರ್ ಇದ್ದ ಹಾಗೆ. ಅವರ ನಡವಳಿಕೆ ಮತ್ತು ಹೇಳಿಕೆ ಎರಡೂ ತದ್ವಿರುದ್ಧ.– ಕೆ.ಎನ್.ರಾಜಣ್ಣ, ಸಹಕಾರ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.