ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಕಲ್ಯಾಣ ಯೋಜನೆ ನಿಲ್ಲಿಸಲು ಬಿಜೆಪಿಯಿಂದ ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್‌

ಮದ್ದೂರಿನಲ್ಲಿ ಜನಾಂದೋಲನ ಸಮಾವೇಶ
Published : 5 ಆಗಸ್ಟ್ 2024, 14:55 IST
Last Updated : 5 ಆಗಸ್ಟ್ 2024, 14:55 IST
ಫಾಲೋ ಮಾಡಿ
Comments
ಮದ್ದೂರು ಪಟ್ಟಣದಲ್ಲಿ ಸೋಮವಾರ ನಡೆದ ಬೈಕ್‌ ರ‍್ಯಾಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ನಾಯಕರು ಪಾಲ್ಗೊಂಡರು 
ಮದ್ದೂರು ಪಟ್ಟಣದಲ್ಲಿ ಸೋಮವಾರ ನಡೆದ ಬೈಕ್‌ ರ‍್ಯಾಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ನಾಯಕರು ಪಾಲ್ಗೊಂಡರು 
ಜನಾಂದೋಲನ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಭಿಕರು
ಜನಾಂದೋಲನ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಭಿಕರು
‘ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಮಾಡಿ’
ಚನ್ನಪಟ್ಟಣದಲ್ಲಿ ಒಬ್ಬರಿಗೆ ಒಂದೇ ಒಂದು ಸೈಟು ಮನೆ ರೈತರಿಗೆ ಭೂಮಿ ಕೊಟ್ಟಿಲ್ಲ. ತಮ್ಮದೇ ಪಕ್ಷದ ಕಾರ್ಯಕರ್ತರಿಗೆ ಒಂದೇ ಒಂದು ಸಹಾಯ ಮಾಡಿಲ್ಲ. ಜೆಡಿಎಸ್ ಅನ್ನು ಬಿಜೆಪಿ ಜೊತೆ ವಿಲೀನ ಮಾಡಿದರೆ ಈ ದೇಶ ಹಾಗೂ ರಾಜ್ಯಕ್ಕೆ ಒಳ್ಳೆಯದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.  ‘ಎಸ್.ಎಂ.ಕೃಷ್ಣ ಅವರ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆ ಇದೆಯೇ? ನೀನು ಪಾದಯಾತ್ರೆ ಮಾಡುತ್ತಿರುವ ರಸ್ತೆ ಕೃಷ್ಣ ಅವರು ಮಾಡಿದ್ದು. ಈ ರೀತಿಯ ಒಂದೇ ಒಂದು ಕೆಲಸ ಮಾಡಿದ್ದೀಯಾ. ಸೋಮನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶ ಮಾಡಿಸಿದ್ದಾರೆ. ಅವರಂತೆ ನಿನಗೆ ಮಾಡಲು ಆಗುತ್ತದೆಯೇ? ಕೇವಲ ಖಾಲಿ ಬುಡಬುಡಕೆ ಮಾತುಗಳು ಬೇಡ’ ಎಂದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ನಿದ್ದೆ ಮಾಡುತ್ತಿಲ್ಲ. ಡಿಕೆಶಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ಮಾಡುತ್ತಿದ್ದಾರೆ.
– ಚಲುವರಾಯಸ್ವಾಮಿ, ಕೃಷಿ ಸಚಿವ
ಸಿದ್ದರಾಮಯ್ಯ ಅಂಥ ತಪ್ಪು ಏನು ಮಾಡಿದ್ದಾರೆ?
ಸಿದ್ದರಾಮಯ್ಯ ಅವರು ಹಾಗೂ ಪತ್ನಿ ಮಾಡಬಾರದು ತಪ್ಪು ಮಾಡಿದ್ದಾರೆ ಎಂದು ಬಿಜೆಪಿ–ಜೆಡಿಎಸ್‌ ನಾಯಕರು ಬಿಂಬಿಸುತ್ತಿದ್ದಾರೆ. ಬಿಂಬಿಸಲಾಗುತ್ತಿದೆ. ಪಾರ್ವತಮ್ಮ ಅವರಿಗೆ ಅವರ ಅಣ್ಣ ಅರಿಶಿಣ ಕುಂಕುಮಕ್ಕೆ ಎಂದು ಮೂರು ಎಕರೆ ಜಮೀನು ನೀಡಿದ್ದಾರೆ. ಅದನ್ನು ‘ಮುಡಾ’ ಒತ್ತುವರಿ ಮಾಡಿಕೊಂಡ ಕಾರಣಕ್ಕೆ ಪರಿಹಾರವಾಗಿ ಸೈಟು ನೀಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದರು. ಬೈಕ್‌ ರ‍್ಯಾಲಿಯಲ್ಲಿ ಮಿಂಚಿದ ಡಿಕೆಶಿ‌ ವೇದಿಕೆ ಆರಂಭಕ್ಕೂ ಮುನ್ನ ಮದ್ದೂರು ತಾಲ್ಲೂಕಿನ ಗಡಿಭಾಗದಿಂದ ಸಭೆಯ ವೇದಿವರೆಗೂ ಡಿ.ಕೆ.ಶಿವಕುಮಾರ್‌ ಶಾಸಕ ಕೆ.ಎಂ.ಉದಯ್‌ ಸೇರಿದಂತೆ ಹಲವಾರು ನಾಯಕರು ಕಾರ್ಯಕರ್ತರೊಂದಿಗೆ ಬೈಕ್‌ ರ‍್ಯಾಲಿಯಲ್ಲಿ ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಮಧು ಜಿ.ಮಾದೇಗೌಡ ಅವರ ಗೈರು ಹಾಜರಿ ಎದ್ದು ಕಾಣುತ್ತಿತ್ತು.
ರಾಜಭವನವನ್ನು ರಾಜಕೀಯಕ್ಕೆ ಬಳಸಿ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡಿಸಲು ಪಾದಯಾತ್ರೆಯ ನಾಟಕ ಶುರು ಮಾಡಿದ್ದಾರೆ. ರಾಜಭವನದಲ್ಲಿ ಕುಳಿತವರು ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕು.
–ಎಚ್‌.ಕೆ.ಪಾಟೀಲ, ಕಾನೂನು ಸಚಿವ
‘ಗೃಹಲಕ್ಷ್ಮಿ ಹಣ ಬರುತ್ತಿಲ್ಲ’
ಡಿ.ಕೆ.ಶಿವಕುಮಾರ್ ಅವರು ಪಂಚ ಗ್ಯಾರಂಟಿ ಯೋಜನೆಗಳ ಒಂದೊಂದೇ ಹೆಸರನ್ನು ಹೇಳುತ್ತಾ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಹೇಳುತ್ತಿದ್ದಂತೆ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ‘ನಮಗೆ ಹಣ ಬರುತ್ತಿಲ್ಲ’ ಎಂದು ಜೋರಾಗಿ ಕೂಗಿದರು.  ಆಗ ಡಿ.ಕೆ.ಶಿವಕುಮಾರ್‌ ‘ಒಂದೆರಡು ತಿಂಗಳು ವ್ಯತ್ಯಾಸವಾಗಿರಬಹುದು. ಕೂಡಲೇ ಹಣ ಹಾಕಿಸಲು ಕ್ರಮ ಕೈಗೊಳ್ಳುತ್ತೇವೆ. ಬಡವರ ಮಹಿಳೆಯರ ರೈತರ ರಕ್ಷಣೆಗೆ ಈ ಸರ್ಕಾರವನ್ನು ಜನರು ಅಧಿಕಾರಕ್ಕೆ ತಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಎಷ್ಟು ವರ್ಷ ಇರುತ್ತದೆಯೋ ಅಷ್ಟು ವರ್ಷವೂ ನಮ್ಮ ತಾಯಂದಿರ ಖಾತೆಗೆ ಗೃಹಲಕ್ಷ್ಮೀ ಹಣ ಬರುತ್ತದೆ ಎಂದು ಭರವಸೆ ನೀಡಿದರು.
ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಮಾಡಿದ ಅವ್ಯವಹಾರಗಳ ಬಗ್ಗೆ ಗ್ರಂಥವನ್ನೇ ಬರೆಯಬಹುದು. ಜೆಡಿಎಸ್‌ನವರು ಇಸ್ಪೀಟ್‌ ಆಟದಲ್ಲಿ ಬಳಸುವ ಜೋಕರ್‌ ಇದ್ದ ಹಾಗೆ. ಅವರ ನಡವಳಿಕೆ ಮತ್ತು ಹೇಳಿಕೆ ಎರಡೂ ತದ್ವಿರುದ್ಧ.
– ಕೆ.ಎನ್‌.ರಾಜಣ್ಣ, ಸಹಕಾರ ಸಚಿವ
‘ನಿನ್ನ ಧಮ್ಕಿಗೆ ಮುಸ್ಲಿಮರು ಹೆದರುವುದಿಲ್ಲ’
‘ನಮಗೆ ಮತ ನೀಡದ ಮುಸ್ಲಿಮರ ಗತಿ ಏನಾಗುತ್ತದೆ ನೋಡಿ’ ಎಂದು ಕುಮಾರಸ್ವಾಮಿ ಧಮ್ಕಿ ಹಾಕಿದ್ದಾರೆ. ನೀವು ನಿಮ್ಮ ತಂದೆ ಮುಸ್ಲಿಂ ಮತದಾರರು ಇಲ್ಲದಿದ್ದರೇ ವಿಧಾನಸಭೆಗೆ ಹೋಗುತ್ತಲೇ ಇರಲಿಲ್ಲ. ಮಿಸ್ಟರ್ ಕುಮಾರಸ್ವಾಮಿ ನಿಮ್ಮ ತಂದೆ ಮುಂದಿನ ಜನ್ಮದಲ್ಲಿ ಹುಟ್ಟಿದರೆ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದರು. ಅದನ್ನು ನೆನಪಿನಲ್ಲಿಟ್ಟುಕೊಳ್ಳಿ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.  ‘ಕುವೆಂಪು ರಚಿಸಿದ ನಾಡಗೀತೆಯಲ್ಲಿ ಸರ್ವಜನಾಂಗದ ಶಾಂತಿಯ ತೋಟ ಎಂದು ಕರ್ನಾಟಕವನ್ನು ಕರೆಯಲಾಗಿದೆ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ಯಾರೂ ಬಗ್ಗುವುದಿಲ್ಲ. ಎಲ್ಲಾ ಧರ್ಮದವರು ಸಹೋದರರಂತೆ ಬಾಳಬೇಕು. ನಿಮ್ಮ ಧಮ್ಕಿಗೆ ಯಾವ ಮುಸಲ್ಮಾನ ಬಂಧುಗಳೂ ಹೆದರುವುದಿಲ್ಲ’ ಎಂದು ಗುಡುಗಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT