<p><strong>ಮದ್ದೂರು:</strong> ಎಂಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ನ ಹಲವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಬಲ, ಹುಮ್ಮಸ್ಸು ತಂದಿದೆ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ರಾತ್ರಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>ತಾಲ್ಲೂಕಿನಿಂದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೋಗಿಗೌಡ, ಸಂದರ್ಶ ಹಾಗೂ ಚೆಲುವರಾಜು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತಸ ತಂದಿದ್ದು, ಮುಂಬರುವ ಚುನಾವಣೆಗಳಿಗೆ ಇದು ದಿಕ್ಸೂಚಿಯಾಗಲಿದೆ ಎಂದರು.</p>.<p>‘ಮದ್ದೂರು ತಾಲ್ಲೂಕಿನಿಂದ ನಿರ್ದೇಶಕರಾದವರಿಗೂ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷದ ನಾಯಕರ ಬಳಿ ಒತ್ತಡ ಹೇರಲಾಗುವುದು’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ಪಕ್ಷದ ಕಾರ್ಯಕರ್ತರು, ಮುಖಂಡರು ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ದುಡಿಯುವುದರ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.</p>.<p>ಮನ್ಮುಲ್ ಅಧ್ಯಕ್ಷ ಶಿವಪ್ಪ, ಮುಖಂಡರಾದ ಸಿ.ಟಿ. ಶಂಕರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚೆಲುವರಾಜು, ಐಶ್ವರ್ಯಾ ಸತೀಶ್, ಕದಲೂರು ರವಿ, ಅಪ್ಪಾಜಿ ಗೌಡ, ಮುತ್ತುರಾಜು, ಯತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಎಂಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ನ ಹಲವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಬಲ, ಹುಮ್ಮಸ್ಸು ತಂದಿದೆ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ರಾತ್ರಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>ತಾಲ್ಲೂಕಿನಿಂದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೋಗಿಗೌಡ, ಸಂದರ್ಶ ಹಾಗೂ ಚೆಲುವರಾಜು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತಸ ತಂದಿದ್ದು, ಮುಂಬರುವ ಚುನಾವಣೆಗಳಿಗೆ ಇದು ದಿಕ್ಸೂಚಿಯಾಗಲಿದೆ ಎಂದರು.</p>.<p>‘ಮದ್ದೂರು ತಾಲ್ಲೂಕಿನಿಂದ ನಿರ್ದೇಶಕರಾದವರಿಗೂ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷದ ನಾಯಕರ ಬಳಿ ಒತ್ತಡ ಹೇರಲಾಗುವುದು’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ಪಕ್ಷದ ಕಾರ್ಯಕರ್ತರು, ಮುಖಂಡರು ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ದುಡಿಯುವುದರ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.</p>.<p>ಮನ್ಮುಲ್ ಅಧ್ಯಕ್ಷ ಶಿವಪ್ಪ, ಮುಖಂಡರಾದ ಸಿ.ಟಿ. ಶಂಕರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚೆಲುವರಾಜು, ಐಶ್ವರ್ಯಾ ಸತೀಶ್, ಕದಲೂರು ರವಿ, ಅಪ್ಪಾಜಿ ಗೌಡ, ಮುತ್ತುರಾಜು, ಯತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>