‘105 ಶಾಸಕರನ್ನು ಹೊಂದಿರುವ ಬಿಜೆಪಿಗೆ ನೈತಿಕ ಬಲ ಇದೆ. ಹೀಗಾಗಿ ಮಧ್ಯಂತರ ಚುನಾವಣೆಯ ಅವಶ್ಯಕತೆ ಉದ್ಬವಿಸುವುದಿಲ್ಲ. ಸಮ್ಮಿಶ್ರ ಸರ್ಕಾರದ ಕಲಹಗಳನ್ನು ನಮ್ಮ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರೂ ನಿರೀಕ್ಷೆ ಮಾಡದ ಶಾಸಕರು ರಾಜೀನಾಮೆ ನೀಡುತ್ತಾರೆ. ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ ಅವರಿಗೆ ಮಾತ್ರ ಈ ಸರ್ಕಾರ ಬೇಕಾಗಿದೆ. ಸಿದ್ದರಾಮಯ್ಯ ಅವರಿಗೂ ಈ ಸರ್ಕಾರ ಬೇಕಾಗಿಲ್ಲ. ಯಾವಾಗ ತೊಲಗುತ್ತದೋ ಎಂದು ಅವರು ಕಾಯುತ್ತಿದ್ದಾರೆ’ ಎಂದರು.