<p><strong>ಮಂಡ್ಯ</strong>: 'ದೇಶದ 26 ರಾಜ್ಯಗಳಲ್ಲಿ ಕಾಂಗ್ರೆಸ್ ಉಸಿರಾಟ ನಿಂತಿದೆ. ಕರ್ನಾಟಕದಲ್ಲಿ ಅಷ್ಟು ಇಷ್ಟು ಉಸಿರಾಡುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಇಲ್ಲೂ ಕಾಂಗ್ರೆಸ್ ಉಸಿರು ನಿಲ್ಲಲಿದೆ' ಎಂದು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.</p>.<p>ವಿಧಾನ ಪರಿಷತ್ ಚುನಾವಣೆ ಅಂಗವಾಗಿ ನಗರದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>'400 ಸ್ಥಾನಗಳಲ್ಲಿ ಗೆಲ್ಲುತ್ತಿದ್ದ ಕಾಂಗ್ರೆಸ್ ಈಗ 40-45 ಸ್ಥಾನದಲ್ಲಿ ಗೆಲ್ಲುವ ಸ್ಥಿತಿಗೆ ಬಂದು ನಿಂತಿದೆ. ಲೋಕಸಭೆಯಲ್ಲಿ ಪ್ರಾತಿನಿಧ್ಯ ಇಲ್ಲದೆ ಮರ್ಯಾದೆ ಕಳೆದುಕೊಂಡಿದೆ' ಎಂದರು.</p>.<p>'ನರೇಂದ್ರ ಮೋದಿ ಅವರ ನಾಯಕತ್ವದಿಂದಾಗಿ ಇಡೀ ವಿಶ್ವ ಭಾರತದತ್ತ ನೋಡುತ್ತಿದೆ. ಅವರ ಪಕ್ಷದಲ್ಲಿ ನಾವೆಲ್ಲಾ ಸದಸ್ಯರಾಗಿದ್ದೇವೆ ಎಂಬುದೇ ನಮ್ಮ ಪುಣ್ಯ' ಎಂದರು.</p>.<p>'ನಾನು ಈಗಿನಿಂದಲೇ ರಾಜ್ಯ ಪ್ರವಾಸ ಮಾಡುತ್ತೇನೆ. ಮುಂಬರುವ ಚುನಾವಣೆಯಲ್ಲಿ 140 ಸ್ಥಾನ ಗಳಿಸಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಮುಂದಿನ ಗುರಿ' ಎಂದರು.</p>.<p>'ವಿಧಾನ ಪರಿಷತ್ ಚುನಾವಣೆ, ಮಂಡ್ಯದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿ ಇಲ್ಲದ ಕಡೆಯಲ್ಲಿ ಬೆಂಬಲ ನೀಡುವಂತೆ ಕೇಳಿದ್ದಾರೆ. ನಮ್ಮ ಅಭ್ಯರ್ಥಿ ಇರುವ ಕಡೆ ಹೊಂದಾಣಿಕೆ ಇಲ್ಲ' ಎಂದರು.</p>.<p><strong>ಇದನ್ನೂ ಓದಿ:<a href="https://www.prajavani.net/district/davanagere/karnataka-cabinet-may-expand-bjp-bs-yediyurappa-889842.html" target="_blank">ಸಂಪುಟ ವಿಸ್ತರಣೆಯ ನಿರೀಕ್ಷೆ ಇದೆ: ಬಿಎಸ್ವೈ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: 'ದೇಶದ 26 ರಾಜ್ಯಗಳಲ್ಲಿ ಕಾಂಗ್ರೆಸ್ ಉಸಿರಾಟ ನಿಂತಿದೆ. ಕರ್ನಾಟಕದಲ್ಲಿ ಅಷ್ಟು ಇಷ್ಟು ಉಸಿರಾಡುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಇಲ್ಲೂ ಕಾಂಗ್ರೆಸ್ ಉಸಿರು ನಿಲ್ಲಲಿದೆ' ಎಂದು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.</p>.<p>ವಿಧಾನ ಪರಿಷತ್ ಚುನಾವಣೆ ಅಂಗವಾಗಿ ನಗರದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>'400 ಸ್ಥಾನಗಳಲ್ಲಿ ಗೆಲ್ಲುತ್ತಿದ್ದ ಕಾಂಗ್ರೆಸ್ ಈಗ 40-45 ಸ್ಥಾನದಲ್ಲಿ ಗೆಲ್ಲುವ ಸ್ಥಿತಿಗೆ ಬಂದು ನಿಂತಿದೆ. ಲೋಕಸಭೆಯಲ್ಲಿ ಪ್ರಾತಿನಿಧ್ಯ ಇಲ್ಲದೆ ಮರ್ಯಾದೆ ಕಳೆದುಕೊಂಡಿದೆ' ಎಂದರು.</p>.<p>'ನರೇಂದ್ರ ಮೋದಿ ಅವರ ನಾಯಕತ್ವದಿಂದಾಗಿ ಇಡೀ ವಿಶ್ವ ಭಾರತದತ್ತ ನೋಡುತ್ತಿದೆ. ಅವರ ಪಕ್ಷದಲ್ಲಿ ನಾವೆಲ್ಲಾ ಸದಸ್ಯರಾಗಿದ್ದೇವೆ ಎಂಬುದೇ ನಮ್ಮ ಪುಣ್ಯ' ಎಂದರು.</p>.<p>'ನಾನು ಈಗಿನಿಂದಲೇ ರಾಜ್ಯ ಪ್ರವಾಸ ಮಾಡುತ್ತೇನೆ. ಮುಂಬರುವ ಚುನಾವಣೆಯಲ್ಲಿ 140 ಸ್ಥಾನ ಗಳಿಸಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಮುಂದಿನ ಗುರಿ' ಎಂದರು.</p>.<p>'ವಿಧಾನ ಪರಿಷತ್ ಚುನಾವಣೆ, ಮಂಡ್ಯದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿ ಇಲ್ಲದ ಕಡೆಯಲ್ಲಿ ಬೆಂಬಲ ನೀಡುವಂತೆ ಕೇಳಿದ್ದಾರೆ. ನಮ್ಮ ಅಭ್ಯರ್ಥಿ ಇರುವ ಕಡೆ ಹೊಂದಾಣಿಕೆ ಇಲ್ಲ' ಎಂದರು.</p>.<p><strong>ಇದನ್ನೂ ಓದಿ:<a href="https://www.prajavani.net/district/davanagere/karnataka-cabinet-may-expand-bjp-bs-yediyurappa-889842.html" target="_blank">ಸಂಪುಟ ವಿಸ್ತರಣೆಯ ನಿರೀಕ್ಷೆ ಇದೆ: ಬಿಎಸ್ವೈ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>