<p><strong>ನಾಗಮಂಗಲ</strong>: ತಾಲ್ಲೂಕಿನ ದೇವರಹಳ್ಳಿಯ ತಪಸೀರಾಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ಕುಸಿದ ಪರಿಣಾಮ ಕಾರ್ಮಿಕ ಕಲಬುರಗಿ ಜಿಲ್ಲೆಯ ಶರಣ್ (27) ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಕಾರ್ಮಿಕರು ಕಬ್ಬಿಣದ ಸರಳು ಮತ್ತು ಸೆಂಟ್ರಿಂಗ್ ಮಧ್ಯೆ ಸಿಲುಕಿ ಗಾಯಗೊಂಡಿದ್ದು, ಹೊರಬರಲಾರದೆ ಗಂಭೀರವಾಗಿ ಗಾಯಗೊಂಡಿದ್ದರು. ಜೆಸಿಬಿ ಯಂತ್ರದ ಮೂಲಕ ಹೊರತೆಗೆದು ತಾಲ್ಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಶರಣ್ ಮೃತಪಟ್ಟಿದ್ದಾರೆ.</p>.<p>ಗಾಯಾಳುಗಳ ಪೈಕಿ ಒಬ್ಬ ಕಾರ್ಮಿಕನಿಗೆ ಕಾಲು ಮುರಿದಿದ್ದು, ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.</p>.<p>ದೇವಸ್ಥಾನದ ಮುಂಭಾಗದಲ್ಲಿ ದಾನಿಗಳ ನೆರವಿನಿಂದ 20 ಅಡಿ ಎತ್ತರ ಮತ್ತು 35ಅಡಿ ಉದ್ದದ ಮಹಾದ್ವಾರ ನಿರ್ಮಾಣ ನಡೆಯುತ್ತಿತ್ತು. ಮೇಲ್ಛಾವಣಿಗೆ ಕಾಂಕ್ರೀಟ್ ಹಾಕಲು ಸೆಂಟ್ರಿಂಗ್ ಹೊಡೆದು ಕಬ್ಬಿಣ ಕಟ್ಟಲಾಗಿತ್ತು. ಸೋಮವಾರ ಕಾಂಕ್ರೀಟ್ ಹಾಕುವ ವೇಳೆ ಕುಸಿತ ಸಂಭವಿಸಿದೆ.</p>.<p>ಮಾಹಿತಿ ತಿಳಿದು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ರಾಜೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶರಣ್ ಮೃತದೇಹವನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ವರ್ಗಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ತಾಲ್ಲೂಕಿನ ದೇವರಹಳ್ಳಿಯ ತಪಸೀರಾಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ಕುಸಿದ ಪರಿಣಾಮ ಕಾರ್ಮಿಕ ಕಲಬುರಗಿ ಜಿಲ್ಲೆಯ ಶರಣ್ (27) ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಕಾರ್ಮಿಕರು ಕಬ್ಬಿಣದ ಸರಳು ಮತ್ತು ಸೆಂಟ್ರಿಂಗ್ ಮಧ್ಯೆ ಸಿಲುಕಿ ಗಾಯಗೊಂಡಿದ್ದು, ಹೊರಬರಲಾರದೆ ಗಂಭೀರವಾಗಿ ಗಾಯಗೊಂಡಿದ್ದರು. ಜೆಸಿಬಿ ಯಂತ್ರದ ಮೂಲಕ ಹೊರತೆಗೆದು ತಾಲ್ಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಶರಣ್ ಮೃತಪಟ್ಟಿದ್ದಾರೆ.</p>.<p>ಗಾಯಾಳುಗಳ ಪೈಕಿ ಒಬ್ಬ ಕಾರ್ಮಿಕನಿಗೆ ಕಾಲು ಮುರಿದಿದ್ದು, ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.</p>.<p>ದೇವಸ್ಥಾನದ ಮುಂಭಾಗದಲ್ಲಿ ದಾನಿಗಳ ನೆರವಿನಿಂದ 20 ಅಡಿ ಎತ್ತರ ಮತ್ತು 35ಅಡಿ ಉದ್ದದ ಮಹಾದ್ವಾರ ನಿರ್ಮಾಣ ನಡೆಯುತ್ತಿತ್ತು. ಮೇಲ್ಛಾವಣಿಗೆ ಕಾಂಕ್ರೀಟ್ ಹಾಕಲು ಸೆಂಟ್ರಿಂಗ್ ಹೊಡೆದು ಕಬ್ಬಿಣ ಕಟ್ಟಲಾಗಿತ್ತು. ಸೋಮವಾರ ಕಾಂಕ್ರೀಟ್ ಹಾಕುವ ವೇಳೆ ಕುಸಿತ ಸಂಭವಿಸಿದೆ.</p>.<p>ಮಾಹಿತಿ ತಿಳಿದು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ರಾಜೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶರಣ್ ಮೃತದೇಹವನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ವರ್ಗಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>