<p><strong>ಮಳವಳ್ಳಿ (ಮಂಡ್ಯ):</strong> ಕಲುಷಿತ ಆಹಾರ ಸೇವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮೂರು ಶಾಲೆಗಳ ಮಾನ್ಯತೆಯನ್ನು ಡಿಡಿಪಿಐ ಎಚ್. ಶಿವರಾಮೇಗೌಡ ರದ್ದುಪಡಿಸಿದ್ದಾರೆ.</p><p>ಮಾರ್ಚ್ 16ರಂದು ಉದ್ಯಮಿಯೊಬ್ಬರು ನೀಡಿದ್ದ ಕಲುಷಿತ ಆಹಾರ ಸೇವಿಸಿ ಮೇಘಾಲಯ ಮೂಲದ ಕೇರ್ಲಾಂಗ್ (13) ಮತ್ತು ನಮೀಬ್ ಮಾಂತೆ (14) ಎಂಬ ವಿದ್ಯಾರ್ಥಿಗಳು ಮೃತಪಟ್ಟಿದ್ದರು. 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. </p><p>ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಟಿ.ಕಾಗೇಪುರ ಹಾಗೂ ಕಿರುಗಾವಲು ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ ಹಿಂಪಡೆದು ಆ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ಪರ್ಯಾಯ ದಾಖಲಾತಿ ವ್ಯವಸ್ಥೆ ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ. ಉಮಾ ಅವರಿಗೆ ಡಿಡಿಪಿಐ ಎಚ್.ಶಿವರಾಮೇಗೌಡ ಆದೇಶಿಸಿದ್ದಾರೆ.</p><p>2024-25ನೇ ಸಾಲಿನಲ್ಲಿ ಕಿರುಗಾವಲು ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 126, ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಕನ್ನಡ ಮಾಧ್ಯಮ) 202 ಹಾಗೂ ಗೋಕುಲ ಪಬ್ಲಿಕ್ ಶಾಲೆಯಲ್ಲಿ (ಆಂಗ್ಲ ಮಾಧ್ಯಮ) 15 ವಿದ್ಯಾರ್ಥಿಗಳು ದಾಖಲಾಗಿದ್ದರು.</p><p>‘ಮೇಘಾಲಯ ಮೂಲದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಅಕ್ರಮವಾಗಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ಬೇರೆ ಶಾಲೆಯ ಹೆಸರಿನಲ್ಲಿ ಅನಧಿಕೃತವಾಗಿ ಎಸ್ಎಸ್ಎಲ್ಸಿವರೆಗೆ ತರಗತಿ ನಡೆಸುತ್ತಿದ್ದರು’ ಎಂಬ ಆರೋಪ ಕೇಳಿಬಂದಿದೆ.</p>.ಮಳವಳ್ಳಿ | ಕಲುಷಿತ ಆಹಾರ ಪ್ರಕರಣ: ಶೈಕ್ಷಣಿಕ ಚಟುವಟಿಕೆ ಸ್ಥಗಿತ; ಪೋಷಕರ ಆತಂಕ.ಸಂಪಾದಕೀಯ | ಮಳವಳ್ಳಿ: ಕಲುಷಿತ ಆಹಾರ ಸೇವನೆ ಕಾನೂನು, ಸಮುದಾಯದ ನಿಗಾ ಅಗತ್ಯ.PODCAST | ಮಳವಳ್ಳಿ: ಕಲುಷಿತ ಆಹಾರ ಸೇವನೆ; ಕಾನೂನು, ಸಮುದಾಯದ ನಿಗಾ ಅಗತ್ಯ.ಮಳವಳ್ಳಿ | ಕಲುಷಿತ ಆಹಾರ ಸೇವನೆ: ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ):</strong> ಕಲುಷಿತ ಆಹಾರ ಸೇವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಮೂರು ಶಾಲೆಗಳ ಮಾನ್ಯತೆಯನ್ನು ಡಿಡಿಪಿಐ ಎಚ್. ಶಿವರಾಮೇಗೌಡ ರದ್ದುಪಡಿಸಿದ್ದಾರೆ.</p><p>ಮಾರ್ಚ್ 16ರಂದು ಉದ್ಯಮಿಯೊಬ್ಬರು ನೀಡಿದ್ದ ಕಲುಷಿತ ಆಹಾರ ಸೇವಿಸಿ ಮೇಘಾಲಯ ಮೂಲದ ಕೇರ್ಲಾಂಗ್ (13) ಮತ್ತು ನಮೀಬ್ ಮಾಂತೆ (14) ಎಂಬ ವಿದ್ಯಾರ್ಥಿಗಳು ಮೃತಪಟ್ಟಿದ್ದರು. 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. </p><p>ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಟಿ.ಕಾಗೇಪುರ ಹಾಗೂ ಕಿರುಗಾವಲು ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ ಹಿಂಪಡೆದು ಆ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ಪರ್ಯಾಯ ದಾಖಲಾತಿ ವ್ಯವಸ್ಥೆ ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ. ಉಮಾ ಅವರಿಗೆ ಡಿಡಿಪಿಐ ಎಚ್.ಶಿವರಾಮೇಗೌಡ ಆದೇಶಿಸಿದ್ದಾರೆ.</p><p>2024-25ನೇ ಸಾಲಿನಲ್ಲಿ ಕಿರುಗಾವಲು ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 126, ಗೋಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಕನ್ನಡ ಮಾಧ್ಯಮ) 202 ಹಾಗೂ ಗೋಕುಲ ಪಬ್ಲಿಕ್ ಶಾಲೆಯಲ್ಲಿ (ಆಂಗ್ಲ ಮಾಧ್ಯಮ) 15 ವಿದ್ಯಾರ್ಥಿಗಳು ದಾಖಲಾಗಿದ್ದರು.</p><p>‘ಮೇಘಾಲಯ ಮೂಲದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಅಕ್ರಮವಾಗಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ಬೇರೆ ಶಾಲೆಯ ಹೆಸರಿನಲ್ಲಿ ಅನಧಿಕೃತವಾಗಿ ಎಸ್ಎಸ್ಎಲ್ಸಿವರೆಗೆ ತರಗತಿ ನಡೆಸುತ್ತಿದ್ದರು’ ಎಂಬ ಆರೋಪ ಕೇಳಿಬಂದಿದೆ.</p>.ಮಳವಳ್ಳಿ | ಕಲುಷಿತ ಆಹಾರ ಪ್ರಕರಣ: ಶೈಕ್ಷಣಿಕ ಚಟುವಟಿಕೆ ಸ್ಥಗಿತ; ಪೋಷಕರ ಆತಂಕ.ಸಂಪಾದಕೀಯ | ಮಳವಳ್ಳಿ: ಕಲುಷಿತ ಆಹಾರ ಸೇವನೆ ಕಾನೂನು, ಸಮುದಾಯದ ನಿಗಾ ಅಗತ್ಯ.PODCAST | ಮಳವಳ್ಳಿ: ಕಲುಷಿತ ಆಹಾರ ಸೇವನೆ; ಕಾನೂನು, ಸಮುದಾಯದ ನಿಗಾ ಅಗತ್ಯ.ಮಳವಳ್ಳಿ | ಕಲುಷಿತ ಆಹಾರ ಸೇವನೆ: ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>