<p><strong>ನಾಗಮಂಗಲ: </strong>ತಾಲ್ಲೂಕಿನ ಹೊನ್ನಾವರ ಗ್ರಾಮದ ಮನೆಗಳಿಗೆ ಪೂರೈಕೆ ಮಾಡುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದೆ.</p>.<p>ಪೈಪ್ಲೈನ್ ಒಡೆದಿದ್ದು, ಚರಂಡಿ ನೀರು ಸೇರ್ಪಡೆಯಾಗಿ ಮನೆಗಳಿಗೆ ಪೂರೈಕೆಯಾಗುತ್ತಿದೆ. ಈ ನೀರು ದುರ್ವಾಸನೆ ಬೀರುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿವೃತ್ತ ಶಿಕ್ಷಕ ಶಿವಲಿಂಗಯ್ಯ ದೂರಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಒ ಶಿವಕುಮಾರ್, ‘ಹೊನ್ನಾವರ ಗ್ರಾಮದಲ್ಲಿ ವಿದ್ಯುತ್ ಕಂಬವನ್ನು ಬದಲಾವಣೆ ಮಾಡುವ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಒಡೆದು ಪಕ್ಕದಲ್ಲೇ ಇರುವ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ. ಇದನ್ನು ಮಂಗಳವಾರ ದುರಸ್ತಿ ಪಡಿಸಲಾಗುವುದು’ ಎಂದು ಹೇಳಿದ್ದಾರೆ.</p>.<p>ನಾಗಮಂಗಲ ಪುರಸಭೆಯ 4ನೇ ವಾರ್ಡ್ನ ಹಲವು ಮನೆಗಳಿಗೂ ಮಂಗಳವಾರ ಹಸಿರು ಬಣ್ಣದಿಂದ ಕೂಡಿದ ನೀರು ಸರಬರಾಜಾಗಿದೆ. ‘ಪಟ್ಟಣದ 4ನೇ ವಾರ್ಡ್ನಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಕುರಿತು ನಮಗೆ ಯಾವುದೇ ಮಾಹಿತಿಯಿಲ್ಲ. ಈ ಬಗ್ಗೆ ಪರಿಶೀಲಿಸಲು ನೀರು ಪೂರೈಕೆ ವಿಭಾಗದ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ಪುರಸಭೆ ಮುಖ್ಯಾಧಿಕಾರಿ ಶೈಲಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ: </strong>ತಾಲ್ಲೂಕಿನ ಹೊನ್ನಾವರ ಗ್ರಾಮದ ಮನೆಗಳಿಗೆ ಪೂರೈಕೆ ಮಾಡುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದೆ.</p>.<p>ಪೈಪ್ಲೈನ್ ಒಡೆದಿದ್ದು, ಚರಂಡಿ ನೀರು ಸೇರ್ಪಡೆಯಾಗಿ ಮನೆಗಳಿಗೆ ಪೂರೈಕೆಯಾಗುತ್ತಿದೆ. ಈ ನೀರು ದುರ್ವಾಸನೆ ಬೀರುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿವೃತ್ತ ಶಿಕ್ಷಕ ಶಿವಲಿಂಗಯ್ಯ ದೂರಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಒ ಶಿವಕುಮಾರ್, ‘ಹೊನ್ನಾವರ ಗ್ರಾಮದಲ್ಲಿ ವಿದ್ಯುತ್ ಕಂಬವನ್ನು ಬದಲಾವಣೆ ಮಾಡುವ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಒಡೆದು ಪಕ್ಕದಲ್ಲೇ ಇರುವ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ. ಇದನ್ನು ಮಂಗಳವಾರ ದುರಸ್ತಿ ಪಡಿಸಲಾಗುವುದು’ ಎಂದು ಹೇಳಿದ್ದಾರೆ.</p>.<p>ನಾಗಮಂಗಲ ಪುರಸಭೆಯ 4ನೇ ವಾರ್ಡ್ನ ಹಲವು ಮನೆಗಳಿಗೂ ಮಂಗಳವಾರ ಹಸಿರು ಬಣ್ಣದಿಂದ ಕೂಡಿದ ನೀರು ಸರಬರಾಜಾಗಿದೆ. ‘ಪಟ್ಟಣದ 4ನೇ ವಾರ್ಡ್ನಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿರುವ ಕುರಿತು ನಮಗೆ ಯಾವುದೇ ಮಾಹಿತಿಯಿಲ್ಲ. ಈ ಬಗ್ಗೆ ಪರಿಶೀಲಿಸಲು ನೀರು ಪೂರೈಕೆ ವಿಭಾಗದ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ಪುರಸಭೆ ಮುಖ್ಯಾಧಿಕಾರಿ ಶೈಲಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>