ಮಂಡ್ಯ: ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ಜಿಲ್ಲಾ ಘಟಕ, ಅನನ್ಯ ಆರ್ಟ್ಸ್ ಸಂಸ್ಥೆ ವತಿಯಿಂದ ಸೆ. 26ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಅಚೀವರ್ಸ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ‘ಭಾರತೀಯ ಶಿಕ್ಷಣ– ಅನುಷ್ಠಾನದಲ್ಲಿ ಮೋದಿ ಸರ್ಕಾರದ ಹೆಜ್ಜೆಗಳು ಹಾಗೂ ಸವಾಲುಗಳು’ ಸಂವಾದ ಕಾರ್ಯಕ್ರಮ ಹಾಗೂ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಾ.ಸುಧಾಕರ ಹೊಸಳ್ಳಿ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.