<p><strong>ಭಾರತೀನಗರ</strong>: ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಭಾರತೀ ವಿದ್ಯಾಸಂಸ್ಥೆ ಕೈಜೋಡಿಸಲಿದೆ’ ಎಂದು ಭಾರತೀ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧುಮಾದೇಗೌಡ ಅವರು ತಿಳಿಸಿದರು.</p>.<p>ಇಲ್ಲಿನ ಬಿದರಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರ ವಿತರಿಸಿದ ನಂತರ ಅವರು ಮಾತನಾಡಿದರು.</p>.<p>‘ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಗುಣಮಟ್ಟದ ಶಿಕ್ಷಣ ನೀಡಬೇಕು. ಈಗಾಗಲೇ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅಡಿಯಲ್ಲಿ ಹಲವು ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸುತ್ತ-ಮುತ್ತಲಿನ ಶಾಲೆಗಳಿಗೆ ಪಿಠೋಪಕರಣ ಸೇರಿದಂತೆ ಹಲವಾರು ಪರಿಕರಗಳನ್ನು ವಿತರಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಮಾಜಿ ಸಂಸದ ಜಿ.ಮಾದೇಗೌಡ ಅವರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಕುಗ್ರಾಮವಾದ ಕಾಳಮುದ್ದನದೊಡ್ಡಿಯಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ಮಂದಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅವರ ಆಶಯದಂತೆ ಮುನ್ನಡೆಯುತ್ತಿದ್ದೇವೆ’ ಎಂದರು.</p>.<p>‘ಜಿಲ್ಲೆಯ ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದು ನಮಗೂ ನೋವು ತಂದಿದೆ. ಈಗಾಗಲೇ ವಿಧಾನ ಪರಿಷತ್ ಸದಸ್ಯ ಮಧುಮಾದೇಗೌಡ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದೊಟ್ಟಿಗೆ ಚರ್ಚೆ ನಡೆಸಿ ನೀರು ನಿಲುಗಡೆಗೆ ಕ್ರಮವಹಿಸಲಿದ್ದಾರೆ’ ಎಂದು ಹೇಳಿದರು.</p>.<p>ತಾ.ಪಂ ಮಾಜಿ ಸದಸ್ಯ ಗಿರೀಶ್, ಅಣ್ಣೂರು ಸೊಸೈಟಿ ನಿರ್ದೇಶಕ ಆರ್.ಸಿದ್ದಪ್ಪ, ಮುಖ್ಯಶಿಕ್ಷಕರಾದ ಮಹದೇವಯ್ಯ, ಕಾಳಪ್ಪ, ಬಸವರಾಜು, ನಾಗರತ್ನ, ಮುಖಂಡರಾದ ಪ್ರಮೋದ್, ಕಿರಣ್, ನಾಡಗೌಡ ಹನುಮಂತು, ಪ್ರಸನ್ನ, ನಿಖಿಲ್, ಎಸ್ ಡಿ ಎಂ ಸಿ ಸದಸ್ಯ ರವಿ, ಮಾದೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ</strong>: ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಭಾರತೀ ವಿದ್ಯಾಸಂಸ್ಥೆ ಕೈಜೋಡಿಸಲಿದೆ’ ಎಂದು ಭಾರತೀ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧುಮಾದೇಗೌಡ ಅವರು ತಿಳಿಸಿದರು.</p>.<p>ಇಲ್ಲಿನ ಬಿದರಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರ ವಿತರಿಸಿದ ನಂತರ ಅವರು ಮಾತನಾಡಿದರು.</p>.<p>‘ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಗುಣಮಟ್ಟದ ಶಿಕ್ಷಣ ನೀಡಬೇಕು. ಈಗಾಗಲೇ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅಡಿಯಲ್ಲಿ ಹಲವು ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸುತ್ತ-ಮುತ್ತಲಿನ ಶಾಲೆಗಳಿಗೆ ಪಿಠೋಪಕರಣ ಸೇರಿದಂತೆ ಹಲವಾರು ಪರಿಕರಗಳನ್ನು ವಿತರಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಮಾಜಿ ಸಂಸದ ಜಿ.ಮಾದೇಗೌಡ ಅವರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಕುಗ್ರಾಮವಾದ ಕಾಳಮುದ್ದನದೊಡ್ಡಿಯಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ಮಂದಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅವರ ಆಶಯದಂತೆ ಮುನ್ನಡೆಯುತ್ತಿದ್ದೇವೆ’ ಎಂದರು.</p>.<p>‘ಜಿಲ್ಲೆಯ ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದು ನಮಗೂ ನೋವು ತಂದಿದೆ. ಈಗಾಗಲೇ ವಿಧಾನ ಪರಿಷತ್ ಸದಸ್ಯ ಮಧುಮಾದೇಗೌಡ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದೊಟ್ಟಿಗೆ ಚರ್ಚೆ ನಡೆಸಿ ನೀರು ನಿಲುಗಡೆಗೆ ಕ್ರಮವಹಿಸಲಿದ್ದಾರೆ’ ಎಂದು ಹೇಳಿದರು.</p>.<p>ತಾ.ಪಂ ಮಾಜಿ ಸದಸ್ಯ ಗಿರೀಶ್, ಅಣ್ಣೂರು ಸೊಸೈಟಿ ನಿರ್ದೇಶಕ ಆರ್.ಸಿದ್ದಪ್ಪ, ಮುಖ್ಯಶಿಕ್ಷಕರಾದ ಮಹದೇವಯ್ಯ, ಕಾಳಪ್ಪ, ಬಸವರಾಜು, ನಾಗರತ್ನ, ಮುಖಂಡರಾದ ಪ್ರಮೋದ್, ಕಿರಣ್, ನಾಡಗೌಡ ಹನುಮಂತು, ಪ್ರಸನ್ನ, ನಿಖಿಲ್, ಎಸ್ ಡಿ ಎಂ ಸಿ ಸದಸ್ಯ ರವಿ, ಮಾದೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>