‘ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸೈನಿಕರ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಪ್ರಾಣ ಒತ್ತೆ ಇಟ್ಟು ಸಾರ್ವಜನಿಕರ ಪ್ರಾಣ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಜನರು ಅವರಿಗೆ ಯಾವುದೇ ತೊಂದರೆ ನೀಡಬಾರದು. ವೈದ್ಯರು, ನರ್ಸ್ಗಳನ್ನು ಬಾಡಿಗೆ ಮನೆಯಿಂದ ಖಾಲಿ ಮಾಡಿಸಬಾರದು. ಪೊಲೀಸರ ಮೇಲೆ ಹಲ್ಲೆ ಮಾಡಬಾರದು’ ಎಂದು ಮನವಿ ಮಾಡಿದರು.