<p><strong>ಮಂಡ್ಯ: </strong>ಶುಕ್ರವಾರ ಒಂದೇ ದಿನ 33 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 473ಕ್ಕೆ ಏರಿಕೆಯಾಗಿದೆ.</p>.<p>ಒಟ್ಟು ಸೋಂಕಿತರಲ್ಲಿ ನಾಲ್ಕು ಮಂದಿ ಬೆಂಗಳೂರಿನಿಂದ ಜಿಲ್ಲೆಗೆ ಪ್ರಯಾಣಿಸಿದ್ದಾರೆ. ಅವರಲ್ಲಿ ಇಬ್ಬರು ನಾಗಮಂಗಲ ತಾಲ್ಲೂಕು, ಒಬ್ಬರು ಮಂಡ್ಯ ಹಾಗೂ ಒಬ್ಬರು ಮಳವಳ್ಳಿ ತಾಲ್ಲೂಕಿಗೆ ಸೇರಿದ್ದಾರೆ. ಮೈಸೂರಿನಿಂದ ಮಳವಳ್ಳಿಗೆ ಬಂದ ಒಬ್ಬ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದೆ. ಇವರಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ.</p>.<p>ಬಿಹಾರದಿಂದ ಮದ್ದೂರಿಗೆ ಮರಳಿದ್ದ 23 ವರ್ಷದ ಯುವಕನಿಗೆ (ಪಿ–18036) ಕೋವಿಡ್ ಕಾಣಿಸಿಕೊಂಡಿದೆ. ಪಶ್ಚಿಮ ಬಂಗಾಳದಿಂದ ಮದ್ದೂರು ತಾಲ್ಲೂಕಿಗೆ ಮರಳಿದ್ದ ಮತ್ತೊಬ್ಬ 38 ವರ್ಷದ ವ್ಯಕ್ತಿಯಲ್ಲೂ (ಪಿ– 18065)ಸೋಂಕು ಪತ್ತೆಯಾಗಿದೆ. 11,009ನೇ ರೋಗಿಯ ಪ್ರಥಮ ಸಂಪರ್ಕಿತರಾಗಿದ್ದ ಮಂಡ್ಯ ತಾಲ್ಲೂಕಿನ ನಾಲ್ವರಲ್ಲಿ ಕೋವಿಡ್ ಪತ್ತೆಯಾಗಿದೆ.</p>.<p>11,012ನೇ ರೋಗಿಯ ಸಂಪರ್ಕಿತರಾಗಿರುವ ಮಳವಳ್ಳಿ ತಾಲ್ಲೂಕಿನ 12 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಳವಳ್ಳಿ ತಾಲ್ಲೂಕು 10,144ನೇ ರೋಗಿಯ ಸಂಪರ್ಕಿತರಾಗಿರುವ ತಾಲ್ಲೂಕಿನ ಮತ್ತೊಬ್ಬ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದೆ. 10,138ನೇ ರೋಗಿಯ ಪ್ರಥಮ ಸಂಪರ್ಕಿತರಾಗಿರುವ ಮದ್ದೂರಿನ ಇಬ್ಬರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.</p>.<p>ಮದ್ದೂರಿನ ಮತ್ತೊಬ್ಬರಲ್ಲೂ ಸೋಂಕು ಕಂಡುಬಂದಿದ್ದು ಅವರು 13,195ನೇ ರೋಗಿಯ ಪ್ರಥಮ ಸಂಪರ್ಕಿತರಾಗಿದ್ದಾರೆ. 15,254ನೇ ರೋಗಿಯ ಸಂಪರ್ಕದಿಂದ ಪಾಂಡವಪುರ ತಾಲ್ಲೂಕಿನ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಂಡುಬಂದಿದೆ. ಇವರಲ್ಲಿ ರೋಗ ಲಕ್ಷಣಗಳು ಕಂಡುಬಂದಿಲ್ಲ.</p>.<p>ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ (ಐಎಲ್ಐ) ಐವರಲ್ಲಿ ಕೋವಿಡ್–19 ಪತ್ತೆಯಾಗಿದೆ. ಅವರಲ್ಲಿ ಇಬ್ಬರು ಮಂಡ್ಯ ತಾಲ್ಲೂಕಿಗೆ ಸೇರಿದ್ದಾರೆ. ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆ.ಆರ್.ಪೇಟೆ ತಾಲ್ಲೂಕಿನ ತಲಾ ಒಬ್ಬಬ್ಬರಲ್ಲಿ ಸೋಂಕು ಪತ್ತೆಯಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ ಇಬ್ಬರು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 355 ಮಂದಿ ಗುಣಮುಖರಾಗಿದ್ದು 119 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಶಾಲೆಗೆ ಪೊಲೀಸ್ ಠಾಣೆ ಸ್ಥಳಾಂತರ</strong></p>.<p>ಮಳವಳ್ಳಿ ತಾಲ್ಲೂಕು ಹಲಗೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ಗೆ ಕೋವಿಡ್ ಹರಡಿದ್ದು ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಸಮೀಪದಲ್ಲೇ ಇರುವ ಸರ್ಕಾರಿ ಶಾಲೆಗೆ ಪೊಲೀಸ್ ಠಾಣೆ ಸ್ಥಳಾಂತರ ಮಾಡಲಾಗಿದ್ದು ಸಿಬ್ಬಂದಿ ಅಲ್ಲಿಂದಲೇ ಕೆಲಸ ಮಾಡುತ್ತಿದ್ದಾರೆ. ಅಗತ್ಯವಿದ್ದರೆ ಮಾತ್ರ ಜನರು ಠಾಣೆಗೆ ಬರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಶುಕ್ರವಾರ ಒಂದೇ ದಿನ 33 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 473ಕ್ಕೆ ಏರಿಕೆಯಾಗಿದೆ.</p>.<p>ಒಟ್ಟು ಸೋಂಕಿತರಲ್ಲಿ ನಾಲ್ಕು ಮಂದಿ ಬೆಂಗಳೂರಿನಿಂದ ಜಿಲ್ಲೆಗೆ ಪ್ರಯಾಣಿಸಿದ್ದಾರೆ. ಅವರಲ್ಲಿ ಇಬ್ಬರು ನಾಗಮಂಗಲ ತಾಲ್ಲೂಕು, ಒಬ್ಬರು ಮಂಡ್ಯ ಹಾಗೂ ಒಬ್ಬರು ಮಳವಳ್ಳಿ ತಾಲ್ಲೂಕಿಗೆ ಸೇರಿದ್ದಾರೆ. ಮೈಸೂರಿನಿಂದ ಮಳವಳ್ಳಿಗೆ ಬಂದ ಒಬ್ಬ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದೆ. ಇವರಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ.</p>.<p>ಬಿಹಾರದಿಂದ ಮದ್ದೂರಿಗೆ ಮರಳಿದ್ದ 23 ವರ್ಷದ ಯುವಕನಿಗೆ (ಪಿ–18036) ಕೋವಿಡ್ ಕಾಣಿಸಿಕೊಂಡಿದೆ. ಪಶ್ಚಿಮ ಬಂಗಾಳದಿಂದ ಮದ್ದೂರು ತಾಲ್ಲೂಕಿಗೆ ಮರಳಿದ್ದ ಮತ್ತೊಬ್ಬ 38 ವರ್ಷದ ವ್ಯಕ್ತಿಯಲ್ಲೂ (ಪಿ– 18065)ಸೋಂಕು ಪತ್ತೆಯಾಗಿದೆ. 11,009ನೇ ರೋಗಿಯ ಪ್ರಥಮ ಸಂಪರ್ಕಿತರಾಗಿದ್ದ ಮಂಡ್ಯ ತಾಲ್ಲೂಕಿನ ನಾಲ್ವರಲ್ಲಿ ಕೋವಿಡ್ ಪತ್ತೆಯಾಗಿದೆ.</p>.<p>11,012ನೇ ರೋಗಿಯ ಸಂಪರ್ಕಿತರಾಗಿರುವ ಮಳವಳ್ಳಿ ತಾಲ್ಲೂಕಿನ 12 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಳವಳ್ಳಿ ತಾಲ್ಲೂಕು 10,144ನೇ ರೋಗಿಯ ಸಂಪರ್ಕಿತರಾಗಿರುವ ತಾಲ್ಲೂಕಿನ ಮತ್ತೊಬ್ಬ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿದೆ. 10,138ನೇ ರೋಗಿಯ ಪ್ರಥಮ ಸಂಪರ್ಕಿತರಾಗಿರುವ ಮದ್ದೂರಿನ ಇಬ್ಬರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.</p>.<p>ಮದ್ದೂರಿನ ಮತ್ತೊಬ್ಬರಲ್ಲೂ ಸೋಂಕು ಕಂಡುಬಂದಿದ್ದು ಅವರು 13,195ನೇ ರೋಗಿಯ ಪ್ರಥಮ ಸಂಪರ್ಕಿತರಾಗಿದ್ದಾರೆ. 15,254ನೇ ರೋಗಿಯ ಸಂಪರ್ಕದಿಂದ ಪಾಂಡವಪುರ ತಾಲ್ಲೂಕಿನ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಂಡುಬಂದಿದೆ. ಇವರಲ್ಲಿ ರೋಗ ಲಕ್ಷಣಗಳು ಕಂಡುಬಂದಿಲ್ಲ.</p>.<p>ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ (ಐಎಲ್ಐ) ಐವರಲ್ಲಿ ಕೋವಿಡ್–19 ಪತ್ತೆಯಾಗಿದೆ. ಅವರಲ್ಲಿ ಇಬ್ಬರು ಮಂಡ್ಯ ತಾಲ್ಲೂಕಿಗೆ ಸೇರಿದ್ದಾರೆ. ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಕೆ.ಆರ್.ಪೇಟೆ ತಾಲ್ಲೂಕಿನ ತಲಾ ಒಬ್ಬಬ್ಬರಲ್ಲಿ ಸೋಂಕು ಪತ್ತೆಯಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ ಇಬ್ಬರು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 355 ಮಂದಿ ಗುಣಮುಖರಾಗಿದ್ದು 119 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p><strong>ಶಾಲೆಗೆ ಪೊಲೀಸ್ ಠಾಣೆ ಸ್ಥಳಾಂತರ</strong></p>.<p>ಮಳವಳ್ಳಿ ತಾಲ್ಲೂಕು ಹಲಗೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ಗೆ ಕೋವಿಡ್ ಹರಡಿದ್ದು ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಸಮೀಪದಲ್ಲೇ ಇರುವ ಸರ್ಕಾರಿ ಶಾಲೆಗೆ ಪೊಲೀಸ್ ಠಾಣೆ ಸ್ಥಳಾಂತರ ಮಾಡಲಾಗಿದ್ದು ಸಿಬ್ಬಂದಿ ಅಲ್ಲಿಂದಲೇ ಕೆಲಸ ಮಾಡುತ್ತಿದ್ದಾರೆ. ಅಗತ್ಯವಿದ್ದರೆ ಮಾತ್ರ ಜನರು ಠಾಣೆಗೆ ಬರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>