<p><strong>ಮಂಡ್ಯ:</strong> ನಗರದ ಹಾಲಹಳ್ಳಿ ಬಡಾವಣೆಯ 45 ವರ್ಷದ ಕೋವಿಡ್ ರೋಗಿಯೊಬ್ಬರು ಮಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.</p>.<p>ಮಿಮ್ಸ್ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಕೀಲಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 2 ದಿನಗಳ ನಂತರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಮ್ಲಜನಕ ಪೂರೈಕೆ ಸೌಲಭ್ಯವುಳ್ಳ ಹಾಸಿಗೆ ಅವರಿಗೆ ಮತ್ತೆ ಮಿಮ್ಸ್ ಆಸ್ಪತ್ರೆಯಲ್ಲಿ ಸಿಕ್ಕಿರಲಿಲ್ಲ. ಅವರಿಗೆ ತುರ್ತು ವೆಂಟಿಲೇಟರ್ ಅವಶ್ಯಕತೆ ಇತ್ತು.</p>.<p>ನಾಗಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ ದೊರೆಯಲಿದೆ ಎಂದು ತಿಳಿಸಿ ಮಿಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಆಂಬುಲೆನ್ಸ್ನಲ್ಲಿ ಕರೆದೊಯ್ಯುವಾಗ ಅವರು ಮಾರ್ಗಮಧ್ಯೆ ವ್ಯಕ್ತಿ ಮೃತಪಟ್ಟರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.</p>.<p>ವ್ಯಕ್ತಿಯ ಸಹೋದರ ಯೋಗೇಶ್ ಮಾತನಾಡಿ ‘ಆಂಬುಲೆನ್ಸ್ನಲ್ಲಿ ಆಮ್ಲಜನಕವಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಆಂಬುಲೆನ್ಸ್ ಸಿಲಿಂಡರ್ನಲ್ಲಿ ಆಮ್ಲಜನಕ ಖಾಲಿಯಾಗಿದ್ದ ಕಾರಣ ಅಣ್ಣ ಮೃತಪಟ್ಟರು. ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ’ ಎಂದರು.</p>.<p>‘ವ್ಯಕ್ತಿ ಸಾವಿನ ವಿವರ ಸೋಮವಾರದ ಆರೋಗ್ಯ ವರದಿಯಲ್ಲಿ ದಾಖಲಾಗಿಲ್ಲ, ಮಂಗಳವಾರ ಪರಿಶೀಲಿಸಿ ಮಾಹಿತಿ ನೀಡಲಾಗುವುದು’ ಎಂದು ಮಿಮ್ಸ್ ವೈದ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರದ ಹಾಲಹಳ್ಳಿ ಬಡಾವಣೆಯ 45 ವರ್ಷದ ಕೋವಿಡ್ ರೋಗಿಯೊಬ್ಬರು ಮಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.</p>.<p>ಮಿಮ್ಸ್ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಕೀಲಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 2 ದಿನಗಳ ನಂತರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಮ್ಲಜನಕ ಪೂರೈಕೆ ಸೌಲಭ್ಯವುಳ್ಳ ಹಾಸಿಗೆ ಅವರಿಗೆ ಮತ್ತೆ ಮಿಮ್ಸ್ ಆಸ್ಪತ್ರೆಯಲ್ಲಿ ಸಿಕ್ಕಿರಲಿಲ್ಲ. ಅವರಿಗೆ ತುರ್ತು ವೆಂಟಿಲೇಟರ್ ಅವಶ್ಯಕತೆ ಇತ್ತು.</p>.<p>ನಾಗಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ ದೊರೆಯಲಿದೆ ಎಂದು ತಿಳಿಸಿ ಮಿಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಆಂಬುಲೆನ್ಸ್ನಲ್ಲಿ ಕರೆದೊಯ್ಯುವಾಗ ಅವರು ಮಾರ್ಗಮಧ್ಯೆ ವ್ಯಕ್ತಿ ಮೃತಪಟ್ಟರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.</p>.<p>ವ್ಯಕ್ತಿಯ ಸಹೋದರ ಯೋಗೇಶ್ ಮಾತನಾಡಿ ‘ಆಂಬುಲೆನ್ಸ್ನಲ್ಲಿ ಆಮ್ಲಜನಕವಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಆಂಬುಲೆನ್ಸ್ ಸಿಲಿಂಡರ್ನಲ್ಲಿ ಆಮ್ಲಜನಕ ಖಾಲಿಯಾಗಿದ್ದ ಕಾರಣ ಅಣ್ಣ ಮೃತಪಟ್ಟರು. ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ’ ಎಂದರು.</p>.<p>‘ವ್ಯಕ್ತಿ ಸಾವಿನ ವಿವರ ಸೋಮವಾರದ ಆರೋಗ್ಯ ವರದಿಯಲ್ಲಿ ದಾಖಲಾಗಿಲ್ಲ, ಮಂಗಳವಾರ ಪರಿಶೀಲಿಸಿ ಮಾಹಿತಿ ನೀಡಲಾಗುವುದು’ ಎಂದು ಮಿಮ್ಸ್ ವೈದ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>