<p>ಮಂಡ್ಯ: ಬುಧವಾರ ಜಿಲ್ಲೆಯಲ್ಲಿ ಹೊಸದಾಗಿ 7 ಮಂದಿಗೆ ಕೋವಿಡ್–19 ಪತ್ತೆಯಾಗಿದ್ದು ಒಟ್ಟು ರೋಗಿಗಳ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.</p>.<p>ಎಲ್ಲರೂ ಮುಂಬೈ ವಲಸಿಗರಾಗಿದ್ದು 6 ಮಂದಿ ಕೆ.ಆರ್.ಪೇಟೆ ತಾಲ್ಲೂಕಿಗೆ ಸೇರಿದ್ದಾರೆ. ಒಬ್ಬ ವ್ಯಕ್ತಿ ಪಾಂಡವಪುರ ತಾಲ್ಲೂಕಿಗೆ ಸೇರಿದ್ದಾರೆ. ಇವರು ರೋಗ ಸಂಬಂಧಿ ಕಾಯಿಲೆಯಿಂದ (ಐಎಲ್ಐ) ಬಳಲುತ್ತಿದ್ದರು. ಜೂನ್ ತಿಂಗಳ ಮೊದಲ ವಾರದಲ್ಲಿ ಬಂದ ಇವರನ್ನು ಹಾಸ್ಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.</p>.<p>ಕೋವಿಡ್–19ನಿಂದ ಗುಣಮುಖರಾದ 6 ಮಂದಿಯನ್ನು ಬುಧವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಟ್ಟು 288 ಕೋವಿಡ್ ಮುಕ್ತರಾಗಿದ್ದು ಇನ್ನು ಕೇವಲ 61 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಜಿಲ್ಲೆಯಲ್ಲಿ ಕೋವಿಡ್ ರೋಗಿಗಳು ಚಿಕತ್ಸೆಗೆ ಸ್ಪಂದಿಸುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಮುಕ್ತರಾಗಿದ್ದು ಈಗ ಮನೆಗೆ ತೆರಳಿದ್ದಾರೆ. ಹೀಗಾಘಿ ಜಿಲ್ಲೆಯ ಜನರು ಭಯಪಡಬೇಕಾಗಿಲ್ಲ. ಆದರೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಬುಧವಾರ ಜಿಲ್ಲೆಯಲ್ಲಿ ಹೊಸದಾಗಿ 7 ಮಂದಿಗೆ ಕೋವಿಡ್–19 ಪತ್ತೆಯಾಗಿದ್ದು ಒಟ್ಟು ರೋಗಿಗಳ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.</p>.<p>ಎಲ್ಲರೂ ಮುಂಬೈ ವಲಸಿಗರಾಗಿದ್ದು 6 ಮಂದಿ ಕೆ.ಆರ್.ಪೇಟೆ ತಾಲ್ಲೂಕಿಗೆ ಸೇರಿದ್ದಾರೆ. ಒಬ್ಬ ವ್ಯಕ್ತಿ ಪಾಂಡವಪುರ ತಾಲ್ಲೂಕಿಗೆ ಸೇರಿದ್ದಾರೆ. ಇವರು ರೋಗ ಸಂಬಂಧಿ ಕಾಯಿಲೆಯಿಂದ (ಐಎಲ್ಐ) ಬಳಲುತ್ತಿದ್ದರು. ಜೂನ್ ತಿಂಗಳ ಮೊದಲ ವಾರದಲ್ಲಿ ಬಂದ ಇವರನ್ನು ಹಾಸ್ಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.</p>.<p>ಕೋವಿಡ್–19ನಿಂದ ಗುಣಮುಖರಾದ 6 ಮಂದಿಯನ್ನು ಬುಧವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಟ್ಟು 288 ಕೋವಿಡ್ ಮುಕ್ತರಾಗಿದ್ದು ಇನ್ನು ಕೇವಲ 61 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ಜಿಲ್ಲೆಯಲ್ಲಿ ಕೋವಿಡ್ ರೋಗಿಗಳು ಚಿಕತ್ಸೆಗೆ ಸ್ಪಂದಿಸುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಮುಕ್ತರಾಗಿದ್ದು ಈಗ ಮನೆಗೆ ತೆರಳಿದ್ದಾರೆ. ಹೀಗಾಘಿ ಜಿಲ್ಲೆಯ ಜನರು ಭಯಪಡಬೇಕಾಗಿಲ್ಲ. ಆದರೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>