ತಿ. ನರಸೀಪುರ ತಾಲ್ಲೂಕಿನ ಮುಸಕನಕೊಪ್ಪಲು ಗ್ರಾಮದ 50 ವರ್ಷದ ವ್ಯಕ್ತಿ, ಬೆಂಗಳೂರಿನಲ್ಲಿ ನೆಲೆಸಿದ್ದರು. ಅಲ್ಲಿಂದ ಹೊರಟು, ಮಂಗಳವಾರ ರಾತ್ರಿ ಹೊನಗನಹಳ್ಳಿಯಲ್ಲಿರುವ ತಮ್ಮ ಮಾವನ ಮನೆಯಲ್ಲಿ ತಂಗಿದ್ದರು. ಮಧ್ಯರಾತ್ರಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.