<p><strong>ಮದ್ದೂರು:</strong> ‘ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವನ ಪರ್ಯಂತ ಶಿಕ್ಷೆಯ ತೀರ್ಪು ನೀಡಿದ್ದು, ನ್ಯಾಯಾಲಯದ ತೀರ್ಪಿಗೆ ಯಾರೇ ಆದರೂ ತಲೆಬಾಗಬೇಕು. ಗೌರವಿಸಬೇಕಾಗುತ್ತದೆ’ ಎಂದು ಶಾಸಕ ಕೆ.ಎಂ ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ಹೂತಗೆರೆ ಗ್ರಾಮದ ಬಳಿಯಿರುವ ಮದ್ದೂರಿನ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ₹1.12 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.</p>.<p>‘ಪಟ್ಟಣದ ಪೇಟೆ ಬೀದಿ ವಿಸ್ತರಣೆ ಕಾಮಗಾರಿ ಮುಂದಿನ ಮೂರರಿಂದ ನಾಲ್ಕು ತಿಂಗಳ ಬಳಿಕ ಆರಂಭವಾಗುವುದು. ಪಟ್ಟಣ ಬೆಳೆಯುತ್ತಿರುವುದರಿಂದ ಕಸವೂ ಹೆಚ್ಚಾಗುತ್ತಿದೆ. ಆದ್ದರಿಂದ ಈ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ’ ಎಂದರು.</p>.<p>ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಆರೋಪದ ಹಿನ್ನೆಲೆಯಲ್ಲಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಭಾಗವಹಿಸಿಸುವುದಾಗಿ ತಿಳಿಸಿದರು.</p>.<p>ಈ ವೇಳೆ ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ಪುರಸಭಾ ಸದಸ್ಯರು, ಮುಖಂಡರಾದ ದುಂಡನಹಳ್ಳಿ ಯೋಗೇಶ್, ಪಿಡಿಒ ಮಧುಸೂದನ್ ಸೇರಿದಂತೆ ಪುರಸಭೆಯ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ‘ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವನ ಪರ್ಯಂತ ಶಿಕ್ಷೆಯ ತೀರ್ಪು ನೀಡಿದ್ದು, ನ್ಯಾಯಾಲಯದ ತೀರ್ಪಿಗೆ ಯಾರೇ ಆದರೂ ತಲೆಬಾಗಬೇಕು. ಗೌರವಿಸಬೇಕಾಗುತ್ತದೆ’ ಎಂದು ಶಾಸಕ ಕೆ.ಎಂ ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ಹೂತಗೆರೆ ಗ್ರಾಮದ ಬಳಿಯಿರುವ ಮದ್ದೂರಿನ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಪರ್ಕಿಸುವ ₹1.12 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.</p>.<p>‘ಪಟ್ಟಣದ ಪೇಟೆ ಬೀದಿ ವಿಸ್ತರಣೆ ಕಾಮಗಾರಿ ಮುಂದಿನ ಮೂರರಿಂದ ನಾಲ್ಕು ತಿಂಗಳ ಬಳಿಕ ಆರಂಭವಾಗುವುದು. ಪಟ್ಟಣ ಬೆಳೆಯುತ್ತಿರುವುದರಿಂದ ಕಸವೂ ಹೆಚ್ಚಾಗುತ್ತಿದೆ. ಆದ್ದರಿಂದ ಈ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ’ ಎಂದರು.</p>.<p>ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಆರೋಪದ ಹಿನ್ನೆಲೆಯಲ್ಲಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಭಾಗವಹಿಸಿಸುವುದಾಗಿ ತಿಳಿಸಿದರು.</p>.<p>ಈ ವೇಳೆ ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ಪುರಸಭಾ ಸದಸ್ಯರು, ಮುಖಂಡರಾದ ದುಂಡನಹಳ್ಳಿ ಯೋಗೇಶ್, ಪಿಡಿಒ ಮಧುಸೂದನ್ ಸೇರಿದಂತೆ ಪುರಸಭೆಯ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>