ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಮೂವರು ಸಾವು: 213 ಮಂದಿಗೆ ಸೋಂಕು

Last Updated 9 ಸೆಪ್ಟೆಂಬರ್ 2020, 16:27 IST
ಅಕ್ಷರ ಗಾತ್ರ

ಮಂಡ್ಯ: ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ರೋಗಿಗಳು ಮಂಗಳವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

ಮಂಡ್ಯ ತಾಲ್ಲೂಕಿನ 47 ವರ್ಷದ ಮಹಿಳೆ, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರಾಮನಗರ ಜಿಲ್ಲೆ, ಚನ್ನ‍ಪಟ್ಟಣ ತಾಲ್ಲೂಕಿನ 40 ವರ್ಷದ ವ್ಯಕ್ತಿ, 44 ವರ್ಷದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕೋವಿಡ್‌ ಕಾರ್ಯಸೂಚಿ ಅನ್ವಯ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮಂಗಳವಾರ ಒಂದೇದಿನ 213 ಮಂದಿಯಲ್ಲಿ ಕೋವಿಡ್‌–19 ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,260ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲ್ಲೂಕಿನ 65 ಮಂದಿ, ಕೆ.ಆರ್‌.ಪೇಟೆ 51, ಪಾಂಡವಪುರ 32, ಶ್ರೀರಂಗಪಟ್ಟಣ 21, ಮದ್ದೂರು 20, ನಾಗಮಂಗಲ 18, ಮಳವಳ್ಳಿ ತಾಲ್ಲೂಕಿನ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಕೋವಿಡ್‌ನಿಂದ ಗುಣಮುಖರಾದ 130 ಮಂದಿಯನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 53, ಶ್ರೀರಂಗಪಟ್ಟಣ 24, ನಾಗಮಂಗಲ 20, ಮದ್ದೂರು, ನಾಗಮಂಗಲ ತಾಲ್ಲೂಕಿನ ತಲಾ 10 ಮಂದಿ, ಕೆ.ಆರ್‌.ಪೇಟೆ ತಾಲ್ಲೂಕಿನ 8 ಮಂದಿಯನ್ನು ಬಿಡುಗಡೆ ಮಾಡಲಾಯಿತು. ಒಟ್ಟು ರೋಗಿಗಳಲ್ಲಿ 5,195 ಗುಣಮುಖರಾಗಿದ್ದಾರೆ. 1,984 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 7,260

ಸಕ್ರಿಯ ಪ್ರಕರಣ: 1,984

ಏರಿಕೆ: 213

ಗುಣಮುಖ: 5,195

ಏರಿಕೆ: 410

ಸಾವು: 79

ಏರಿಕೆ: 03

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT