<p><strong>ಮಂಡ್ಯ:</strong> ಮಳವಳ್ಳಿ ತಾಲ್ಲೂಕು, ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರಿಗೆ ಕೋವಿಡ್-19 ದೃಢಪಟ್ಟಿದೆ.</p>.<p>ಬಲಗಾಲಿನಲ್ಲಿ ಆಗಿದ್ದ ಗಾಯದ ಸೋಂಕಿನಿಂದ ಅವರು ಬಳಲುತ್ತಿದ್ದರು. ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದ ಅವರು ನಿತ್ಯ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದರು.</p>.<p>85 ವರ್ಷ ವಯಸ್ಸಿನ ಕಾಮೇಗೌಡರು ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ.</p>.<p>'ಚಿಕ್ಕವನಾಗಿದ್ದಾಗಿನಿಂದಲೂ ನನ್ನ ಪ್ರಪಂಚ ಬೆಟ್ಟ, ಕೆರೆಗೆ ಸೀಮಿತವಾಗಿದೆ. ಕೆರೆ, ಗಿಡ ಬಿಟ್ಟರೇ ಬೇರೇನೂ ಗೊತ್ತಿಲ್ಲ' ಎನ್ನುತ್ತಿದ್ದ ಕಾಮೇಗೌಡರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಹ ಕೊಂಡಾಡಿದ್ದರು.</p>.<p>ಮಳವಳ್ಳಿ ಪಟ್ಟಣದಿಂದ 10 ಕಿ.ಮೀ ದೂರದಲ್ಲಿ ಲಿಂಗಾಕಾರದಲ್ಲಿರುವ ಈ ಪರ್ವತವನ್ನು ಕುಂದೂರು ಬೆಟ್ಟ ಎಂದೂ ಕರೆಯುತ್ತಾರೆ. ಬೆಟ್ಟದ ತಪ್ಪಲಲ್ಲಿ ದಾಸನದೊಡ್ಡಿ, ಪಂಡಿತಹಳ್ಳಿ, ಹೊಸದೊಡ್ಡಿ, ತಿರುಮಳ್ಳಿ, ಪಣತಹಳ್ಳಿ ಸೇರಿ ಹತ್ತೂರುಗಳಿವೆ. ಕಳೆದ 40 ವರ್ಷಗಳಿಂದ ಈ ಬೆಟ್ಟಕ್ಕೆ ಕಾವಲುಗಾರನಂತಿರುವ ದಾಸನದೊಡ್ಡಿಯ ಕಾಮೇಗೌಡ, ಬೆಟ್ಟದ ಮೇಲೆ ಕಟ್ಟೆ, ಕಾಲುವೆ, ರಸ್ತೆ ನಿರ್ಮಿಸಿದ್ದಾರೆ. ಬೆಟ್ಟದ ತಪ್ಪಲಲ್ಲಿ ಸಾವಿರಾರು ಗಿಡ ನೆಟ್ಟು ಬೆಳೆಸಿರುವ ಅವರು ಈ ಭಾಗದಲ್ಲಿ ‘ಪರಿಸರ ಸಂರಕ್ಷಕ’ ಎಂದೇ ಖ್ಯಾತಿ ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮಳವಳ್ಳಿ ತಾಲ್ಲೂಕು, ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರಿಗೆ ಕೋವಿಡ್-19 ದೃಢಪಟ್ಟಿದೆ.</p>.<p>ಬಲಗಾಲಿನಲ್ಲಿ ಆಗಿದ್ದ ಗಾಯದ ಸೋಂಕಿನಿಂದ ಅವರು ಬಳಲುತ್ತಿದ್ದರು. ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದ ಅವರು ನಿತ್ಯ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದರು.</p>.<p>85 ವರ್ಷ ವಯಸ್ಸಿನ ಕಾಮೇಗೌಡರು ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ.</p>.<p>'ಚಿಕ್ಕವನಾಗಿದ್ದಾಗಿನಿಂದಲೂ ನನ್ನ ಪ್ರಪಂಚ ಬೆಟ್ಟ, ಕೆರೆಗೆ ಸೀಮಿತವಾಗಿದೆ. ಕೆರೆ, ಗಿಡ ಬಿಟ್ಟರೇ ಬೇರೇನೂ ಗೊತ್ತಿಲ್ಲ' ಎನ್ನುತ್ತಿದ್ದ ಕಾಮೇಗೌಡರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಹ ಕೊಂಡಾಡಿದ್ದರು.</p>.<p>ಮಳವಳ್ಳಿ ಪಟ್ಟಣದಿಂದ 10 ಕಿ.ಮೀ ದೂರದಲ್ಲಿ ಲಿಂಗಾಕಾರದಲ್ಲಿರುವ ಈ ಪರ್ವತವನ್ನು ಕುಂದೂರು ಬೆಟ್ಟ ಎಂದೂ ಕರೆಯುತ್ತಾರೆ. ಬೆಟ್ಟದ ತಪ್ಪಲಲ್ಲಿ ದಾಸನದೊಡ್ಡಿ, ಪಂಡಿತಹಳ್ಳಿ, ಹೊಸದೊಡ್ಡಿ, ತಿರುಮಳ್ಳಿ, ಪಣತಹಳ್ಳಿ ಸೇರಿ ಹತ್ತೂರುಗಳಿವೆ. ಕಳೆದ 40 ವರ್ಷಗಳಿಂದ ಈ ಬೆಟ್ಟಕ್ಕೆ ಕಾವಲುಗಾರನಂತಿರುವ ದಾಸನದೊಡ್ಡಿಯ ಕಾಮೇಗೌಡ, ಬೆಟ್ಟದ ಮೇಲೆ ಕಟ್ಟೆ, ಕಾಲುವೆ, ರಸ್ತೆ ನಿರ್ಮಿಸಿದ್ದಾರೆ. ಬೆಟ್ಟದ ತಪ್ಪಲಲ್ಲಿ ಸಾವಿರಾರು ಗಿಡ ನೆಟ್ಟು ಬೆಳೆಸಿರುವ ಅವರು ಈ ಭಾಗದಲ್ಲಿ ‘ಪರಿಸರ ಸಂರಕ್ಷಕ’ ಎಂದೇ ಖ್ಯಾತಿ ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>