ಮಳವಳ್ಳಿ ಪಟ್ಟಣದಿಂದ 10 ಕಿ.ಮೀ ದೂರದಲ್ಲಿ ಲಿಂಗಾಕಾರದಲ್ಲಿರುವ ಈ ಪರ್ವತವನ್ನು ಕುಂದೂರು ಬೆಟ್ಟ ಎಂದೂ ಕರೆಯುತ್ತಾರೆ. ಬೆಟ್ಟದ ತಪ್ಪಲಲ್ಲಿ ದಾಸನದೊಡ್ಡಿ, ಪಂಡಿತಹಳ್ಳಿ, ಹೊಸದೊಡ್ಡಿ, ತಿರುಮಳ್ಳಿ, ಪಣತಹಳ್ಳಿ ಸೇರಿ ಹತ್ತೂರುಗಳಿವೆ. ಕಳೆದ 40 ವರ್ಷಗಳಿಂದ ಈ ಬೆಟ್ಟಕ್ಕೆ ಕಾವಲುಗಾರನಂತಿರುವ ದಾಸನದೊಡ್ಡಿಯ ಕಾಮೇಗೌಡ, ಬೆಟ್ಟದ ಮೇಲೆ ಕಟ್ಟೆ, ಕಾಲುವೆ, ರಸ್ತೆ ನಿರ್ಮಿಸಿದ್ದಾರೆ. ಬೆಟ್ಟದ ತಪ್ಪಲಲ್ಲಿ ಸಾವಿರಾರು ಗಿಡ ನೆಟ್ಟು ಬೆಳೆಸಿರುವ ಅವರು ಈ ಭಾಗದಲ್ಲಿ ‘ಪರಿಸರ ಸಂರಕ್ಷಕ’ ಎಂದೇ ಖ್ಯಾತಿ ಗಳಿಸಿದ್ದಾರೆ.