ಪುಣೆಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ಮಹಿಳೆ ಭಾನುವಾರ ಮೃತಪಟ್ಟಿದ್ದರು. ಮೃತದೇಹದೊಂದಿಗೆ ಜಿಲ್ಲೆಯತ್ತ ಹೊರಟಿದ್ದ ಕುಟುಂಬ ಸದಸ್ಯರನ್ನು ರಾಜ್ಯ ಗಡಿಯ ಚೆಕ್ಪೋಸ್ಟ್ನಲ್ಲಿ ತಡೆದಿದ್ದಾರೆ. ಮಂಡ್ಯ ಜಿಲ್ಲಾಡಳಿತಕ್ಕೆ ವಿಷಯ ತಿಳಿಸಿದಾಗ ಮೃತದೇಹವನ್ನು ಕೋವಿಡ್ ಪರೀಕ್ಷೆ ಇಲ್ಲದೆ ಕಳುಹಿಸದಂತೆ ಸೂಚಿಸಿದ್ದಾರೆ.